ಶ್ರೀ ಕ್ಷೇತ್ರ ಹಿರಿಯಡಕ ಬ್ರಹ್ಮಕಲಶೋತ್ಸವಕ್ಕೆ ವೈಭವದ ತೆರೆ 


Team Udayavani, Apr 23, 2018, 6:20 AM IST

220418hbre3a.jpg

ಹಿರಿಯಡಕ: ಇಲ್ಲಿನ ಪುರಾಣ ಪ್ರಸಿದ್ಧ ವೀರಭದ್ರ ಸ್ವಾಮಿ ದೇವಸ್ಥಾನ 26 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಬಳಿಕ ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವೈಭವದಿಂದ ಸಮಾಪನಗೊಂಡಿದೆ. 

ಸುಮಾರು 800 ವರ್ಷ ಇತಿಹಾಸದ ಈ ಕ್ಷೇತ್ರದಲ್ಲಿ ಎ. 16ರಿಂದ ಎ. 25ರ ವರೆಗೆ ನವೀಕೃತ ದೇಗುಲ ಸಮರ್ಪಣೆ, ಪುನಃಪ್ರತಿಷ್ಠೆ, ಬ್ರಹ್ಮಕಲಶ ಕಾರ್ಯಕ್ರಮಗಳು ಅಪೂರ್ವವೆಂಬಂತೆ ನಡೆದಿದೆ.
 
ಧಾರ್ಮಿಕ ಕಾರ್ಯಕ್ರಮ 
ಬ್ರಹ್ಮಕಲಶ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶಿಷ್ಟ ಸಂಪ್ರದಾಯಗಳು ನಡೆದಿದ್ದು, ಜನರು ಭಕ್ತಿಭಾವದಿಂದ ಭಾಗಿ ಯಾಗಿದ್ದರು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಷಡಂಗ ಬಿ. ಲಕ್ಷೀನಾರಾಯಣ ತಂತ್ರಿ ಹಾಗೂ ಬ್ರಹ್ಮಶ್ರೀ ಬಿ.ಗುರುರಾಜ ತಂತ್ರಿಗಳ ನೇತೃತ್ವದಲ್ಲಿ ಅರ್ಚಕ ರಂಗನಾಥ ಭಟ್‌ ಅವರ ಪೌರೋಹಿತ್ಯದಲ್ಲಿ ಕಾರ್ಯಕ್ರಮಗಳು ನಡೆದಿದ್ದವು. ವಿವಿಧ ಕಲಶಾಭಿಷೇಕಗಳು, ಹೋಮಗಳು, ವೈದಿಕ ಕಾರ್ಯಕ್ರಮಗಳು ನಡೆದವು. 

ಜನಸಾಗರ 
10 ದಿನದ ಕಾರ್ಯಕ್ರಮ ಸಂದರ್ಭ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ದೇಗುಲಕ್ಕೆ ಭೇಟಿ ನೀಡಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. 
ಕೊನೆ ದಿನವೊಂದರಲ್ಲೇ 80 ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸಿದ್ದಾರೆ. ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರೂ ನೂಕು ನುಗ್ಗಲು ಆಗದಂತೆ, ದೇವರ ದರ್ಶನಕ್ಕೆ, ಪಾರ್ಕಿಂಗ್‌ ಸ್ಥಳ, ಇತರೆಡೆಗಳಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು.  

ಮನಗೆದ್ದ ಸಾಂಸ್ಕೃತಿಕ ವೈವಿಧ್ಯ
ಹಿರಿಯಡಕ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಿನನಿತ್ಯ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೂರೆಗೊಂಡಿತು. ರವಿವಾರದಂದು ಪ್ರವೀಣ್‌ ಗೋಡಿRಂಡಿ ಮತ್ತು ಸನಾತನ ನಾಟ್ಯಾಲಯ ಮಂಗಳೂರು, ನೃತ್ಯ ನಿಕೇತನ ಕೊಡವೂರು, ವಸಂತ ನಾಟ್ಯಾಲಯ ಕುಂದಾಪುರ ಅವರಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಿತು. ಇದನ್ನು ಕಣ್ತುಂಬಿಕೊಳ್ಳಲು ಸಹಸ್ರ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.  

