ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರಣಾಂತಿಕ ಹೊಂಡ -ಗುಂಡಿಗಳು, ವಾಹನ ಸವಾರರ ಆಕ್ರೋಶ

ನಿತ್ಯ ಸವಾರರ ವ್ಯಾಪಕ ಆಕ್ರೋಶ

Team Udayavani, Jul 17, 2022, 3:46 PM IST

HIGHWAY2

ಕಟಪಾಡಿ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರಣಾಂತಿಕ ಹೊಂಡ-ಗುಂಡಿಗಳು ಅಪಾಯವನ್ನು ಆಹ್ವಾನಿಸುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಟಪಾಡಿಯಿಂದ ಉಡುಪಿಯತ್ತ ತೆರಳುವ ಪಶ್ಚಿಮ ಪಾರ್ಶ್ಶ್ವ ದ ಇಳಿಜಾರು ಪ್ರದೇಶದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹದಾಕಾರದ ಹೊಂಡ-ಗುಂಡಿಯು ಜೀವ ಬಲಿಗಾಗಿ ಬಾಯ್ದೆರೆದು ಕಾದು ಕುಳಿತಂತಾಗಿದೆ. ಸಮಾನಾಂತರವಾಗಿ ಅತೀವೇಗದಿಂದ ವಾಹನಗಳ ಸಂಚರಿಸುವ ಸಂದರ್ಭ ಅಂದಾಜು ತಪ್ಪುವ ವಾಹನ ಚಾಲಕರು ಕಡೆ ಕ್ಷಣದಲ್ಲಿ ಗುಂಡಿ ತಪ್ಪಿಸುವ ಭರದಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಮಳೆ ಬಂದಾಗ ನೀರು ತುಂಬಿದ ಗುಂಡಿಯು ಗಮನಕ್ಕೆ ಬಾರದೆ ವಾಹನಗಳು ಬಿಡಿ ಭಾಗಗಳನ್ನು ಕಳಚಿಕೊಳ್ಳುವ ದುಸ್ಥಿತಿಯನ್ನು ಅಲ್ಲಲ್ಲಿ ಕಾಣುವಂತಾಗಿದೆ. ಕತ್ತಲಾದ ಬಳಿಕ ದ್ವಿಚಕ್ರ, ಲಘು ವಾಹನ ಸವಾರರಿಗೆ ಹೊಂಡಗುಂಡಿಯಿಂದ ಕೂಡಿದ ರಾಷ್ಟ್ರೀಯ ಹೆದ್ದಾರಿಯ ಸಂಚಾರವು ಬಲು ಅಪಾಯಕಾರಿಯಾಗಿ ಪರಿಣಮಿಸಿದೆ. ವಾಹನ ಚಾಲಕರೂ ಈ ಬಗ್ಗೆ ಎಚ್ಚರಿಕೆಯಿಂದ ವಾಹನವನ್ನು ಚಲಾಯಿಸಬೇಕಿದೆ. ಎಚ್ಚರ ತಪ್ಪಿದಲ್ಲಿ ಅಪಾಯ ಮೈಮೇಲೆ ಎಳೆದುಕೊಂಡಂತಾಗಲಿದೆ.

ಪ್ರಮುಖವಾಗಿ ಕಟಪಾಡಿ, ಉದ್ಯಾವರ, ಪಾಂಗಾಳ, ಕಾಪು, ಉಚ್ಚಿಲ ಪ್ರದೇಶಗಳಲ್ಲಿ ಈ ಬೃಹತ್ ಗಾತ್ರದ ಮಾರಣಾಂತಿಕ ಹೊಂಡ ಗುಂಡಿಗಳು ಕಂಡು ಬರುತ್ತಿದ್ದು, ಕೆಲವೆಡೆ ಹೆದ್ದಾರಿಯಲ್ಲಿಯೇ ಮಳೆ ನೀರು ನಿಲ್ಲುವುದರಿಂದ ಸುವ್ಯವಸ್ಥಿತ ಸಂಚಾರಕ್ಕೆ ಅವ್ಯವಸ್ಥೆಯು ಕಾಡುವಂತಾಗಿದೆ ಎಂದು ಜನಾಕ್ರೋಶ ವ್ಯಕ್ತವಾಗುತ್ತಿದೆ.

