ಕಾಪುವಿಗೂ ಕಾಲಿಟ್ಟ ಹಿಜಾಬ್ ವಿವಾದ: ಪೋಷಕರು, ಶಿಕ್ಷಕರ ನಡುವೆ ವಾಗ್ವಾದ


Team Udayavani, Feb 15, 2022, 1:37 PM IST

14kaup

ಕಾಪು: ಕಾಪು ತಾಲೂಕಿನ‌ ಮಲ್ಲಾರು ಪಕೀರಣಕಟ್ಟೆ ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯಲ್ಲಿ ಹಿಜಾಬ್ ವಿಚಾರದ ವಿವಾದ ಭುಗಿಲೆದ್ದಿದೆ.

ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಮಲ್ಲಾರು ಉರ್ದು ಶಾಲೆಯಲ್ಲಿ ಹಿಜಾಬ್, ಸ್ಕಾರ್ಫ್ ಧರಿಸಿಕೊಂಡು ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿದೆ.

ಸೋಮವಾರ ಸಮವಸ್ತ್ರದ ಶಾಲು ತಲೆಗೆ ಸುತ್ತಿಕೊಂಡು ತರಗತಿ ಪ್ರವೇಶಿಸಿದ ಮಕ್ಕಳನ್ನು ತಲೆ ಹೊದಿಕೆ ತೆಗೆದು ತರಗತಿಗೆ ಬರುವಂತೆ ಮುಖ್ಯೋಪಾಧ್ಯಾಯರು ಸೂಚಿಸಿದ್ದು, ಇದು ವಿದ್ಯಾರ್ಥಿಗಳು ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಲ್ಲಾರು ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯ 20 ಮಂದಿ ವಿದ್ಯಾರ್ಥಿಗಳು ಸೋಮವಾರ ಹಿಜಾಬ್ ಧರಿಸಿದ್ದು, ಮುಖ್ಯೋಪಾಧ್ಯಾಯರ ಮನವಿಯನ್ನು ನಿರ್ಲಕ್ಷಿಸಿದ ಕಾರಣ ಅವರನ್ನು ಪ್ರತ್ಯೇಕವಾಗಿ ಕುಳ್ಳಿರಿಸಲಾಗಿತ್ತು. ಮಂಗಳವಾರ ಆ ವಿದ್ಯಾರ್ಥಿಗಳು ಶಾಲೆಗೆ ಬಾರದೇ ಅವರ ಪೋಷಕರು ಶಾಲೆಗೆ ಬಂದು ಮಕ್ಕಳಿಗೆ ಶಾಲಾ ಪ್ರವೇಶಕ್ಕೆ ಅವಕಾಶ ಮಾಡಿಕೊಡುವಂತೆ ವಿನಂತಿಸಿದರು. ಈ ವೇಳೆ ಭಾರೀ ಚರ್ಚೆ‌ ನಡೆದು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಶಾಲೆಗೆ ಆಗಮಿಸಿದ ತಹಶೀಲ್ದಾರ್, ಡಿಡಿಪಿಐ ಅವರು ಶಿಕ್ಷಕರು ಮತ್ತು ಪೋಷಕರ ಜೊತೆಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿದ್ದಾರೆ.  ಈ ವೇಳೆ ಮಹಿಳಾ ಪೋಷಕರು ತಮ್ಮ ಮಕ್ಕಳಿಗೆ ಹಿಜಾಬ್ ಧರಿಸಿಕೊಂಡು ಬಂದು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಪುರುಷ ಪೋಷಕರು ಈಗ ಇರುವಂತೆಯೇ ಶಾಲು ಧರಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲ

ಪೋಷಕರ ಮತ್ತು ಶಿಕ್ಷಕರ ಜೊತೆ ಮಾತನಾಡಿದ್ದೇನೆ. ಎಲ್ಲ ಪೋಷಕರ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿದ್ದೇನೆ. ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೇ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಲಾಗುವುದು ಎಂದು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.