ಇಂದಿನಿಂದ “ಹೋಳಿ’ ಹಬ್ಬ ಆಚರಣೆ


Team Udayavani, Mar 5, 2020, 5:50 AM IST

ಇಂದಿನಿಂದ “ಹೋಳಿ’ ಹಬ್ಬ ಆಚರಣೆ

ಕುಂದಾಪುರ: ಕುಡುಬಿ,ಖಾರ್ವಿ, ಮರಾಠಿ ಸಮಾಜದವರೆಲ್ಲರೂ ವಿಶಿಷ್ಟ ರೀತಿಯಲ್ಲಿ ಆಚರಿಸುವ “ಹೋಳಿ‘ ಹಬ್ಬದ ಸಂಭ್ರಮ ಈಗ ಕುಂದಾಪುರ, ಉಡುಪಿ ಸಹಿತ ಕರಾವಳಿಯಾದ್ಯಂತ ಮನೆ ಮಾಡಿದೆ. ಗುರುವಾರದಿಂದ ಐದು ದಿನಗಳ ಕಾಲ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ರೀತಿಯಲ್ಲಿ ಹೋಳಿ ಹಬ್ಬವನ್ನು ಆಚರಿಸುತ್ತಾರೆ.

ತಲೆ – ತಲಾಂತರಗಳಿಂದ ಆಚರಿಸಿಕೊಂಡು ಬರುತ್ತಿರುವ ಹೋಳಿ ಹಬ್ಬದ ಆಚರಣೆಗೆ ವಿಶೇಷವಾದ ಮಹತ್ವವಿದೆ. ಫಾಲ್ಗುಣ ಮಾಸದ ಏಕಾದಶಿಯಿಂದ ಆರಂಭ ವಾಗಿ ಹುಣ್ಣಿಮೆಯವರೆಗೆ ವಿವಿಧ ಸಮುದಾಯದವರು ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಫಾಲ್ಗುಣ ಮಾಸದ ಏಕಾದಶಿಯಿಂದ ಹುಣ್ಣಿಮೆಯವರೆಗೆ (ಅಂದರೆ ಈ ವರ್ಷ ಮಾ. 5 ರಿಂದ ಮಾ. 9 ರವರೆಗೆ) ಕುಡುಬಿ ಜನಾಂಗದವರು ಹೋಳಿ ಹಬ್ಬವನ್ನು ಆಚರಿಸುತ್ತಾರೆ.

ಸಿದ್ಧತೆ ಆರಂಭ
ಮುನ್ನ ದಿನವೇ ಹಬ್ಬದ ಸಿದ್ಧತೆಗಳು ಆರಂಭಗೊಂಡಿದ್ದು, ಏಕಾದಶಿಯ ದಿನ ಬೆಳಗಿನ ಜಾವಕ್ಕೂ ಮುನ್ನವೇ ಎಲ್ಲ ಕೂಡು ಕಟ್ಟುಗಳ ಸದಸ್ಯರೆಲ್ಲ ಆಯಾಯ ಭಾಗದ ಗುರಿಕಾರರ ಮನೆಗೆ ಬಂದು ಸೇರುತ್ತಾರೆ. ಅಲ್ಲಿ ದೇವರ ಪ್ರತಿಷ್ಠಾಪನೆ, ಹಾಡುಗಳ ಮೂಲಕವೇ ವಿಧಿ – ವಿಧಾನ ಪೂರೈಸಿ, ಕೋಲಾಟ, ಗುಮ್ಮಟೆ ನೃತ್ಯ ಮಾಡಿ, ಬಳಿಕ ಗ್ರಾಮ ದೇವಸ್ಥಾನದಲ್ಲಿ ಕೋಲಾಟ, ಗುಮ್ಮಟೆ ನೃತ್ಯ ಮಾಡಲಾಗುತ್ತದೆ. ಬಳಿಕ ಮೊದಲೆರಡು ದಿನ ಹೊರ ಗ್ರಾಮಗಳ ಕುಡುಬಿ ಸಮುದಾಯದವರ ಮನೆ – ಮನೆಗೆ ಹೋಗಿ, 3ನೇ ದಿನ ಅವರದೇ ಗ್ರಾಮಕ್ಕೆ ಬಂದು ಅಲ್ಲಿನ ಎಲ್ಲರ ಮನೆಗೂ ಹೋಗುತ್ತಾರೆ. 5ನೇ ದಿನ ಮತ್ತೆ ಅವರ ಗುರಿಕಾರರ ಮನೆಯಲ್ಲಿ ಸೇರುತ್ತಾರೆ.

