ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳಬೇಕು: ಕೇಶವಮೂರ್ತಿ


Team Udayavani, Apr 13, 2017, 4:50 PM IST

1104kde3.jpg

ಕುಂದಾಪುರ:  ಕಳೆದ ಹಲವು ವರ್ಷಗಳಿಂದ ಹಿಂದೂ ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳ ಬೇಕು. ಭಾರತದ ಶ್ರೇಷ್ಠತೆ, ಹಿಂದುತ್ವದ ಶ್ರೇಷ್ಠತೆಯನ್ನು ಮನಗಾಣಬೇಕು. 

ಹಿಂದುತ್ವದ ಬಗ್ಗೆ ಗೌರವ, ಭಕ್ತಿ ಬಂದಾಗ ನಮ್ಮನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್‌ ದೊ. ಕೇಶವಮೂರ್ತಿ ಹೇಳಿದರು.

ಅವರು ಗಂಗೊಳ್ಳಿಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವ ಸ್ಥಾನದ ವಠಾರದಲ್ಲಿ   ಜರಗಿದ 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

ಸ್ವಾತಂತ್ರಾÂನಂತರದ ಹಿಂದುತ್ವವನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಗೋಮಾತೆ ಹಿಂದುಗಳಿಗೆ ಶ್ರದ್ಧೆ. ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಹಿಂದು ಜಾಗರಣ ವೇದಿಕೆ ಹೋರಾಟ ನಡೆಸಲಿದೆ. ಮತಾಂತರದ ಪಿಡುಗು ಹೆಚ್ಚಾಗುತ್ತಿದ್ದು, ಹಿಂದು ಧರ್ಮದ ಅನೇಕರನ್ನು ಈ ಬಲೆಗೆ ಬೀಳಿಸಲಾಗುತ್ತಿದೆ. ಮತಾಂತರ, ಲವ್‌ ಜಿಹಾದ್‌, ಅನ್ಯಾಯ, ಆಕ್ರಮಣದ ವಿರುದ್ಧ ಹಿಂದೂ ಜಾಗರಣ ವೇದಿಕೆ ಸದಾ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಆಶೀರ್ವಚನ ನೀಡಿ ಮಾತನಾಡಿದ ಕಾಸರಗೋಡು ಕೊಂಡೆವೂರು ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ  ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಧರ್ಮ ಮತ್ತು ದೇಶವನ್ನು ಉಳಿಸಿಕೊಳ್ಳಲು ಹಿಂದು ಸಮಾಜ ಬಾಂಧವರು ಒಗ್ಗಟ್ಟಿನಿಂದ ಪ್ರಯತ್ನಿಸಬೇಕು. ಹಿಂದುತ್ವದ ಜಾಗೃತಿ ಆಗಬೇಕು. ಹಿಂದುತ್ವವನ್ನು ದುರ್ಬಲ ಗೊಳಿಸುವುದರ ಬಗ್ಗೆ ಎಚ್ಚರ ವಹಿಸಬೇಕು. ಸಂಸ್ಕೃತಿ, ಸಂಸ್ಕಾರಗಳನ್ನು ರಕ್ಷಣೆ ಮಾಡಬೇಕು. ದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ವಾತಾವರಣ ನಿರ್ಮಾಣವಾಗಬೇಕು. ಭಗವಂತನ ಆರಾಧನೆ, ನಾಮಸ್ಮರಣೆ ಮಾಡಿದರೆ ಸಮಾಜದಲ್ಲಿ ಶಾಂತಿ ಸಮಾಧಾನ ನೆಲೆಸುತ್ತದೆ ಎಂದು ಹೇಳಿದರು.

ಶಿವಮೊಗ್ಗದ ಉದ್ಯಮಿ ರವೀಂದ್ರ ಶೇರುಗಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಬಿ. ಪೂಜಾರಿ, ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಜಿ., ಉದ್ಯಮಿ ನಾಗರಾಜ ಪಂಡಿತ್‌, ಶ್ರೀ ಗುರುಜ್ಯೋತಿ ನ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕ ಸದಸ್ಯ ವಿಜಯ ಖಾರ್ವಿ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ, ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರವೀಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್‌ ಸ್ವಾಗತಿಸಿದರು. ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ. ವಾಸುದೇವ ದೇವಾಡಿಗ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ಯಶವಂತ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.