ಕಾರ್ಕಳದಲ್ಲಿ ಮನೆ-ಮನ ಆಂದೋಲನ: ಡಿಸಿ, ಎಸ್ಪಿ, ಸಿಇಒ ಭಾಗಿ
Team Udayavani, Jan 28, 2020, 5:54 AM IST
ಕಾರ್ಕಳ: ಎಸೆಸೆಲ್ಸಿ ವಿದ್ಯಾರ್ಥಿಗಳ ಸಂಪೂರ್ಣ ಉತ್ತೀರ್ಣ ಆಂದೋಲನದ ಅಂಗವಾಗಿ ಜ. 27ರಂದು ಬೆಳಗಿನ ಜಾವ 5ರಿಂದ 6.30ರ ವರೆಗೆ ಮನೆ-ಮನ ಆಂದೋಲನ ನಡೆಯಿತು.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ವಿದ್ಯಾಂಗ ಉಪನಿರ್ದೇಶಕರು, ಸ್ಥಳೀಯ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಕಾರ್ಕಳದಲ್ಲಿನ ವಿವಿಧ ಕ್ಷೇತ್ರಗಳ ಗಣ್ಯರು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಧುರೀಣರು, ಉದ್ಯಮಿಗಳು, ಎಲ್ಲ ಸ್ತರದ ಜನಪ್ರತಿನಿಧಿಗಳು ಕನಿಷ್ಠ 5ರಿಂದ ಗರಿಷ್ಠ 10 ಮನೆಗಳಿಗೆ ಏಕಕಾಲದಲ್ಲಿ ಭೇಟಿ ನೀಡುವ ಮೂಲಕ ವಿನೂತನ, ಅಪೂರ್ವ ಆಂದೋಲನವಾಗಿ ಸ್ಮರಣೀಯಗೊಳಿಸಿ ಮಿಷನ್ ಹಂಡ್ರಡ್ ಯೋಜನೆ ಮತ್ತಷ್ಟು ಪರಿಣಾಮಕಾರಿಗೊಳಿಸಿದರು.
554 ಮನೆಗಳಿಗೆ ಭೇಟಿ
ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಬಿಇಒ ಶಶಿಧರ್ ಜಿ.ಎಸ್. ಅವರ ನೇತೃತ್ವದಲ್ಲಿ ಒಂದೇ ದಿನ ಸುಮಾರು 554 ಮನೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ತಮ ಅಂಕ ಗಳಿಸುವಂತೆ ಪ್ರೋತ್ಸಾಹಿಸುವ ಕಾರ್ಯ ಮಾಡಲಾಯಿತು.ಶಿಕ್ಷಕರು ಆಂದೋಲನದಲ್ಲಿ ಅತ್ಯಂತ ಉತ್ಸಾಹದಿಂದಲೇ ಭಾಗವಹಿಸಿದ್ದು, 22 ನೋಡೆಲ್ ಅಧಿಕಾರಿಗಳು ಯೋಜನೆ ಹಿಂದೆ ಕಾರ್ಯನಿರ್ವಹಿಸಿದ್ದರು.ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿ.ಪಂ. ಸಿಇಒ ಪ್ರೀತಿ ಗೆಹೊÉàಟ್, ವಿದ್ಯಾಂಗ ಉಪ ನಿರ್ದೇಶಕ ಶೇಷಶಯನ ಕಾರಿಂಜ,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಹೆಬ್ರಿ ತಹಶೀಲ್ದಾರ್ ಮಹೇಶ್ಚಂದ್ರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ| ಮೇ| ಹರ್ಷ ಕೆ.ಬಿ., ನೋಡಲ್ ಅಧಿಕಾರಿಗಳಾದ ವೆಂಕಟರಮಣ ಕಲ್ಕೂರ್, ಗುಬ್ಬಚ್ಚಿ ನ್ಪೋಕನ್ ಇಂಗ್ಲಿಷ್ ಮತ್ತು ಪೆರ್ಮೆದ ಸ್ವರ್ಣ ಕಾರ್ಲ ನೋಡಲ್ ಅಧಿಕಾರಿಗಳಾದ ರತ್ನಾಕರ್ ಹಾಗೂ ಸಂತೋಷ್ ಕುಮಾರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಜಿ.ಪಂ. ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ರೇಷ್ಮಾ ಉದಯ್ ಕುಮಾರ್, ದಿವ್ಯಾಶ್ರೀ ಅಮೀನ್, ಜ್ಯೋತಿ ಹರೀಶ್, ಉದಯ ಕೋಟ್ಯಾನ್ ಪಾಲ್ಗೊಂಡರು.
ಅಭಿನಂದನೀಯ
ಎಸೆಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಗಾಗಿ ಶಾಸಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಳಜಿ ಹಾಗೂ ಪ್ರಯತ್ನ ಅತ್ಯಂತ ಶ್ಲಾಘನೀಯವಾದುದು. ಹಾಗೆಯೇ ಈ ಆಂದೋಲನದಲ್ಲಿ ಊರಿನ ಮಹನೀಯರು ಹಾಗೂ ಎಲ್ಲ ಶಿಕ್ಷಕರೂ ಸ್ವಯಂಪ್ರೇರಿತರಾಗಿ ಭಾಗಿಯಾಗಿರುವುದು ಅಭಿನಂದನೀಯ.
-ನಾರಾಯಣ ಶೆಣೈ,
ಪೋಷಕರು
ಸ್ಪಂದನೆ
ಶಾಸಕರ ಧ್ಯೇಯ ಸ್ವರ್ಣ ಕಾರ್ಲ, ಸ್ವತ್ಛ ಕಾರ್ಕಳಕ್ಕೆ ಪೂರಕವಾಗಿ ಶಿಕ್ಷಣ ಇಲಾಖೆಯಿಂದ ಪೂರಕ ಚಟುವಟಿಕೆ ಮಾಡಲಾಗುತ್ತಿದೆ. ಕಾರ್ಕಳ ತಾಲೂಕಿನ 2,657 ಮಂದಿ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ತೇರ್ಗಡೆಯಾಗಬೇಕೆಂಬ ನಿಟ್ಟಿನಲ್ಲಿ ಹಮ್ಮಿಕೊಂಡ ಆಂದೋಲನಕ್ಕೆ ಅಭೂತಪೂರ್ವ ಸ್ಪಂದನೆ ದೊರೆತಿದೆ.
-ಶಶಿಧರ್ ಜಿ.ಎಸ್.,
ಕ್ಷೇತ್ರ ಶಿಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