5ನೇ ದಿನ ಅಂದರೆ ಹೋಳಿ ಹುಣ್ಣಿಮೆಯ ದಿನ ಕೂಡುಕಟ್ಟಿನ ಮುಖ್ಯ ಮನೆಯಲ್ಲಿ ಎಲ್ಲರೂ ಸೇರಿ, ಆ ವರ್ಷದ ಕೊನೆಯ ಹೋಳಿ ಕುಣಿತವನ್ನು ಮಾಡುತ್ತಾರೆ. ಗೆಜ್ಜೆ, ವೇಷ ಭೂಷಣ ಕಳಚಿ, ಎಲ್ಲರೂ ಸಾಮೂಹಿಕವಾಗಿ ಸ್ನಾನ ಮಾಡುತ್ತಾರೆ. ಆ ಬಳಿಕ ಪರಿಕರಗಳಿಗೆಲ್ಲ ಗುರಿಕಾರರು ಪೂಜೆ ಮಾಡಿದ ಅನಂತರ ಬೆಂಕಿ (ಕಾಮದಹನ ಮಾಡುವುದು) ಹಾಯುತ್ತಾರೆ. ಬಳಿಕ ಸಾಮೂಹಿಕವಾಗಿ ಊಟ ಮಾಡಿದ ಅನಂತರ ಯುವಕರು, ಮಕ್ಕಳೆಲ್ಲ ಸೇರಿ ಗ್ರಾಮದಲ್ಲಿರುವ ಮನೆ- ಮನೆಗೆ ಹೋಗಿ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬ ಮುಗಿಯಿತು ಎನ್ನುವ ಸಂದೇಶ ಸಾರುತ್ತಾರೆ.

ಹೋಳಿ ಹಬ್ಬದ ಕುಣಿತಕ್ಕೆ ವೇಷ ಹಾಕುವವರು ಅಂದರೆ ಕೋಲು ಹಿಡಿದವರು ಚಪ್ಪಲಿ ಹಾಕಬಾರದು, ಭಾರ ಹೊರಬಾರದು, ಬೇರೆಯವರ ಮನೆಯಲ್ಲಿ ಊಟ ಮಾಡಬಾರದು, ಮದಿರೆ-ಮಾನಿನಿ ಸಹವಾಸ ಮಾಡಬಾರದು, ಮಾಂಸ ಸೇವಿಸಬಾರದು. ಇಲ್ಲಿ ಮಾ. 5 ರಿಂದ ಆರಂಭಗೊಂಡು, ಮಾ. 9ರವರೆಗೆ ನಡೆದರೆ, ಗೋವಾದಲ್ಲಿ ಮಾ. 12ರವರೆಗೆ ನಡೆಯುತ್ತದೆ. ಇಲ್ಲಿ ಹೋಳಿ ಆಚರಣೆ ಮುಗಿಸಿ, ಅನೇಕ ಮಂದಿ ಅಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆಯುವ ಆಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ. ಹೋಳಿ ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದ್ದು, ಎಲ್ಲರೂ ಇದರಲ್ಲಿ ಸಂತೋಷದಿಂದ ಭಾಗವಹಿಸುತ್ತಾರೆ ಎನ್ನುವುದಾಗಿ ರಾಜ್ಯ ಕುಡುಬಿ ಸಂಘದ ಜತೆ ಕಾರ್ಯದರ್ಶಿ ನರಸಿಂಹ ನಾಯ್ಕ ಮಂದಾರ್ತಿ ತಿಳಿಸಿದ್ದಾರೆ.

