ಹಾಲಾಡಿ ಪರ-ವಿರೋಧ ಘೋಷಣೆ; ಗದ್ದಲ, ವಾಗ್ವಾದ


Team Udayavani, Nov 14, 2017, 8:40 AM IST

14-2.jpg

ಕುಂದಾಪುರ: ಕುಂದಾಪುರದ ನೆಹರೂ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯ ಸಮಾವೇಶವು ಮೂಲ ಬಿಜೆಪಿಗರು ಹಾಗೂ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಬಣಗಳ ನಡುವಿನ ಬಲ ಪ್ರದರ್ಶನದ ವೇದಿಕೆಯಾಗಿ ಪರಿವರ್ತನೆಯಾಗಿತ್ತು.

ಎರಡೂ ಗುಂಪಿನ ಕಾರ್ಯಕರ್ತರು ಪರ- ವಿರೋಧ ಘೋಷಣೆಗಳನ್ನು ಕೂಗಿದ್ದು, ಈ ವೇಳೆ ಮಾತಿನ ಚಕಮಕಿಯಿಂದ ಗದ್ದಲ, ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ  ತಿರುಗಿದ ಪ್ರಸಂಗವೂ ನಡೆಯಿತು. ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸಭೆಯಲ್ಲಿ ಸಾಮಾನ್ಯರಾಗಿ ಬಂದು ಕುಳಿತುಕೊಳ್ಳುತ್ತಿದ್ದಂತೆ ಅವರ ಪರ ಘೋಷಣೆಗಳು ಜೋರಾಗಿಯೇ ಕೇಳಿ ಬಂತು. ವೇದಿಕೆಯೇರಲು ಬಂದ ಬಿ.ಎಸ್‌. ಯಡಿಯೂರಪ್ಪ ಸಹಿತ ಎಲ್ಲ ನಾಯಕರು ಹಾಲಾಡಿ ಅವರ ಕುಶಲೋಪರಿ ವಿಚಾರಿಸಿದರು.

ಈ ವೇಳೆ ಕೆರಳಿದ ಹಾಲಾಡಿ ವಿರೋಧ ಬಣದ ಕಾರ್ಯಕರ್ತರು ಸಭೆ ನಡೆಯುತ್ತಿರುವಾಗಲೇ ಶ್ರೀನಿವಾಸ ಶೆಟ್ಟಿ ಅವರ ವಿರುದ್ಧ “ಹಾಲಾಡಿಗೆ ಮುಕ್ತಿ ನೀಡಿ, ಬಿಜೆಪಿಗೆ ಶಕ್ತಿ ನೀಡಿ’, “ಹಾಲಾಡಿಗೆ ಬಿಜೆಪಿ ಅನಿವಾರ್ಯ-ಬಿಜೆಪಿಗೆ ಹಾಲಾಡಿ ಅನಿವಾರ್ಯ ಅಲ್ಲ’, “ಮನೆಯಲ್ಲಿ ಕೂರುವ ಎಂಎಲ್‌ಎ ಸಾಕು, ಕೆಲಸ ಮಾಡುವ ಎಂಎಲ್‌ಎ ಬೇಕು’, “ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು’ ಎಂಬ ಫ‌ಲಕಗಳನ್ನು ಪ್ರದರ್ಶಿಸಿ ದರು. ಇದರಿಂದ ಹಾಲಾಡಿ ಪರ ಬಣದ ಕಾರ್ಯ ಕರ್ತರು ಆಕ್ರೋಶಗೊಂಡರು. ಸಭೆಯಲ್ಲಿ ಸ್ವಲ್ಪ ಕಾಲ ಗೊಂದಲದ ವಾತಾವರಣ ನೆಲೆಸಿತ್ತು.

ಅಸಮಾಧಾನಗೊಂಡ ಶ್ರೀನಿವಾಸ ಶೆಟ್ಟರು ಎದ್ದು ಹೊರನಡೆಯಲು ಮುಂದಾದಾಗ ಮಧ್ಯ ಪ್ರವೇಶಿಸಿದ ಯಡಿಯೂರಪ್ಪ ಮಾತನಾಡಿ, ಹಾಲಾಡಿ ಅವರು ಬಿಜೆಪಿಗೆ ಬರುವುದನ್ನು ವಿರೋಧಿಸುವವರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ. ಗೂಂಡಾ ಸಂಸ್ಕೃತಿಯ ಕಾರ್ಯಕರ್ತರು ಬೇಕಾ ಗಿಲ್ಲ. ಹಾಲಾಡಿ ವಿರೋಧಿಗಳಿದ್ದರೆ ಎದ್ದು ಹೋಗ ಬಹುದು ಎಂದು ತಿಳಿಸಿದರು.

