ಶಿರ್ವ ಹಿಂದೂ ಪ್ರೌಢ ಶಾಲೆ:ರಾತ್ರಿ ಅಭ್ಯಾಸ ತರಗತಿ ಆರಂಭ
Team Udayavani, Mar 14, 2019, 1:00 AM IST
ಶಿರ್ವ: ಇಲ್ಲಿನ ಹಿಂದೂ ಪ್ರೌಢಶಾಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಹಾಗೂ ತಮ್ಮ ಮನೆಯಲ್ಲಿ ಓದಿಕೆ ಪೂರಕ ವಾತಾರಣದ ಕೊರತೆಯಿರುವ 22 ಮಂದಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಓದು ಮತ್ತು ಅಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾತ್ರಿ ಅಭ್ಯಾಸದ ತರಗತಿಯನ್ನು ಪ್ರೌಢಶಾಲಾ ವಿಭಾಗದಲ್ಲಿ ಆರಂಭಿಸಲಾಗಿದೆ.
ವಿದ್ಯಾರ್ಥಿಗಳಿಗೆ ಶುಭಕೋರಿದ ಪ್ರೊ|ವೈ. ಭಾಸ್ಕರ ಶೆಟ್ಟಿ ಮಾತನಾಡಿ, ಬೇರೆ ಬೇರೆ ಕಾರಣಗಳಿಂದ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಅವರ ಕಲಿಕೆಗೆೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂಬ ಸಂಸ್ಥೆಯ ಅಧ್ಯಕ್ಷ ಎನ್.ವಿನಯ ಹೆಗ್ಡೆಯವರ ಚಿಂತನೆಯಂತೆ ಶಾಲೆಯ 77 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ 22 ಮಂದಿಯನ್ನು ಗುರುತಿಸಿ ರಾತ್ರಿ ಅಭ್ಯಾಸದ ತರಗತಿಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಶಿಸ್ತು ಮತ್ತು ಸಮಯದ ಸದುಯೋಗ ಮಾಡುವಂತೆ ತರಗತಿಯನ್ನು ಆಯೋಜಿಸಲಾಗಿದು,ª ಕಳೆದ ವರ್ಷ ನಡೆಸಿದ ತರಗತಿಯಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರ ಕಾಳಜಿ ಮತ್ತು ಪರಿಶ್ರಮ ತೃಪ್ತಿ ನೀಡಿದ್ದು ಅಭಿನಂದನಾರ್ಹವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಶಕಿಲಾ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಕಾರಣಗಳಿಂದ ಕಲಿಕೆಯಲ್ಲಿ ಹಿಂದಿಯುಳಿಯುತ್ತಿದ್ದು, ಅಂತಹ ಮಕ್ಕಳನ್ನು ಗುರುತಿಸಿ ಓದಿನಲ್ಲಿ ತೊಡಗಿಸಿ ಕೊಳ್ಳುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ರಾತ್ರಿ ತರಗತಿಗಳನ್ನು ಆಯೋಜಿಸಿದ್ದು ಉತ್ತಮ ಫಲಿತಾಂಶದ ನಿರೀಕ್ಷೆಯಿದೆ ಎಂದರು.ಹೆತ್ತವರಾದ ಪಾರ್ವತಿ, ವಿದ್ಯಾರ್ಥಿಗಳಾದ ಅಭಿಷೇಕ್, ಶರಣ್, ಶ್ರಾವಣ್, ನಿಶಾಂತ್ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಶಿಕ್ಷಕರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ನಿರ್ವಹಿಸಿ, ಕೇಶವ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