ಕೊಲ್ಲೂರು ಪ್ರಾ. ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ ಕೊರತೆ
24x7 ಸೇವೆಯೂ ದಿಢೀರ್ ರದ್ದು!
Team Udayavani, Jun 23, 2019, 5:28 AM IST
ಕೊಲ್ಲೂರು: ವೈದ್ಯರ ಅಭಾವದಿಂದಾಗಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿರುವ ಗ್ರಾಮೀಣ ಜನರು ಈಗ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಪೂರ್ಣಕಾಲಿಕ ವೈದ್ಯರಿಲ್ಲ
ಈ ವರೆಗೆ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದರಿಂದ ಹುದ್ದೆ ಖಾಲಿಯಾಗಿದೆ. ಇದುವರೆಗೆ ಆ ಹುದ್ದೆ ಭರ್ತಿಯಾಗಿಲ್ಲ. ಎಳಜಿತ, ಗೋಳಿಹೊಳೆ, ಅರೆಶಿರೂರು, ಮುದೂರು, ಜಡ್ಕಲ್ ಹಾಗೂ ಕೊಲ್ಲೂರಿನ ರೋಗಿಗಳಿಗೆ ತುರ್ತು ಸೇವೆಗೆ ಕೇಂದ್ರದಲ್ಲಿ ವೈದ್ಯರಿಲ್ಲದ್ದರಿಂದ ಕುಂದಾಪುರ ಅಥವಾ ಬೈಂದೂರಿಗೆ ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಎರವಲು ವೈದ್ಯರ ಸೇವೆ
ವಂಡ್ಸೆ ಹಾಗೂ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪೂರ್ಣಕಾಲಿಕ ಇಬ್ಬರು ವೈದ್ಯರನ್ನು ವಾರದ 3 ದಿನ ಇಲ್ಲಿ ಸೇವೆಗೆ ನಿಯೋಜಿಸಲಾಗುತ್ತಿದೆ. ಆದರೆ ಉಳಿದ ದಿನಗಳಂದು ಸೇವೆಗೆ ಲಭ್ಯವಿಲ್ಲದ್ದರಿಂದ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಬಹುದೂರದ ಮುದೂರು, ಯಳಜಿತ ಮುಂತಾದ ಕಡೆಯಿಂದ ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳ ಗತಿ ಹೇಳತೀರದು.
24X7 ಸೇವೆ ರದ್ದು!
ರೋಗಿಗಳು ಸಹಿತ ಮೂಕಾಂಬಿಕಾ ದೇಗುಲಕ್ಕೆ ಆಗಮಿಸುವ ಭಕ್ತರ ತುರ್ತು ಸೇವೆಗೆ ಆಯೋಜಿಸಲಾಗಿದ್ದ 24X7 ಸೇವೆ ಈಗ ರದ್ದುಗೊಂಡಿದೆ. ಬದಲಿಗೆ ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಸೇವೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