ಹೋಳಿ ಹುಣ್ಣಿಮೆಗೆ ಗೋವಾದಿಂದ ಬರುತ್ತಾರೆ ದೇವರು..


Team Udayavani, Feb 18, 2019, 1:00 AM IST

holi.jpg

ಕುಂದಾಪುರ: ಉಡುಪಿ ಜಿಲ್ಲೆಯ ಕುಡುಬಿ ಜನಾಂಗದವರು ಆಚರಿಸುವ ಸಾಂಪ್ರದಾಯಿಕ ಹೋಳಿ ಹುಣ್ಣಿಮೆಯ ಸಿದ್ಧತೆಗೆ ಒಂದು ತಿಂಗಳ ಮುಂಚಿತವಾಗಿಯೇ ಗೋವಾದ ದೇವರೊಂದಿಗೆ, ಅಲ್ಲಿನ ಕುಡುಬಿ ಜನಾಂಗದವರೂ ಇಲ್ಲಿಗೆ ಆಗಮಿಸುತ್ತಾರೆ. ಬಳಿಕ ಕುಡುಬಿ ಮನೆಗಳಿಗೆ ದೇವರೊಂದಿಗೆ ತೆರಳಿ ಪೂಜೆ ಪಡೆಯುವ ಸಂಪ್ರದಾಯ ಸುಮಾರು 450 ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದೆ.

ಮಾ. 17ರಿಂದ ಮಾ. 21ರವರೆಗೆ ಹೋಳಿ ಹುಣ್ಣಿಮೆ ಆಚರಣೆಯನ್ನು ಕುಡುಬಿ ಜನಾಂಗದವರು ಶ್ರದ್ಧಾ ಭಕ್ತಿ ಪೂರ್ವಕವಾಗಿ ಉಡುಪಿ ಜಿಲ್ಲೆಯಾದ್ಯಂತ ಆಚರಿಸುತ್ತಾರೆ. ಅದಕ್ಕೂ ಮೊದಲು ಮಾಘ ಮಾಸದ ಹುಣ್ಣಿಮೆಯಿಂದ ಅಮಾವಾಸ್ಯೆಯವರೆಗೆ 15 ದಿನಗಳ ಕಾಲ ಗೋವಾದಿಂದ ಉತ್ಸವ ಮೂರ್ತಿಯೊಂದಿಗೆ 5 ಮಂದಿಯ ತಂಡ ಉಡುಪಿಗೆ ಆಗಮಿಸುತ್ತದೆ.  

ಏನಿದು ಆಚರಣೆ ?
ಸಿಂಗರಿಸಿದ ಮಲ್ಲಿಕಾರ್ಜುನ ಮತ್ತು ಅಮ್ಮನವರ ಮೂರ್ತಿಯನ್ನು ಉತ್ಸವ ಪಲ್ಲಕ್ಕಿಯಲ್ಲಿ ಹೊತ್ತುಕೊಂಡು ತಾಳ, ಡಮರು ನಿನಾದದೊಂದಿಗೆ ಕಾಲ್ನಡಿಗೆಯಲ್ಲಿ ಇಲ್ಲಿರುವ ಬಹುತೇಕ ಕುಡುಬಿ ಜನರ ಮನೆಗಳಿಗೆ ಬರುತ್ತಾರೆ. ಅಲ್ಲಿ ಪೂಜೆ ನಡೆದು, ಅಕ್ಕಿ, ಕಾಯಿ, ದವಸ ಧಾನ್ಯಗಳನ್ನು ಪಡೆದು, ಪ್ರಸಾದ ನೀಡಿ ಹರಸುತ್ತಾರೆ. ಮಧ್ಯಾಹ್ನ ಹಾಗೂ ಸಂಜೆ ವಿಶೇಷ ಪೂಜೆ ಇರುತ್ತದೆ. ಆ ವೇಳೆ ದೇವರು ಯಾರ ಮನೆಯಲ್ಲಿ ಇರುತ್ತಾರೋ ಆ ಮನೆಯ ಯಜಮಾನನೇ ದೇವರಿಗೆ ಪೂಜೆ ನೆರವೇರಿಸುತ್ತಾರೆ. 

