“ಹನಿ, ತುಂತುರು ನೀರಾವರಿಗಳನ್ನು ಸದುಪಯೋಗಿಸಿ’

ಮಣ್ಣು, ನೀರಿನ ಸಂರಕ್ಷಣೆ ತಾಂತ್ರಿಕತೆ: ವಿಚಾರಸಂಕಿರಣ

Team Udayavani, Jul 16, 2019, 5:36 AM IST

1507GK1

ಉಡುಪಿ: ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತೋಟಗಾರಿಕಾ ಇಲಾಖೆಯಿಂದ ಹಲವಾರು ಕಾರ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಕರಾವಳಿ ಪ್ರದೇಶದಲ್ಲಿ ವಾರ್ಷಿಕವಾಗಿ 4300ರಿಂದ 4800 ಮೀ. ಮೀ. ಮಳೆ ಸುರಿಯುತ್ತಿದೆ. ಆದರೂ ಕೂಡ ಇತ್ತೀಚಿನ ಕೆಲ ದಿನಗಳಲ್ಲಿ ಹಲವೆಡೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತಹ ಸ್ಥಿತಿಯಿದೆ. ರೈತರು ಹನಿನೀರಾವರಿ, ತುಂತುರು ನೀರಾವರಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಡಾ| ಭುವನೇಶ್ವರಿ ಹೇಳಿದರು.

ಉಡುಪಿ ಜಿಲ್ಲಾ ಮಟ್ಟದ ಹಲಸು ಮೇಳದ ಪ್ರಯುಕ್ತ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕೆ ಇಲಾಖೆಯ ಆಶ್ರಯದಲ್ಲಿ ಸೋಮವಾರ ನಡೆದ ಮಣ್ಣು ಮತ್ತು ನೀರಿನ ಸಂರಕ್ಷಣೆ ತಾಂತ್ರಿಕತೆಗಳ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ನೀರು ಶೇಖರಿಸುವ ಜಾಣ್ಮೆಯಿರಲಿ
ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ವಿಭಾಗದ ಮುಖ್ಯಸ್ಥರಾದ ಮಹಾದೇವ ಗೌಡ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಒಂದು ವರ್ಷದಲ್ಲಿ ಕೇವಲ 65 ದಿನ ಮಳೆ ಸುರಿಯುತ್ತದೆ. ಕರಾವಳಿ ಭಾಗದಲ್ಲಿ ವಾರ್ಷಿಕವಾಗಿ 4 ಸಾವಿರ ಮಿ.ಮೀ., ಪಶ್ಚಿಮ ಘಟ್ಟ ಸಾಲಿನಲ್ಲಿ 5 ಸಾವಿರ ಮಿ.ಮೀ.ನಷ್ಟು ಮಳೆ ಸುರಿಯುತ್ತದೆ. ಆ ಸಮಯದಲ್ಲಿ ಶೇಖರಣೆಯಾಗುವ ನೀರನ್ನು ಉಪಯೋಗಿಸುವ ಪರಿಯನ್ನು ರೈತರು ಕರಗತ ಮಾಡಿಕೊಳ್ಳಬೇಕು ಎಂದರು.

ಜಿ.ಪಂ. ಸಿಇಒ ಸಿಂಧೂ ಬಿ.ರೂಪೇಶ್‌, ಕುಂದಾಪುರದ ಹಿರಿಯ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವ ನಾಯ್ಕ, ಪ್ರಗತಿಪರ ಕೃಷಿಕರಾದ ಸತೀಶ್‌ ಶೆಟ್ಟಿ ಯಡ್ತಾಡಿ, ರಾಮಕೃಷ್ಣ ಭಟ್‌ ಕೆಂಜಾರು, ರಾಘವೇಂದ್ರ ನಾಯಕ್‌ ಉಪಸ್ಥಿತರಿದ್ದರು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀನಿವಾಸ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

5 ಟನ್‌ ಹಲಸಿನ ಹಣ್ಣು ಖತಂ!
3 ದಿನಗಳ ಕಾಲ ನಡೆದ ಹಲಸು ಮೇಳದಲ್ಲಿ ಹೋಳಿಗೆ, ಹಲಸಿನ ಬೀಜದ ಚಟ್ಟಂಬಡೆ, ಕಬಾಬ್‌, ಪೋಡಿ, ಮಂಚೂರಿ, ಗಟ್ಟಿ, ಬನ್ಸ್‌, ಶೀರಾ, ಐಸ್‌ಕ್ರಿಂ ಹೋಳಿಗೆ ಸಹಿತ ಸುಮಾರು 40ರಿಂದ 50 ರಷ್ಟು ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಯಿತು. ಸುಮಾರು 5 ಟನ್‌ (900ಕ್ಕೂ ಅಧಿಕ) ಹಲಸಿನ ಹಣ್ಣುಗಳು ಮಾರಾಟವಾದವು. 23 ಸ್ಟಾಲ್‌ಗ‌ಳಿದ್ದು, ಪ್ರತೀ ಸ್ಟಾಲ್‌ನಲ್ಲೂ 50 ರಿಂದ 60 ಸಾವಿರ ರೂ.ನಂತೆ ಒಟ್ಟು 12 ರಿಂದ 15 ಲ.ರೂ. ವ್ಯವಹಾರವಾಯಿತು. 10ರಿಂದ 12 ಸಾವಿರದಷ್ಟು ಜನರು ಭೇಟಿ ನೀಡಿ ತಮಗಿಷ್ಟದ ವಸ್ತುಗಳನ್ನು ಖರೀದಿಸಿ ಖುಷಿಪಟ್ಟಿದ್ದಾರೆ. ಸಸ್ಯಸಂತೆಯಲ್ಲೂ 5 ಸಾವಿರಕ್ಕೂ ಅಧಿಕ ತರಕಾರಿ ಮತ್ತು ವಾಣಿಜ್ಯ ಬೆಳೆ ಗಿಡಗಳು ಮಾರಾಟವಾದವು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.