ತೀವ್ರತರವಾದ ಅವಘಡ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಸಮರೋಪಾದಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಂಚಾರವೇ ದುಸ್ತರವಾಗಿದೆ. ಸ್ವಲ್ಪ ಏಮಾರಿದಲ್ಲಿ ಪ್ರಾಣಾಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಹೆದ್ದಾರಿ ನಡುವೆ ಕಂಡು ಬರುವ ಆಳವಾದ ಗುಂಡಿ ಅಪಾಯಕಾರಿಯಾಗಿದೆ. ಬೈಕ್ ಈ ಗುಂಡಿಯಲ್ಲಿ ಬಿದ್ದು ಏಳುವ ಸಂದರ್ಭ ಇತರೇ ವಾಹನಗಳು ಢಿಕ್ಕಿ ಹೊಡೆದು ಅಪಘಾತವಾಗುವ ಸಂಭವ ಹೆಚ್ಚಿದೆ. ಜನರ ಜೀವದ ಜೊತೆ ಚೆಲ್ಲಾಟ ಆಡದೇ, ಮಳೆಯ ನೆಪವೊಡ್ಡದೆ ಹೆದ್ದಾರಿ ಸಂಚಾರಕ್ಕೆ ಸುರಕ್ಷತೆಯನ್ನು ಕಲ್ಪಿಸಬೇಕಿದೆ ಎಂದು ಬೈಕ್ ಸವಾರ ಫಾರೆಸ್ಟ್ ಗೇಟ್, ಕಟಪಾಡಿಯ ಸಂತೋಷ್ ಪೂಜಾರಿ ಅಕ್ರೋಶ ವ್ಯಕ್ತಪಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೀಗ ಅಪಾಯಕಾರಿ ಸಂಚಾರವಾಗಿದೆ. ಮಳೆ ಬಂದಾಗ ನೀರು ತುಂಬಿ ಗುಂಡಿಯು ಗಮನಕ್ಕೆ ಬಾರದೆ ಪ್ರಯಾಣಿಕರೂ ಹೆದರುವ ಪರಿಸ್ಥಿತಿ ನಿಮರ್ಾಣವಾಗಿದೆ. ವಾಹನಗಳು ಬಿಡಿಭಾಗಗಳನ್ನು ಕಳಚಿಕೊಳ್ಳುವಂತಾಗಿದೆ. ದುಡಿಮೆಯ ದುಡ್ಡು ಗ್ಯಾರೇಜ್ಗೆ ಹಾಕುವಂತಹ ಪರಿಸ್ಥಿತಿ ನಿಮರ್ಾಣಗೊಂಡಿದೆ. ಇಂತಹ ಅವ್ಯವಸ್ಥೆಯನ್ನು ಕೇಳುವವರೇ ಇಲ್ಲವಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆಯು ಹೆದ್ದಾರಿ ಗುಂಡಿಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಿ ಉದ್ಯಾವರ ರಿಕ್ಷಾ ಚಾಲಕ ಮಾಲಕ ಸಂಘದ ಆಧ್ಯಕ್ಷ ಗಣೇಶ್ ಕೊಟ್ಯಾನ್ ಪಿತ್ರೋಡಿ ಮತ್ತು ಜನರು ಬಿದ್ದು ಸಾಯುವ ಪರಿಸ್ಥಿತಿ ನಿಮರ್ಾಣಗೊಂಡಿದೆ. ಸರಕಾರವು ಕೋಟಿ ಕೋಟಿ ಬಿಡುಗಡೆಯ ಹೇಳಿಕೆ ನೀಡುತ್ತಿದ್ದರೂ ಹೆದ್ದಾರಿಯ ಅವ್ಯವಸ್ಥೆಯನ್ನು ಕೇಳುವ ಗತಿ ಇಲ್ಲವಾಗಿದೆ. ಯಾವುದೇ ಜನಪ್ರತಿನಿಧಿಗಳು ಇದರ ಬಗ್ಗೆ ಚಕಾರವೆತ್ತುತ್ತಿಲ್ಲ. ಜನ ಸಾಮಾನ್ಯರನ್ನು, ದುಡಿದು ತಿನ್ನುವ ವರ್ಗದವರ ಸಂಕಷ್ಟಕ್ಕೆ ಮುಕ್ತಿಯೇ ಇಲ್ಲವಾಗಿದೆ. ಎಂದು ಕಟಪಾಡಿ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಪ್ರ,ಕಾರ್ಯದಶಿ ಹನೀಫ್ ಮಣಿಪುರ ತಮ್ಮ ಆಸಹನೆ ಯನ್ನು ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.