ಜಿಲ್ಲೆಯಲ್ಲಿವೆ ಸಾವಿರಾರು ನಿರುಪಯುಕ್ತ ಕೊಳವೆ ಬಾವಿಗಳು


Team Udayavani, May 21, 2019, 6:10 AM IST

kolave-bavi

ಉಡುಪಿ: ಉಡುಪಿ ನಗರ ಸೇರಿದಂತೆ ಐದು ನಗರ ಸ್ಥಳೀಯ ಸಂಸ್ಥೆಗಳು ಮತ್ತು 158 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಕೇಳುತ್ತಿರುವಂತೆ ಜಿಲ್ಲೆಯಲ್ಲಿ ಐದಾರು ಸಾವಿರ ಕೊಳವೆಬಾವಿಗಳು ನಿರುಪಯುಕ್ತವಾಗಿ ಬಿದ್ದಿರುವುದು ಮತ್ತು ಶೇ.20 ಕೊಳವೆಬಾವಿಗಳೂ ಉಪಯೋಗಕ್ಕೆ ಬಾರದೆ ಇರುವುದು ತಿಳಿದುಬಂದಿದೆ.

ಇದಕ್ಕೆ ಕಾರಣ ಸರಕಾರದ ಆಡಳಿತಾತ್ಮಕ ದೋಷ. ನಾಲ್ಕೈದು ಹಿಂದೆ ತಾಲೂಕು ಕೇಂದ್ರದಲ್ಲಿ ತಾ.ಪಂ. ಸುಪರ್ದಿಯಲ್ಲಿ ಇದರ ನಿರ್ವಹಣೆ ನಡೆಯುತ್ತಿತ್ತು. ಈಗ ಕೊಳವೆಬಾವಿಗಳ ನಿರ್ವಹಣಾ ಜವಾಬ್ದಾರಿಯನ್ನು ಗ್ರಾ.ಪಂ.ಗೆ ವಹಿಸಿಕೊಡಲಾಗಿದೆ. ಹಿಂದೆ ಕೈಪಂಪು ತುಂಡಾಗಿದ್ದರೆ, ಪಂಪು ಕೆಟ್ಟು ಹೋಗಿದ್ದರೆ ಹೀಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ತಿಳಿದುಬಂದ ಕೂಡಲೇ ಅಲ್ಲಿಗೆ ನಿರ್ವಹಣಾ ವ್ಯಕ್ತಿಗಳು ಹೋಗಿ ದುರಸ್ತಿ ಮಾಡುತ್ತಿದ್ದರು.

ಇದಕ್ಕೆ ಬೇಕಾದ ಮಾನವ ಮತ್ತು ಯಾಂತ್ರಿಕ ಸಂಪನ್ಮೂಲ ತಾಲೂಕು ಕೇಂದ್ರಗಳಲ್ಲಿತ್ತು. ಇದರ ಖರ್ಚನ್ನು ಗ್ರಾ.ಪಂ. ವಹಿಸಿಕೊಳ್ಳುತ್ತಿತ್ತು. ಆಗ ಜಿ.ಪಂ. ಮೂಲಕ ತಾ.ಪಂ.ಗೆ, ತಾ.ಪಂ. ಮೂಲಕ ಗ್ರಾ.ಪಂ.ಗೆ ನಿರ್ವಹಣಾ ಅನುದಾನ ಬರುತ್ತಿತ್ತು. ಈಗ ಇದಕ್ಕಾಗಿ ಪ್ರತ್ಯೇಕ ಅನುದಾನ ಬರುತ್ತಿಲ್ಲ. ಕೇಂದ್ರ ಸರಕಾರದಿಂದ ಬರುವ 14ನೆಯ ಹಣಕಾಸು ಆಯೋಗದ ಅನುದಾನದಲ್ಲಿ ಕುಡಿಯುವ ನೀರಿನ ನಿರ್ವಹಣೆ ನೋಡಿಕೊಳ್ಳಲು ಸೂಚನೆ ಬಂದಿದೆ. ಹೀಗಾಗಿ ರಾಜ್ಯ ಸರಕಾರವೂ ವಿಶೇಷ ಆದ್ಯತೆ ಕೊಟ್ಟಿಲ್ಲ. ಕನಿಷ್ಠ ಶೇ.20 ಅನುದಾನವನ್ನು ಇರಿಸಿಕೊಳ್ಳಬಹುದೆಂದು ಸೂಚಿಸಲಾಗಿದೆಯಾದರೂ ಬಹುತೇಕ ಮೊತ್ತವನ್ನು ಹೊಸ ಕಾಮಗಾರಿಗಳಿಗೆ ಗ್ರಾ.ಪಂ. ಉಪಯೋಗಿಸುತ್ತಿದೆ. ಇದರಿಂದ ಹಳೆ ಕೊಳವೆಬಾವಿ ದುರಸ್ತಿ ಅಷ್ಟಕ್ಕಷ್ಟೆ ನಡೆಯುತ್ತಿದೆ.

