ಅಪಾಯಕ್ಕೆ ಅಹ್ವಾನ ನೀಡುತ್ತಿದೆ ಹೆದ್ದಾರಿ ಬದಿಯ ಚರಂಡಿ ಗುಂಡಿ
Team Udayavani, Mar 29, 2019, 4:34 PM IST
ಕಟಪಾಡಿ: ಮಂಗಳೂರಿನಿಂದ ಉಡುಪಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗಿ ಸುಗಮ ಸಂಚಾರಕ್ಕೆ ಅನುಕೂಲವಾಗಿರುವುದು ನಿಜ. ಆದರೆ ಕಟಪಾಡಿಯ ಸರ್ವಿಸ್ ರಸ್ತೆಯ ಬದಿಯಲ್ಲಿ ನಿರ್ಮಿಸಿರುವ ಕಾಂಕ್ರೀಟ್ ಚರಂಡಿ ಅಸಮರ್ಪಕವಾಗಿದ್ದು , ಅಪಾಯಕ್ಕೆ ಅಹ್ವಾನ ನೀಡುತ್ತಿದೆ.
ಕಟಪಾಡಿ ಪೇಟೆಯಲ್ಲಿ ವಾಹನ ದಟ್ಟಣೆಯನ್ನು ನಿಭಾಯಿಸಲು ಬಸ್ ಗಳು ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತವೆ. ಹಾಗಾಗಿ ಇಲ್ಲಿ ಸಾರ್ವಜನಿಕರು ಚರಂಡಿಯ ಮೇಲಿನ ಕಾಂಕ್ರೀಟ್ ಸ್ಲಾಬ್ ನಲ್ಲಿ ನಡೆದು ಹೋಗಬೇಕಾಗಿದೆ. ಆದರೆ ಇಲ್ಲಿ ಒಂದು ಕಡೆ ಚರಂಡಿಯನ್ನು ಮುಚ್ಚದೆ ಹಾಗೆ ಬಿಡಲಾಗಿದೆ. ಇಲ್ಲಿ ಎಂಟು ಅಡಿ ಆಳದ ಗುಂಡಿಯಿದ್ದು , ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಚರಂಡಿ ಗುಂಡಿ ಇರುವ ಜಾಗದಲ್ಲಿ ಬೀದಿ ದೀಪದ ವ್ಯವಸ್ಥೆಯೂ ಇಲ್ಲ. ಈ ಸಮಸ್ಯೆಗಳಿಂದ ಈಗಾಗಲೇ ಅನೇಕ ಅವಘಡಗಳು ಸಂಭವಿಸಿದೆ. ಮುಂದೆ ಯಾವುದೇ ಅನಾಹುತ ನಡೆಯುವ ಮೊದಲು ಸಂಬಂಧಿಸಿದ ಇಲಾಖೆ ತಕ್ಷಣ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು