ಹೆದ್ದಾರಿ ಅವ್ಯವಸ್ಥೆ : ಪಾದಯಾತ್ರೆ ಮೂಲಕ ಜನಜಾಗೃತಿಗೆ ನಿರ್ಧಾರ
ಉಚ್ಚಿಲ - ಹೆಜಮಾಡಿ ಪಾದಯಾತ್ರೆ ಮೂಲಕ ಜನಜಾಗೃತಿಗೆ ನಿರ್ಧಾರ
Team Udayavani, Oct 7, 2019, 5:27 AM IST
ಪಡುಬಿದ್ರಿ: ಹೆದ್ದಾರಿ ಕಾಮಗಾರಿಗಳ ಅಸಮರ್ಪಕ, ಅವೈಜ್ಞಾನಿಕ ನಿರ್ವಹಣೆಯನ್ನು ಖಂಡಿಸಿ ಚುರುಕುಗೊಳಿಸುವಂತೆ ಆಗ್ರಹಿಸಿ ಶೀಘ್ರವೇ ಎಲ್ಲ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜಕೀಯೇತರವಾಗಿ ಉಚ್ಚಿಲದಿಂದ ಹೆಜಮಾಡಿ ವರೆಗೆ ಪಾದಯಾತ್ರೆಯ ನಡೆಸಲಾಗುವುದು ಎಂದು ಪಂಚಾಯತ್ ಅಧ್ಯಕ್ಷರ ರಾಜ್ಯ ಒಕ್ಕೂಟದ ಉಪಾಧ್ಯಕ್ಷ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಈ ಹಿಂದೆಯೂ ಹೆದ್ದಾರಿ ನಿರ್ವಹಣೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಮುಗಿಸುವ ಕುರಿತಾದ ಮಾತುಕತೆಗಳಉ ಹಿಂದಿನ ಜಿಲ್ಲಾಧಿಕಾರಿ, ಕುಂದಾಪುರ ಸಹಾಯಕ ಕಮಿಷನರ್, ಎಸ್ಪಿ ಸಹಿತ ಜನಪ್ರತಿನಿಧಿಗಳನ್ನೊಳಗೊಂಡಂತೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿತ್ತು. ಇದೀಗ ಆ ಮಾತುಕತೆಯೂ ಮುರಿದುಬಿದ್ದಿದೆ. ಹೆದ್ದಾರಿ ಚತುಃಷ್ಪಥ ಕಾಮಗಾರಿಯಷ್ಟನ್ನೇ ಮಾಡಿ ಕೈತೊಳೆದುಕೊಂಡಿರುವ ನವಯುಗ ಕಂಪೆನಿಯು ಹೆದ್ದಾರಿಯಲ್ಲಿನ ಗುಂಡಿಗಳನ್ನೂ ಮುಚ್ಚದೇ ಕಣ್ಮುಚ್ಚಿ ಕುಳಿತಿದೆ.
ಆರ್ಥಿಕ ಸಂಕಷ್ಟದ ನೆಪವೊಡ್ಡಿ ಕಾಮಗಾರಿಗಳಾವುದನ್ನೂ ನಿರ್ವಹಿಸದೇ ಕಾಲಹರಣಗೈಯ್ಯುತ್ತಿದೆ ಎಂದು ಆರೋಪಿಸಿದ್ದಾರೆ.
ಸರ್ವಿಸ್ ರಸ್ತೆ, ಟೋಲ್ಪ್ಲಾಜಾದ ಬಳಿ ಸ್ಥಳೀಯರಿಗೆ ಅನುಕೂಲ ವಾಗುವಂತೆ ಸ್ಕೈವಾಕ್ನಿರ್ಮಾಣ ಮತ್ತಿತರ ಪೂರಕ ಕಾಮಗಾರಿಗಳನ್ನು ನಿರ್ವಹಿಸಲು ನವಯುಗ ನಿರ್ಮಾಣ ಕಂಪೆನಿಗೆ 10 ದಿನಗಳ ಕಾಲಾವಕಾಶ ನೀಡಲಿದ್ದೇವೆ. ನಿರ್ಲಕ್ಷ é ಮುಂದುವರಿದರೆ ಜನರ ಆಕ್ರೋಶ ಎದುರಿಸಬೇಕಾದೀತು ಎಂದು ಪತ್ರಿಕಾಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