ಮರಾಠಿ ಹೋಳಿ ಆಚರಣೆ
ಮಹರಾಷ್ಟ್ರ, ಗೋವಾದಿಂದ ವಲಸೆ ಬಂದವರು ಮರಾಠಿ ನಾಯ್ಕ ಸಮುದಾಯದವರು. ಇವರ ಹೋಳಿ ಹಬ್ಬ ಏಕಾದಶಿಯಂದು ಆರಂಭಗೊಂಡು, ಹುಣ್ಣಿಮೆಯ ಒಂದು ದಿನ ಮೊದಲು ಮುಕ್ತಾಯಗೊಳ್ಳುತ್ತದೆ. 20-30 ಜನರ ತಂಡಗಳನ್ನು ರಚಿಸಿಕೊಂಡು, ಒಂದು ಕಡೆ ಸೇರಿ ಚಪ್ಪರ ಎಲ್ಲ ಹಾಕಿ, ಅಲ್ಲಿಯೇ ವೇಷವನ್ನು ಧರಿಸಿ, ಅಲ್ಲಿಂದ ಹೋಳಿ ಕುಣಿತವನ್ನು ಆರಂಭಿಸುತ್ತಾರೆ. ಎರಡು ದಿನ ತಿರುಗಾಟ ನಡೆಸಿ, 3ನೇ ದಿನ ಸಂಜೆ ಮತ್ತೆ ಅಲ್ಲಿ ಬಂದು ಸೇರುತ್ತಾರೆ. ಹುಣ್ಣಿಮೆಯ ಮುನ್ನ ದಿನ ಸ್ನಾನ ಮಾಡಿ, ಆ ದಿನ ವೇಷ ಕಳಚುವುದರೊಂದಿಗೆ ಆಚರಣೆ ಮುಗಿಯುತ್ತದೆ. ಮರು ದಿನ ಪೂಜೆ ನೆರವೇರಿಸುತ್ತಾರೆ ಎನ್ನುವುದಾಗಿ ಮರಾಠಿ ನಾಯ್ಕ ಸಮುದಾಯದ ಚಿತ್ತೂರಿನ ಗೋಪಾಲ್‌ ತಿಳಿಸಿದ್ದಾರೆ.

46 ಕೂಡು ಕಟ್ಟುಗಳು
ಉಡುಪಿ ಜಿಲ್ಲೆಯಲ್ಲಿ ಕುಡುಬಿ ಸಮುದಾಯದವರ 46 ಕೂಡು ಕಟ್ಟುಗಳಿವೆ. ಮಂದಾರ್ತಿ, ಕೊಕ್ಕರ್ಣೆ, ಹಾಲಾಡಿ, ಬೆಳ್ವೆ, ಬಾಕೂìರು, ಮುದ್ದೂರು, ಯಳಂತೂರು, ಶೇಡಿಮನೆ, ಹಿಲಿಯಾಣ, ಕಕ್ಕುಂಜೆ ಕಡೆಗಳೆಲ್ಲ ಕುಡುಬಿ ಮನೆತನಗಳಿವೆ. ಕುಡುಬಿಯವರ ಪ್ರಕಾರ ಕೂಡು ಕಟ್ಟು ಅಂದರೆ 1 ಗ್ರಾಮ ಅಂತ ಅರ್ಥ. ಗ್ರಾಮಕ್ಕೊಬ್ಬರು ಗುರಿಕಾರರಿರುತ್ತಾರೆ. 46 ಕೂಡು ಕಟ್ಟುಗಳು ಸಂಖ್ಯೆಗೆ ಅನುಗುಣವಾಗಿ 2 ಅಥವಾ ಅದಕ್ಕಿಂತ ಹೆಚ್ಚು ಪಂಗಡಗಳಾಗಿ ವಿಂಗಡಿಸಿ ಮನೆ – ಮನೆಗೆ ತೆರಳಿ ಗುಮ್ಮಟೆ ಹಾಗೂ ಕೋಲಾಟ ನೃತ್ಯವನ್ನು ಪ್ರದರ್ಶನ ಮಾಡುತ್ತಾರೆ.

ದೊಡ್ಡ ಹಬ್ಬ
5 ದಿನಗಳ ಕಾಲ ನಡೆಯುವ ಈ ಹೋಳಿ ಆಚರಣೆಯು ನಮ್ಮ ಕುಡುಬಿ ಸಮುದಾಯದ ದೊಡ್ಡ ಹಬ್ಬವಾಗಿದೆ. ಎಲ್ಲರೂ ಸೇರಿ ಒಟ್ಟಾಗಿ ಸಂತೋಷದಿಂದ ಹಬ್ಬದ ಆಚರಣೆ ಜತೆಗೆ, ಶಿವನ ಅನುಗ್ರಹವನ್ನು ಪಡೆಯುವುದು ಇದರ ಉದ್ದೇಶವಾಗಿದೆ.
-ಪ್ರಭಾಕರ್‌ ಕಲ್ಮರ್ಗಿ,
ಅಧ್ಯಕ್ಷರು, ಕುಡುಬಿ ಸಮಾಜೋದ್ಧಾರಕ ಸಂಘ ಉಡುಪಿ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.