ಪ್ರತಿ ಕುಡುಬಿ ಕುಟುಂಬಸ್ಥರು ಕೂಡ ದೇವರನ್ನು  ಸಾಂಪ್ರದಾಯಿಕ ಪದ್ಧªತಿಯಂತೆ ಆಮಂತ್ರಿಸಬೇಕು. ಇನ್ನೊಂದು ಮನೆಗೆ ತೆರಳುವಾಗ ಆ ಮನೆಯವರೆಗೆ ತೆರಳಿ ಬೀಳ್ಕೊಡುವ ಕ್ರಮವಿದೆ.  ಈಗ ಹುಣ್ಣಿಮೆಗೆ ಆಗಮಿಸಿರುವ ಇವರು ಮುಂದಿನ ಅಮಾವಾಸ್ಯೆಗೆ ಮುನ್ನ  ಮೂಲ ನೆಲೆ ಗೋವಾವನ್ನು ಸೇರಿಕೊಳ್ಳುತ್ತಾರೆ ಎನ್ನುವ ಪ್ರತೀತಿಯಿದೆ. 

ಏನಿದರ ಉದ್ದೇಶ ?
16ನೇ ಶತಮಾನದಲ್ಲಿ ಗೋವಾದಲ್ಲಿ ಪೋರ್ಚುಗೀಸರ ಆಳ್ವಿಕೆಯಿದ್ದು, ಅವರ ಮತಾಂತರ, ದೌರ್ಜನ್ಯಕ್ಕೆ ಹೆದರಿ, ಧರ್ಮ ರಕ್ಷಣೆಯ ಸಲುವಾಗಿ ಅಲ್ಲಿದ್ದ ಕುಡುಬಿ ಜನರು ಕರಾವಳಿಯ ಉಡುಪಿ ಜಿಲ್ಲೆಗೆ ವಲಸೆ ಬರುತ್ತಾರೆ. ಇಲ್ಲಿರುವ ಕುಡುಬಿ ಜನರನ್ನು ಕಾಣಲು ವರ್ಷಕ್ಕೊಮ್ಮೆ ಗೋವಾದಿಂದ ದೇವರೇ ಇಲ್ಲಿಗೆ ಬಂದು ಭಕ್ತರ ಮೊರೆಯನ್ನು ಆಲಿಸುತ್ತಾರೆ ಎನ್ನುವ ಮಾತಿದೆ. ಉಡುಪಿ ಜಿಲ್ಲೆಯ ಕೊಕ್ಕರ್ಣೆ, ಬೆಳ್ವೆ, ಅಲಾºಡಿ, ಗೋಳಿಯಂಗಡಿ, ಶೇಡಿಮನೆ, ಬೇಳಂಜೆ ನಾಲ್ಕೂರು, ನಂಚಾರು ಸೇರಿದಂತೆ ಹಲವೆಡೆ ಒಟ್ಟು 3,600 ಕ್ಕೂ ಅಧಿಕ ಮಂದಿ ಕುಡುಬಿ ಜನರಿದ್ದಾರೆ. 

ವಿಶೇಷ ಮಹತ್ವ 
ಈ ಆಚರಣೆ ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದಕ್ಕೆ ನಮ್ಮಲ್ಲಿ ವಿಶೇಷ ಮಹತ್ವವಿದೆ. 15 ದಿನಗಳ ಕಾಲ ಇಲ್ಲಿರುವ ದೇವರು ದಿನಕ್ಕೆ ಸುಮಾರು 15 ರಿಂದ 20 ಮನೆಗಳಿಗೆ ತೆರಳಿ ಭಕ್ತರ ಸೇವೆಯನ್ನು ಸ್ವೀಕರಿಸುತ್ತಾರೆ. ಧರ್ಮ ರಕ್ಷಣೆಯ ಸಲುವಾಗಿ ಈ ಆಚರಣೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ. 
– ನಾರಾಯಣ ನಾಯ್ಕ, ಗೋಳಿಯಂಗಡಿ 

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.