ಮತ್ತೆ ಬಂದ ಹಾಲಾಡಿ
ಸಮಾವೇಶ ಮುಗಿದು ಗಣ್ಯ ನಾಯಕರೆಲ್ಲ ಅಲ್ಲಿಂದ ತೆರಳಿದ ಸ್ವಲ್ಪ ಹೊತ್ತಲ್ಲಿಯೇ ಅಲ್ಲಿಗೆ ಬಂದ ಶ್ರೀನಿವಾಸ ಶೆಟ್ಟರು ಕಾರ್ಯಕರ್ತರು, ಅಲ್ಲಿದ್ದ ಕಿರಣ್‌ ಕೊಡ್ಗಿ, ಕಾಡೂರು ಸುರೇಶ್‌ ಶೆಟ್ಟಿ ಅವರ ಬಳಿ ಮಾತುಕತೆ ನಡೆಸಿದರು. ಇದೇ ವೇಳೆ ನೀವೇನೂ ಬೇಸರ ಮಾಡಿಕೊಳ್ಳಬೇಡಿ. ನಾವು ನಿಮ್ಮೊಂದಿಗಿದ್ದೇವೆ ಅನ್ನುವ ಮಾತುಗಳು ಅವರ ಅಭಿಮಾನಿಗಳಿಂದ ಕೇಳಿ ಬಂತು. ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಅಲ್ಲಿಂದಲೇ ಕರೆ ಮಾಡಿ ಹೀಗೆ ಕರೆಸಿ ಅವಮಾನ ಮಾಡಿದ್ದು ಯಾಕೆ. ಹೀಗೆಲ್ಲ ಆಗುತ್ತಿದ್ದರೆ ನಾನು ಬರುತ್ತನೇ ಇರಲಿಲ್ಲ ಎಂದು ಹಾಲಾಡಿ ಅಸಮಾಧಾನ ವ್ಯಕ್ತಪಡಿಸಿದರು.

ಡಿವಿಎಸ್‌ ಸಭೆ
ಬಿಎಸ್‌ವೈ ಅವರು ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರೇ ಮುಂದಿನ ಶಾಸಕ ಎಂದಿದ್ದಲ್ಲದೆ, ವಿರೋಧಿಸಿದವರನ್ನು ಗೂಂಡಾ ಕಾರ್ಯಕರ್ತರೆಂದು ಹೇಳಿದ್ದಕ್ಕೆ ಅಸಮಾಧಾನಗೊಂಡಿದ್ದ ಕೆಲವು ಮೂಲ ಬಿಜೆಪಿಗರನ್ನು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿ ಸಭೆ ನಡೆಸಿ, ಅಭ್ಯರ್ಥಿ ಬಗ್ಗೆ ವರಿಷ್ಠರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಲಘು ಲಾಠಿಪ್ರಹಾರ
ಹಾಲಾಡಿ ಪರ-ವಿರೋಧ ಘೋಷಣೆಗಳು ವಿಕೋಪಕ್ಕೆ ತಿರುಗಿದಾಗ ಸ್ವತಃ ಎಸ್‌ಪಿ ಡಾ| ಸಂಜೀವ್‌ ಎಂ. ಪಾಟೀಲ್‌ ಅವರೇ ಪರಿಸ್ಥಿತಿ ಯನ್ನು ನಿಯಂತ್ರಿಸಲು ಆಗಮಿಸಿದರು. ಸಭೆ ಮುಗಿದ ಬಳಿಕವೂ ಸಭಾಂಗಣದಲ್ಲಿ  ಜನ ಸೇರಿದ್ದ ರಿಂದ ಪೊಲೀಸರು ಪರಿಸ್ಥಿತಿ ನಿಯಂತ್ರಿ ಸಲು ಹರಸಾಹಸ ಪಡುತ್ತಿದ್ದರು. ಈ ವೇಳೆ ಕೆಲ ಜನರು ಗುಂಪು – ಗುಂಪಾಗಿ ಸೇರಿ ಮಾತ ನಾಡು ತ್ತಿದ್ದನ್ನು ಗಮನಿಸಿದ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿಪ್ರಹಾರ ನಡೆಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.