ಹೊಸಬಾಳು ತಾತ್ಕಾಲಿಕ ಸೇತುವೆ ನೀರುಪಾಲು


Team Udayavani, Jun 14, 2018, 6:00 AM IST

1306side2.jpg

ಸಿದ್ದಾಪುರ: ಹೊಸಬಾಳು ಬಳಿ ಕುಬಾj ನದಿಗೆ 40 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆ ಸಂಪೂರ್ಣ ಶಿಥಿಲವಾಗಿರುವ ಹಿನ್ನೆಲೆಯಲ್ಲಿ ಪರ್ಯಾಯವಾಗಿ 3.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬದಲಿ ಸೇತುವೆ (ಮೋರಿ) ಕೂಡ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಪರಿಣಾಮ ಹೊಸಂಗಡಿ ಹಾಗೂ ಯಡಮೊಗೆ ಸಂಪರ್ಕ ಕಡಿತಗೊಂಡಿದೆ.

ಜಿಲ್ಲಾ ಪಂಚಾಯತ್‌ ಅನುದಾನದಡಿ 3.50 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ಪಕ್ಕದಲ್ಲೇ 12 ಪೈಪ್‌ಗ್ಳನ್ನು ಹಾಕಿ ಮೋರಿ ನಿರ್ಮಿಸಲಾಗಿತ್ತು. ಅದು ಸೇತುವೆಗಿಂತ ಕೆಳಮಟ್ಟದಲ್ಲಿರುವುದರಿಂದ ಭಾರೀ ಮಳೆ ಬಂದಾಗ ನೆರೆಯಲ್ಲಿ ಕೊಚ್ಚಿಕೊಂಡು ಹೋಗಿದೆ. ನೂರಾರು ವಿದ್ಯಾರ್ಥಿಗಳು, ನಿತ್ಯ ಸಂಚಾರಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಬೇರೆ ದಾರಿಯಿಲ್ಲದೆ ಸುತ್ತು ಬಳಸಿ ಯಡಮೊಗೆಯಿಂದ ಕಾರೂರು ಮಾರ್ಗವಾಗಿ ಕೆರೆಕಟ್ಟೆಗೆ ಬಂದು ಅಲ್ಲಿಂದ ಹೊಸಂಗಡಿಗೆ ತೆರಳಬೇಕಾದ ಪರಿಸ್ಥಿತಿ ಬಂದೊದಗಿದೆ.

