ಗೃಹ ಉತ್ಪನ್ನ, ಕರಕುಶಲ ತರಬೇತಿ
Team Udayavani, Mar 6, 2017, 5:14 PM IST
ಉಡುಪಿ: ಹಿಂದೆ ಮಹಿಳೆಯರು ಹೆಚ್ಚಾಗಿ ಗೃಹ ನಿರ್ವಹಣೆ ಜವಾಬ್ದಾರಿ ಮಾತ್ರ ನಿರ್ವಹಿಸುತ್ತಿದ್ದರು. ಈಗ ಮಹಿಳೆಯರು ಪುರುಷರೊಂದಿಗೆ ಸರಿಸಮಾನರಾಗಿ ಉದ್ಯೋಗ ಹಾಗೂ ಎಲ್ಲ ವ್ಯವಹಾರಗಳಲ್ಲಿ ತೊಡಗಿಸಿಕೊಂಡು ಆದಾಯ ಗಳಿಕೆಯತ್ತ ಗಮನಹರಿಸುತ್ತಿದ್ದಾರೆ. ಸಿದ್ಧ ಆಹಾರ, ಸಾರು, ಸಾಂಬಾರು ಹುಡಿ, ಉಪ್ಪಿನ ಕಾಯಿ ಹಪ್ಪಳ ಇವುಗಳಿಗೆ ಹೆಚ್ಚಿನ ಬೇಡಿಕೆಯಿದೆ. ಬೇಡಿಕೆಗನುಸಾರವಾಗಿ ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆ ನೀಡಿದಲ್ಲಿ ಯಶಸ್ಸು ಖಂಡಿತ ಎಂದು ಮಣಿಪಾಲ ಪವರ್ ಸಂಸ್ಥೆಯ ಸ್ಥಾಪಕಾಧ್ಯಕ್ಷೆ, ಉದ್ಯಮಿ ರೇಣು ಜಯರಾಮ್ ಹೇಳಿದರು.
ಬಿವಿಟಿಯಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ ಗೃಹ ಉತ್ಪನ್ನ, ಕರಕುಶಲತೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ವಿಕಾಸ ಟ್ರಸ್ಟಿನ ವಿಶ್ವಸ್ತ ಕೆ. ಎಂ. ಉಡುಪ ಅಧ್ಯಕ್ಷತೆ ವಹಿಸಿದ್ದರು. ಟಿ. ಎ. ಪೈ ಗ್ರಾಮೀಣ ತರಬೇತಿ ಕೇಂದ್ರದ ನಿರ್ದೇಶಕ ಕೃಷ್ಣಾನಂದ ನಾಯಕ್, ಸಿಇಒ ಮನೋಹರ ಕಟೆರಿ, ಆಡಳಿತಾಧಿಕಾರಿ ಐ. ಜಿ. ಕಿಣಿ ಉಪಸ್ಥಿತರಿದ್ದರು.
ಬಿವಿಟಿ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಸ್ವಾಗತಿಸಿದರು. ತರಬೇತಿಯಲ್ಲಿ ಜಿಲ್ಲೆಯ 30 ಕ್ಕೂ ಅಧಿಕ ಮಹಿಳೆಯರು ಭಾಗವಹಿಸುತ್ತಿದ್ದಾರೆ. 5 ದಿನ ನಡೆಯಲಿರುವ ತರಬೇತಿಯಲ್ಲಿ ವಿವಿಧ ರೀತಿಯ ಸಾಂಬಾರು ಹುಡಿ, ಹಪ್ಪಳ, ಸಂಡಿಗೆ, ಫಿನಾಯಿಲ್ ತಯಾರಿ, ಕರಕುಶಲತೆ, ಪೇಪರ್ ಬ್ಯಾಗ್ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ, ಮಾಹಿತಿ ಪಡೆಯಲಿದ್ದಾರೆ. ಸುಮಂಗಲಾ ಮಾಹಿತಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು