ಹಿಂದೂಗಳು ಒಂದಾಗುವುದೇ ಎಲ್ಲದಕ್ಕೂ ಉತ್ತರ: ಡಾ| ಕಲ್ಲಡ್ಕ ಪ್ರಭಾಕರ್‌ ಭಟ್‌

ಶಿವಪಾಡಿಯಲ್ಲಿ ''ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್‌''

Team Udayavani, Jan 29, 2023, 6:12 PM IST

1-sdsadsad

ಮಣಿಪಾಲ: ಹೋಮ, ಹವನಗಳನ್ನು ಮೂಢನಂಬಿಕೆ ಎಂದು ಬಿಂಬಿಸುವ ಪ್ರಯತ್ನಗಳು ಇಂದಿಗೂ ನಡೆಯುತ್ತಿವೆ. ಹಿಂದೂ ಸಮಾಜವನ್ನು ಸಂಘಟಿಸುವ ಮೂಲಕ ಇದಕ್ಕೆ ಉತ್ತರ ನೀಡಬೇಕು. ಜಗತ್ತಿನ ಹಿತದೃಷ್ಟಿಯಿಂದ ಹಿಂದೂಗಳೆಲ್ಲರೂ ಜಾತಿ, ಮತ, ಪ್ರಾಂತ್ಯ ಭೇದ ಮರೆತು ಒಂದಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಆರೆಸ್ಸೆಸ್‌ನ ಹಿರಿಯರಾದ ಡಾ| ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್‌ ಮತ್ತು ಮೃತ್ತಿಕಾ ಪೂಜೆಯ ಅಂಗವಾಗಿ ರವಿವಾರ ನಡೆದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೂ ಧರ್ಮ ಜಗ್ಗತ್ತಿನ ಹಿತ ಬಯಸುತ್ತದೆ. ಹಿಂದೂ ಧರ್ಮ ಎಂದೂ ಜಾತ್ಯಾತೀತತೆಯ ವಿರುದ್ಧವಿರಲು ಸಾಧ್ಯವಿಲ್ಲ. ತಾಯಿಯನ್ನು ಆರಾಧಿಸುವ ಏಕೈಕ ದೇಶ ಭಾರತ. ಇದನ್ನು ಪಾಶ್ಚಾತ್ಯರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಮ್ಮ ಆಚರಣೆಗಳನ್ನು ಮೂಢನಂಬಿಕೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಿಂದೂ ರಿಲಿಜಿಯನ್‌ ಅಲ್ಲ. ಅದೊಂದು ಜೀವನ ಪದ್ಧತಿ. ಎಲ್ಲರ ಹಿತ ಬಯಸುವ ಏಕಮೇವ ಸಂಸ್ಕೃತಿ, ಧರ್ಮ ಹಿಂದೂ ಸಮಾಜದ್ದಾಗಿದೆ. ಹಿಂದೂ ಸಮಾಜವನ್ನು ಸಂಘಟಿಸುವ ಭಾಗವಾಗಿ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಶುಭಹಾರೈಸಿದರು.

ಶೃಂಗೇರಿ ಮಠದ ಪ್ರಾಂತೀಯ ಧರ್ಮಾಧಿಕಾರಿ ವಾಗೀಶ್‌ ಶಾಸ್ತ್ರೀಯವರು ಅತಿರುದ್ರ ಮಹಾಯಾಗದ ಹಿನ್ನೆಲೆ, ಮಹಿಮೆ, ಪ್ರಯೋಜನ ಮತ್ತು ನಡೆಯುವ ವಿಧಾನ ಇತ್ಯಾದಿಗಳ ವಿವರ ನೀಡಿದರು.ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ.ವೆಂಕಟೇಶ್‌ ಶುಭಹಾರೈಸಿದರು.ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರೂ ಆದ ಶಾಸಕ ಕೆ.ರಘುಪತಿ ಭಟ್‌ ಅಧ್ಯಕ್ಷೆತೆ ವಹಿಸಿದ್ದರು.

ಆರೆಸ್ಸೆಸ್‌ ಜಿಲ್ಲಾ ಸಂಘಚಾಲಕ ಡಾ| ನಾರಾಯಣ ಶೆಣೈ, ವಿಧಾನ ಪರಿಷತ್‌ ಮಾಜಿ ಸದಸ್ಯ ದಯಾನಂದ ರೆಡ್ಡಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಪ್ರಸಾದ್‌ ನೇತ್ರಾಲಯದ ಡಾ| ಕೃಷ್ಣ ಪ್ರಸಾದ್‌ ಕೂಡ್ಲು, ಉದ್ಯಮಿಗಳಾದ ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ಪರ್ವತ್‌ ಶೆಟ್ಟಿ, ಬಾಲಕೃಷ್ಣ ಭಂಡಾರಿ, ಕಾರ್ತಿಕ್‌ ಆರ್‌. ನಾಯಕ್‌, ನಿರ್ಮಿತಿ ಕೇಂದ್ರದ ಅರುಣ್‌ ಕುಮಾರ್‌, ನಗರಸಭೆ ಸದಸ್ಯೆಯರಾದ ವಿಜಯಲಕ್ಷ್ಮೀ, ಕಲ್ಪನಾ ಸುಧಾಮ, ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ದೇವಸ್ಥಾನದ ಆಡಳಿತ ಮೊಕ್ತೇಸರ ದಿನೇಶ್‌ ಪ್ರಭು, ಶೃಂಗೇರಿ ಮಠದ ವಿಶ್ವನಾಥ ಶಾಸ್ತ್ರೀ,ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ಉಡುಪಿ ಜಿಲ್ಲಾ ಸಂಚಾಲಕ ವಿಶ್ವನಾಥ್ ಶ್ಯಾನುಭೋಗ್ ಉಪಸ್ಥಿತರಿದ್ದರು.

ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ದೇವಸ್ಥಾನದ ಶಾಶ್ವತ ಟ್ರಸ್ಟಿ ದಿನೇಶ್‌ ಸಾಮಂತ್‌ ವಂದಿಸಿದರು. ಪ್ರಾಧ್ಯಾಪಕ ಡಾ| ಬಾಲಕೃಷ್ಣ ಮುದ್ದೊಡ್ಡಿ ನಿರೂಪಿಸಿದರು.

ಸಮರ್ಪಣ ದಿವಸ್‌
ಅತಿರುದ್ರ ಮಹಾಯಾಗದ ಪೂರ್ಣಾಹುತಿಗೆ ಬಳಸುವ ಭತ್ತ, ತುಪ್ಪ ಮತ್ತು ಎಳ್ಳು ಇತ್ಯಾದಿಗಳನ್ನು ಫೆ. 12ರ ಬೆಳಗ್ಗೆ 9 ಗಂಟೆಯಿಂದ ಸ್ವೀಕರಿಸಲಾಗುವುದು. ”ಸಮರ್ಪಣ್‌ ದಿವಸ್‌” ಆಚರಣೆಯ ಭಾಗವಾಗಿ ಇದು ಅತಿರುದ್ರ ಯಾಗ ಮುಗಿಯವವರೆಗೂ ನಡೆಯಲಿದೆ. ಹಾಗೆಯೇ ಭಕ್ತರಿಗೆ ಬೆಳ್ಳಿ ಲೇಪಿತ ರುದ್ರಾಕ್ಷಿಯನ್ನು ಸಂಕಲ್ಪ ಸಹಿತವಾಗಿ ದೇವಸ್ಥಾನದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಮಹೇಶ್‌ ಠಾಕೂರ್‌ ತಿಳಿಸಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.