ಹೆದ್ದಾರಿಗೆ ಡಾಮರು: ಕೊನೆಗೂ ಧೂಳಿನ ಸಮಸ್ಯೆಯಿಂದ ಮುಕ್ತಿ
Team Udayavani, Sep 26, 2018, 1:35 AM IST
ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಮಂಗಳವಾರ ಮತ್ತೆ ಡಾಮರು ಹಾಕುವ ಪ್ರಕ್ರಿಯೆ ನಡೆಯಿತು. ಈ ಬಗ್ಗೆ ಸಂತೋಷ್ ಸುವರ್ಣ ಹಾಗೂ ಇತರರು ಹೋರಾಟ ಸಮಿತಿ ಹುಟ್ಟು ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಪುರಸಭೆ ವ್ಯಾಪ್ತಿ ಆರಂಭವಾಗುವಲ್ಲಿಂದಲೇ ಹದಗೆಟ್ಟ ರಸ್ತೆ ಕುಂದಾಪುರ ನಗರಕ್ಕೆ ಬಿಳಿಧೂಳಿನ ಸ್ವಾಗತ ನೀಡುತ್ತದೆ. ಬಸ್ರೂರು ಮೂರುಕೈಯಲ್ಲಿ ಶಿವಮೊಗ್ಗಕ್ಕೆ ಹೋಗುವ ತಿರುವಿನಲ್ಲೂ ಹದಗೆಟ್ಟಿದೆ. ಸಂಗಮ್ವರೆಗೂ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಮಳೆ ಬಂದಾಗ ರಸ್ತೆಯ ಹೊಂಡಗಳಲ್ಲಿ ನೀರು ತುಂಬಿ ರಸ್ತೆ-ಹೊಂಡ, ರಸ್ತೆ ಅಂಚು ತಿಳಿಯದೆ ವಾಹನ ಸವಾರರು ತ್ರಾಸ ಪಡುತ್ತಾರೆ. ಮಳೆ ಬಂದಾಗ ಇಂತಹ ದುರವಸ್ಥೆಯಾದರೆ ಬಿಸಿಲಿದ್ದಾಗ ಈ ಪ್ರದೇಶವಿಡೀ ಧೂಳುಮಯ. ನಡೆದಾಡಲೂ ಅಸಾಧ್ಯ. ಜತೆಗೆ ಅಕ್ಕಪಕ್ಕದ ಅಂಗಡಿಯವರಿಗೂ ಧೂಳು ತಿನ್ನುವ ಸಂಕಷ್ಟ. ಇದರಿಂದ ಕಾಯಿಲೆ ಭೀತಿ ಬೇರೆ. ರಾಷ್ಟ್ರೀಯ ಹೆದ್ದಾರಿಯಾದ ಕಾರಣ ವಾಹನಗಳ ಓಡಾಟ ನಿಲ್ಲುವುದೇ ಇಲ್ಲ. ಹಾಗೆ ವಾಹನ ಹೋದಾಗಲೆಲ್ಲ ಧೂಳು ಹಾರಾಡುತ್ತಿರುತ್ತದೆ.
ಈ ಬಗ್ಗೆ ಉದಯವಾಣಿ ಸೆ.13ರಂದು ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ಎರಡನೇ ದಿನವೇ ನವಯುಗ ಕಂಪನಿ ಡಾಮರು ಹಾಸುವ ಕಾರ್ಯ ನಡೆಸಿತ್ತು. ಆದರೆ ಐಆರ್ಬಿ ಕಂಪನಿ ಡಾಮರು ಹಾಕಿರಲಿಲ್ಲ. ಆದರೆ ಪೂರ್ಣ ಡಾಮರೀಕರಣ ನಡೆದಿರಲಿಲ್ಲ. ಇದಕ್ಕಾಗಿ ಸ್ಥಳೀಯರಿಂದ ಪ್ರತಿಭಟನೆ ನಡೆಸುವ ಯೋಚನೆ ಹಾಕಿಕೊಳ್ಳಲಾಗಿತ್ತು. ಸಂತೋಷ್ ಸುವರ್ಣ ಹಾಗೂ ಇತರರು ಪ್ರತಿಭಟನೆ ಕುರಿತು ಕುಂದಾಪುರ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್ ಅವರನ್ನು ಭೇಟಿ ಮಾಡಿದರು. ಹೆದ್ದಾರಿ ಸಮಸ್ಯೆ ತನ್ನ ಗಮನಕ್ಕೂ ಬಂದಿದ್ದು ಅನೇಕರಿಗೆ ಇದರಿಂದ ಅನನುಕೂಲವಾಗುತ್ತಿದೆ ಎಂದ ಅವರು ಗುತ್ತಿಗೆದಾರ ಸಂಸ್ಥೆಯವರನ್ನು ಸಂಪರ್ಕಿಸಿದರು. ಡಿವೈಎಸ್ಪಿ ಅವರ ಮನವಿಗೆ ಸ್ಪಂದಿಸಿದ ಗುತ್ತಿಗೆದಾರ ಸಂಸ್ಥೆಯವರು ಡಾಮರು ಹಾಕುವ ವ್ಯವಸ್ಥೆ ಮಾಡಿದ್ದಾರೆ. ಫ್ಲೈ ಓವರ್ ಕುರಿತು ದೂರು ಬಂದಾಗ ಸಹಾಯಕ ಕಮಿಷನರ್ ಟಿ. ಭೂಬಾಲನ್ ಅವರು ಸ್ಪಂದಿಸಿ ನೊಟಿಸ್ ನೀಡಿ ಕೇಸು ದಾಖಲಿಸಿ ಮಾರ್ಚ್ ಒಳಗೆ ಕಾಮಗಾರಿ ಪೂರೈಸುವಂತೆ ತೀರ್ಪು ನೀಡಿದ್ದರು. ಅಂತೆಯೇ ಮಳೆಗಾಲದಲ್ಲಿ ಗುಂಡಿ ಮುಚ್ಚಲು ಸೂಚಿಸಿದ್ದರು. ಇದೀಗ ಇನ್ನೊಬ್ಬ ಅಧಿಕಾರಿಯೂ ಜನರ ಮನವಿಗೆ ಓಗೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್