ಜಗುಲಿಯಲ್ಲಿದ್ದ ಹೊಸಾಳ ಶಾಲೆಗೆ ಬಂಡಾರಕೇರಿ ಮಠ ಸ್ಥಳದಾನ

ಹೊಸಾಳ ಸ.ಹಿ.ಪ್ರಾ. ಶಾಲೆಗೆ 110 ವರ್ಷಗಳ ಇತಿಹಾಸ

Team Udayavani, Nov 9, 2019, 5:12 AM IST

0611BVRE2

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಬ್ರಹ್ಮಾವರ: ಗ್ರಾಮೀಣ ಭಾಗದ ಜನತೆಗೆ ಅಕ್ಷರದ ಅರಿವು ಮೂಡಿಸುವ ಮಹತ್ವಾಕಾಂಕ್ಷೆಯಿಂದ ಹೊಸಾಳ ಶಾಲೆಯು 1910ರಲ್ಲಿ ದಿ. ಆದಪ್ಪ ಶೆಟ್ಟಿ ನಾಗರಮಠ ಅವರ ಮನೆಯ ಜಗಲಿಯಲ್ಲಿ ಆರಂಭಗೊಂಡಿತು.

ಹೊಸಾಳ ಭಾಗದ ಹೆಚ್ಚಿನ ವಿದ್ಯಾರ್ಥಿ ಗಳ ಕಲಿಕೆಯ ಅನುಕೂಲತೆಯ ದೃಷ್ಟಿ ಯಿಂದ ಈ ಶಾಲೆಯು ನಾಗರಮಠದಿಂದ ಧೂಮ ಪೂಜಾರಿ ಹಾಡಿಮನೆ ಹೊಸಾಳ ಅವರ ಮನೆಯ ಜಗಲಿಗೆ ಸ್ಥಳಾಂತರ ಗೊಂಡಿತು. ನಂತರದ ದಿನಗಳಲ್ಲಿ ಹೊಸಾಳದ ಶಿಕ್ಷಣ ಪ್ರೇಮಿ ದಿ. ಕೆ. ಯಜ್ಞನಾರಾಯಣ ರಾವ್‌ ಅವರು ಬಂಡಾರಕೇರಿ ಮಠದಿಂದ ಸ್ಥಳಾವಕಾಶ ಪಡೆದು ಸ್ವಂತ ಶಾಲಾ ಕಟ್ಟಡ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾದರು.

ಶಾಲಾ ಪ್ರಾರಂಭದ ದಿನಗಳು
ಪ್ರಾರಂಭದ ದಿನಗಳಲ್ಲಿ ಮಂಜುನಾಥ ನಾಯಕ್‌ ಅವರು ಏಕೋಪಾಧ್ಯಾಯರಾಗಿದ್ದರು ಎನ್ನಲಾಗಿದೆ. ಶಾಲೆ ಒಂದು ಕಾಲದಲ್ಲಿ ಸುಮಾರು 600 ವಿದ್ಯಾರ್ಥಿಗಳವರೆಗೂ ದಾಖಲಾತಿಯನ್ನು ಹೊಂದಿತ್ತು. ಶಾಲಾ ಪ್ರಾರಂಭದ ದಿನಗಳಲ್ಲಿ ಹೊಸಾಳ, ನಾಗರಮಠ, ಚಂಡೆ, ಹೇರಾಡಿ, ಸಂಕಾಡಿ, ಮಸ್ಕಿಬೈಲು, ಚೌಳಿಕೆರೆ, ಬಾೖರ್‌ಬೆಟ್ಟು ಮತ್ತು ಬಾಕೂìರು ಪ್ರದೇಶಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ಈಗ ಈ ವ್ಯಾಪ್ತಿಯಲ್ಲಿ 4 ಶಾಲೆಗಳಿವೆ.

ಪ್ರಸ್ತುತ 44 ವಿದ್ಯಾರ್ಥಿಗಳ ವ್ಯಾಸಂಗ
ಪ್ರಸ್ತುತ ಶಾಲೆಯಲ್ಲಿ 44 ವಿದ್ಯಾರ್ಥಿಗಳಿದ್ದು, 4 ಜನ ಖಾಯಂ ಶಿಕ್ಷಕರು ಮತ್ತು ಒಬ್ಬರು ಗೌರವ ಶಿಕ್ಷಕಿ ಸೇವೆ ಸಲ್ಲಿಸುತ್ತಿದ್ದಾರೆ ಇನೆ³„ಯರ್‌ ಅವಾರ್ಡ್‌ನಲ್ಲಿ ರಾಜ್ಯ ಮಟ್ಟ, ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.

