ಉಡುಪಿ: ಮನೆಯ ಬಾಗಿಲು ಮುರಿದು ಸೊತ್ತು ಕಳವು
Team Udayavani, Sep 10, 2022, 8:01 PM IST
ಉಡುಪಿ: ಮನೆಯೊಂದರ ಮುಖ್ಯದ್ವಾರದ ಬಾಗಿಲು ಮರಿದು ಒಳಪ್ರವೇಶಿಸಿ ಬೆಳ್ಳಿ ಹಾಗೂ ನಗದು ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸೆ. 9ರ ರಾತ್ರಿಯಿಂದ ಮುಂಜಾನೆ ವೇಳೆ ಈ ಕಳ್ಳತನ ನಡೆದಿದೆ. ಕುಂಜಿಬೆಟ್ಟುವಿನ ವೈಷ್ಣವಿ ಮಡಿ ಅವರು ತಂದೆ-ತಾಯಿ ಕುಟುಂಬಸ್ಥರೊಂದಿಗೆ ನೇಪಾಳ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭ ಕಳ್ಳರು ಬಾಗಿಲನ್ನು ಆಯುಧದಿಂದ ಮುರಿದು ಒಳಪ್ರವೇಶಿಸಿ ದೇವರ ಕೋಣೆಯಲ್ಲಿದ್ದ 500 ಗ್ರಾಂ ತೂಕದ ಬೆಳ್ಳಿಯ ದೇವರ ಪೀಠ, 50 ಗ್ರಾಂ ತೂಕದ ಬೆಳ್ಳಿಯ ಸಣ್ಣ ತಟ್ಟೆ, 150 ಗ್ರಾಂ ತೂಕದ ಬೆಳ್ಳಿಯ ಅರಶಿನ ಕುಂಕುಮ ಬೌಲ್, 20 ಗ್ರಾಂ ತೂಕದ ಬೆಳ್ಳಿಯ ಸಣ್ಣ ಕುಂಕುಮ ಕರಡಿಗೆ, 25 ಗ್ರಾಂ ತೂಕದ ಬೆಳ್ಳಿಯ ಗಣಪತಿಯ ಪೀಠ ಸೇರಿ ಒಟ್ಟು 845 ಗ್ರಾಂ ತೂಕದ ಬೆಳ್ಳಿ ಸಾಮಗ್ರಿಗಳು ಮತ್ತು ಸಿಸಿ ಟಿವಿ ಡಿವಿಆರ್, ವೈ -ಫೈ ರೂಟರ್ ಅನ್ನು ಕಳವು ಮಾಡಿದ್ದಾರೆ.
ಕಳವಾದ ಸೊತ್ತುಗಳ ಅಂದಾಜು ಮೌಲ್ಯ 64,000 ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