ಹಳೆಯ ಸೇತುವೆ
ಹೊಸಬಾಳು ಸೇತುವೆ ಶಿಥಿಲವಾಗಿ ವರ್ಷಗಳೇ ಉರುಳಿವೆ. ಕಳೆದ ವರ್ಷ ಸ್ಥಳೀಯರು  ಜಿಲ್ಲಾ ಪಂಚಾಯತ್‌ಗೆ ದೂರು ಕೊಟ್ಟಿದ್ದರಿಂದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು  ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶಿವಾನಂದ ಕಾಪಶಿ ಅವರು ಸ್ವತಃ ಸ್ಥಳವನ್ನು ಪರಿಶೀಲಿಸಿದ್ದರು. ಬಳಿಕ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಪರ್ಯಾಯ ರಸ್ತೆ ದುರಸ್ತಿ ಮಾಡಿ
ಇಲ್ಲಿನ 150ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹೊರಭಾಗದ ಶಾಲೆ-ಕಾಲೇಜುಗಳಿಗೆ ತೆರಳುತ್ತಾರೆ. ಬಸ್‌ ಸಂಚಾರವೂ ಇದೆ. ಆದರೆ ಈಗ ಸೇತುವೆಯೇ ಕೊಚ್ಚಿ ಹೋಗಿದೆ. ಹತ್ತಿರದಲ್ಲೇ ಬದಲಿ ವ್ಯವಸ್ಥೆ ಕಲ್ಪಿಸಿ ಅಥವಾ ಪರ್ಯಾಯವಾಗಿ ಸಂಪೂರ್ಣ ಹದಗೆಟ್ಟಿರುವ ಕಾರೂರು – ಕೆರೆಕಟ್ಟೆ – ಹೊಸಂಗಡಿ ರಸ್ತೆಯನ್ನು ಶೀಘ್ರ ದುರಸ್ತಿ ಮಾಡಿ ಆ ಮಾರ್ಗದಲ್ಲಿ ಬಸ್‌ ಸಂಚಾರ ಆರಂಭಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳಪೆ ಕಾಮಗಾರಿ ಕಾರಣ
ಪ್ರಸ್ತುತ ನೀರುಪಾಲಾಗಿರುವ ಈ ಮೋರಿಯ ನಿರ್ಮಾಣಕ್ಕೆ ಜಿ.ಪಂ.ನಿಂದ 3.50 ಲಕ್ಷ ರೂ. ಬಿಡುಗಡೆಯಾಗಿತ್ತು. ಆದರೆ ಮೋರಿಯ ಕಾಮಗಾರಿ ನೋಡಿದರೆ ಕೇವಲ 1ರಿಂದ 1.50 ಲಕ್ಷ ರೂ. ವೆಚ್ಚ ಆಗಿರಬಹುದು. ಬಾಕಿ ಉಳಿದ 2 ಲಕ್ಷ ರೂ. ಕಾಣದ ಕೈಗಳ ಪಾಲಾಗಿದೆ. ಮಂಜೂರಾದ ಅನುದಾನವನ್ನು ಸಂಪೂರ್ಣವಾಗಿ ಬಳಸಿದ್ದರೆ ಮೊನ್ನೆಯ ಮಳೆಗೆ ಈ ಮೋರಿ ಕೊಚ್ಚಿಹೊಗುತ್ತಿರಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು
ಹೊಸಬಾಳು ಸೇತುವೆ ಸಮಸ್ಯೆಯನ್ನು ವೀಕ್ಷಿಸಿದ್ದೇನೆ. ಈ ಬಗ್ಗೆ ತತ್‌ಕ್ಷಣ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಸಿದ್ದಾಪುರ ಜಿ.ಪಂ. ಉಪ ಚುನಾವಣೆ ಮುಗಿದ ಬಳಿಕ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
– ಬಿ.ಎಂ. ಸುಕುಮಾರ ಶೆಟ್ಟಿ, 
ಬೈಂದೂರು ಶಾಸಕ

ಬೇರೆ ಮಾರ್ಗವಾಗಿ ಸಂಚಾರಕ್ಕೆ ಮನವಿ
ಸೇತುವೆ ಕೊಚ್ಚಿ ಹೋಗಿರುವುದರಿಂದ  ಕೆರೆಕಟ್ಟೆ-ಹೊಸಂಗಡಿ ಮಾರ್ಗವನ್ನು ಪರ್ಯಾಯವಾಗಿ ಬಳಸುವಂತೆ ಜನರಿಗೆ ತಿಳಿಸುತ್ತಿದ್ದೇವೆ. ಪಂಚಾಯತ್‌ ರಾಜ್‌ ಇಲಾಖೆಯ ಸೂಚನೆ ಮೇರೆಗೆ ರಸ್ತೆಯನ್ನು ಸಂಪೂರ್ಣವಾಗಿ ಬಂದ್‌ ಮಾಡಿ, ನಾಮಫಲಕ ಅಳವಡಿಸುತ್ತೇವೆ.
– ಸುದರ್ಶನ್‌, 
ಪಿಡಿಒ ಯಡಮೊಗೆ 

ಉದಯವಾಣಿ ಎಚ್ಚರಿಸಿತ್ತು
ಯಡಮೊಗೆ-ಹೊಸಂಗಡಿ ಸಂಪರ್ಕ ಕಡಿದುಕೊಳ್ಳುವ ಆತಂಕದ ಬಗ್ಗೆ ಉದಯವಾಣಿ ಜೂ. 9ರಂದು ವಿಶೇಷ ವರದಿ ಮೂಲಕ ಗಮನಸೆಳೆದಿತ್ತು. ಆದರೆ ಆಡಳಿತ ವರ್ಗದ ಆಲಸ್ಯದಿಂದಾಗಿ ಸ್ಥಳೀಯರು ಸಂಕಷ್ಟಕ್ಕಿಡಾಗಿದ್ದಾರೆ.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.