1.5 ಲಕ್ಷ ಮಂದಿಗೆ ಅನ್ನದಾನ 
ಉತ್ಸವ ಸಂದರ್ಭ ಸುಮಾರು 1.5 ಲಕ್ಷ ಮಂದಿಗೆ ಅನ್ನದಾನ ಮತ್ತು ಉಪಾಹಾರ ವ್ಯವಸ್ಥೆಯನ್ನು 10 ದಿನಗಳಲ್ಲಿ ಮಾಡಲಾಗಿತ್ತು. ನಿತ್ಯ ಮಧ್ಯಾಹ್ನ, ಸಂಜೆ 20 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಕೊನೆಯ ದಿನವಾದ ರವಿವಾರ 60 ಸಾವಿರಕ್ಕೂ ಹೆಚ್ಚು ಮಂದಿ ಅನ್ನಪ್ರಸಾದ ಸೇವಿಸಿದರು. 

ವಿಶಾಲ ಅನ್ನಸಂತರ್ಪಣಾ ಚಪ್ಪರ
ನೂಕುನುಗ್ಗಲನ್ನು ತಡೆಯಲು ಏಕಕಾಲದಲ್ಲಿ 3 ಸಾವಿರ ಜನರು ಕುಳಿತು ಊಟಮಾಡುವ ಟೇಬಲ್‌ ವ್ಯವಸ್ಥೆ ಹಾಗೂ 6 ಸಾವಿರ ಜನರಿಗಾಗುವಷ್ಟು ಬಫೆ  ಕೌಂಟರ್‌ ಊಟದ ವ್ಯವಸ್ಥೆ ಅಲ್ಲದೆ ಸಭಾಂಗಣದಲ್ಲಿ 10 ಸಾವಿರ ಜನ ಏಕಕಾಲದಲ್ಲಿ ಊಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕಾಗಿ 100ಕ್ಕೂ ಹೆಚ್ಚು ಬಾಣಸಿಗರು, ಸ್ವಯಂಸೇವಕರು ಶ್ರಮಿಸಿದ್ದರು.  

ಶಿಲ್ಪ ಕಲೆಯ ದೇಗುಲ 
ಇಡೀ ದೇಗುಲವನ್ನು ಕಲ್ಲು ಮತ್ತು ಮರಗಳಿಂದ ಮರು ರೂಪಿಸಲಾಗಿದ್ದು, ಅತ್ಯಾಕರ್ಷಕ ಕೆತ್ತನೆಗಳಿಂದ ಸುಂದರಗೊಳಿಲಾಗಿದೆ. ಬ್ರಹ್ಮಲಿಂಗೇಶ್ವರ ಗುಡಿ, ವೀರಭದ್ರ ಗರ್ಭ ಗುಡಿ. ಮುಖಮಂಟಪ, ರಾಜಗೋಪುರಗಳು ಹೊಯ್ಸಳ, ದ್ರಾವಿಡ ಶೈಲಿಯಲ್ಲಿವೆ. ಶಿಲ್ಪ ಕಲೆಯ ವೈವಿಧ್ಯಮಯ ಅಂಶಗಳನ್ನು ದೇಗುದಲ್ಲಿ ಕೆತ್ತಲಾಗಿದ್ದು ಅಪೂರ್ವದ್ದಾಗಿವೆ. ದೀಪದಳಿಯಲ್ಲಿ ಶಿವನ ನಾಟ್ಯಭಂಗಿಯಿದ್ದು ದೀಪದಳಿಯ ಮೇಲಿನ ಹಂತದಲ್ಲಿ ಹಿರಿಯಡಕ ಕ್ಷೇತ್ರದ ಇತಿಹಾಸವನ್ನು , ಕತೆಯನ್ನು , ಉತ್ಸವ ಮತ್ತು ಸಿರಿಜಾತ್ರೆಯ ದೃಶ್ಯಗಳನ್ನು ಮರದ ಹಲಗೆಗಳಲ್ಲಿ ಉಬ್ಬುಶಿಲ್ಪವಾಗಿ ಕೆತ್ತಿಸಲಾಗಿದೆ. ಗರ್ಭಗುಡಿಯ ದೀಪದಳಿಗೆ 460 ಕೆ.ಜಿ. ಬೆಳ್ಳಿ ಹೊದಿಕೆ ಹಾಕಲಾಗಿದೆ ಈ ಎಲ್ಲ ಕೆಲಸಗಳಿಗೆ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಶಿಲ್ಪಿಗಳೂ ಕೆಲಸ ಮಾಡಿದ್ದಾರೆ.   

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.