ಕೊಡುಗೆ
ಭಂಡಾರಕೇರಿ ಮಠದವರು 1.15 ಎಕ್ರೆ ಸ್ಥಳ ಶಾಲೆಗೆ ದಾನವಾಗಿ ನೀಡಿದ್ದು, ದಿ. ಆದಪ್ಪ ಶೆಟ್ಟಿ ಅವರು 0.20 ಎಕ್ರೆ ಸ್ಥಳ ದಾನ ನೀಡಿರುತ್ತಾರೆ. ಸರ್ಕಾರದಿಂದ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಆಟದ ಮೈದಾನಕ್ಕೆ 0.75 ಎಕ್ರೆ ಸ್ಥಳ ಮಂಜೂರಾಗಿದೆ. ಗ್ರಾಮೀಣ ಭಾಗದ ಶಾಲೆಯಾದರೂ ಉತ್ತಮ ಮೂಲಭೂತ ಸೌಕರ್ಯ ಹೊಂದಿದೆ. ವಿದ್ಯಾರ್ಥಿಗಳಿಗೆ ಶಾಲಾವನ, ಸುಸಜ್ಜಿತ ಶೌಚಾಲಯ, ಅತ್ಯುತ್ತಮ ಕ್ರೀಡಾಂಗಣ, ರಂಗಮಂದಿರ, 3000ಕ್ಕೂ ಹೆಚ್ಚು ಪುಸ್ತಕಗಳನ್ನೊಳಗೊಂಡ ಗ್ರಂಥಾಲಯ, 6 ಕಂಪ್ಯೂಟರ್‌ಗಳನ್ನು ಹೊಂದಿದ ಕಂಪ್ಯೂಟರ್‌ ಶಿಕ್ಷಣ, ವಿದ್ಯಾರ್ಥಿಗಳ ಕ್ರೀಡೆಗಾಗಿ ಬಾಲವನ, ಸ್ಮಾರ್ಟ್‌ ಕ್ಲಾಸ್‌ ರೂಂ, ಹೂದೋಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಳು ಇಲ್ಲಿವೆ.

ವಿವಿಧ ಪ್ರಶಸ್ತಿಗಳು
2018-19ರಲ್ಲಿ ಶಾಲಾವನ, ಹಳ್ಳಿ ಔಷಧಿ ಗಿಡಗಳ ತೋಟ, ತರಕಾರಿ ತೋಟ ರಚನೆಗಾಗಿ ಕಿತ್ತಳೆ ಶಾಲೆ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ಹಳೆ ವಿದ್ಯಾರ್ಥಿ ಸಂಘ ಪ್ರಶಸ್ತಿ ದೊರೆತಿದೆ. ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ಹಲವಾರು ಶಿಕ್ಷಕರು ಜನಮೆಚ್ಚಿದ ಶಿಕ್ಷಕ, ಜಿಲ್ಲಾ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ನಿವೃತ್ತ ಶಿಕ್ಷಕ ವಾಸುದೇವ ಕಾಮತ್‌ ನಾಗರಮಠ ಅವರು ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ ಈ ಸಂಸ್ಥೆಯ ವಿದ್ಯಾರ್ಥಿಯಾಗಿ ತದನಂತರ ಸರ್ಕಾರಿ ವೈದ್ಯಾಧಿಕಾರಿಯಾಗಿ 32 ವರ್ಷಗಳ ಕಾಲ ಸುದೀರ್ಘ‌ ಸೇವೆ ಸಲ್ಲಿಸಲು ಈ ಸಂಸ್ಥೆಯ ಗುರುಗಳು ನೀಡಿದ ಶಿಕ್ಷಣ ಹಾಗೂ ಮಾಡಿದ ಆಶೀರ್ವಾದವೇ ಕಾರಣ.
– ಡಾ| ಅಪ್ಪು ಸೇರ್ವೆಗಾರ್‌, (ಹಳೆ ವಿದ್ಯಾರ್ಥಿ)

ಶ‌ತಮಾನೋತ್ಸವ ಕಂಡ ಹೊಸಾಳ ಸ.ಹಿ.ಪ್ರಾ. ಶಾಲೆ ಯನ್ನು ಉಳಿಸುವ ನಿಟ್ಟಿನಲ್ಲಿ ಊರ ಪರ ಊರ ದಾನಿಗಳು, ಹಳೆ ವಿದ್ಯಾರ್ಥಿಗಳು, ಎಸ್‌.ಡಿ.ಎಂ.ಸಿ., ಪೋಷಕರು, ಶಿಕ್ಷಕರ ಶ್ರಮ ಅಮೂಲ್ಯವಾದದ್ದು. ವರ್ಷಂಪ್ರತಿ ಹಳೆ ವಿದ್ಯಾರ್ಥಿಗಳ ಜತೆ ಸ್ನೇಹ ಸಮ್ಮಿಲನವನ್ನು ಹಮ್ಮಿಕೊಳ್ಳಲಾಗುತ್ತಿದೆ.
– ಶ್ಯಾಮಸುಂದರ್‌ ಶೆಟ್ಟಿ ಎನ್‌. ಪ್ರಭಾರ ಮುಖ್ಯೋಪಾಧ್ಯಾಯರು

-ಪ್ರವೀಣ್‌ ಮುದ್ದೂರು

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.