ಮಾನವ ಸಂಪನ್ಮೂಲದ ಕೊರತೆ
ಗ್ರಾ.ಪಂ. ಮಟ್ಟದಲ್ಲಿ ಕೊಳವೆಬಾವಿ ದುರಸ್ತಿ ಮಾಡುವ ವ್ಯಕ್ತಿಗಳ ಕೊರತೆ ಇದೆ. ಹಿಂದೆ ತಾಲೂಕು ಮಟ್ಟದಲ್ಲಿ ಒಂದಿಬ್ಬರು ಮಾನವ ಸಂಪನ್ಮೂಲ ವ್ಯಕ್ತಿಯನ್ನು ಗುರುತಿಸಿ ಇಡುತ್ತಿದ್ದರು. ಅವರಿಗೆ ತಿಳಿಸಿದಾಗ ಬಂದು ಮಾಡಿ ಹೋಗುತ್ತಿದ್ದರು. ಈಗ ಕೊಳವೆಬಾವಿಗಳ ಸಂಖ್ಯೆ ಹೆಚ್ಚಿದೆ. ಇನ್ನೊಂದೆಡೆ ಕೊಳವೆಬಾವಿ ದುರಸ್ತಿ ಮಾಡುವ ವ್ಯಕ್ತಿಗಳು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಕೆಟ್ಟು ಹೋದ ಕೊಳವೆಬಾವಿಯನ್ನು ಮುಟ್ಟುವವರು ಇಲ್ಲವಾಗಿದೆ. ಒಟ್ಟಾರೆ ಲಕ್ಷಾಂತರ ರೂ. ವೆಚ್ಚ ಮಾಡಿ ಕೊರೆಸಿದ ಕೊಳವೆಬಾವಿಗಳು ಪಾಳುಬಿದ್ದಿವೆ.

ಉಪಯೋಗಿಸದಿದ್ದರೆ ನಿರುಪಯುಕ್ತ
ಕೊಳವೆಬಾವಿಗಳು ಬಳಸುತ್ತಿದ್ದರೆ ಮಾತ್ರ ಅದರಿಂದ ಬರುವ ನೀರನ್ನು ಉಪಯೋಗಿಸುವುದು ಸಾಧ್ಯ. ಬಳಸದೆ ಇದ್ದರೆ ಕಬ್ಬಿಣದ ಕೊಳವೆಯಿಂದ ಕಬ್ಬಿಣದ ಅಂಶ ಸೇರಿ ನೀರು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಕೆಲವು ಬಾರಿ ಕೆಸರು ಸೇರಿಕೊಂಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇಂತಹ ನೀರನ್ನು ಹೊರಗೆ ಹಾಕಿದರೆ ಮಾತ್ರ ಕುಡಿಯಲು ಯೋಗ್ಯವಾಗಿರುತ್ತದೆ. ಇಂತಹ ಕೆಲಸ ನಡೆಯುತ್ತಿಲ್ಲವಾದ ಕಾರಣ ಕೊಳವೆಬಾವಿಗಳು ನಿರುಪಯುಕ್ತವಾಗಿವೆ. ಒಂದು ಕೊಳವೆಬಾವಿ ಅವಧಿ 10ರಿಂದ 15 ವರ್ಷ. ಹೀಗೆ ನಿರುಪಯುಕ್ತವಾಗಿದ್ದರೆ ಅದನ್ನು ಮರು ಉಪಯೋಗಗೊಳಿಸುವುದೂ ಕಷ್ಟಸಾಧ್ಯ.

ಗ್ರಾ.ಪಂಗೆ ವಹಿಸಿಕೊಡಲಾಗಿದೆ
ಯಾರು ಬಳಕೆದಾರರೋ ಅವರೇ ಅದರ ನಿರ್ವಹಣಾ ಜವಾಬ್ದಾರಿ ವಹಿಸಿಕೊಳ್ಳುವುದು ಉತ್ತಮ. ಈ ಕಾರಣಕ್ಕಾಗಿ ಗ್ರಾ.ಪಂ.ಗೆ ವಹಿಸಿಕೊಡಲಾಗಿದೆ. ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ತಿಳಿದು ಬಗೆಹರಿಸಲು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೂ ಸೂಚನೆ ಕೊಡಲಾಗಿದೆ. ಸಮನ್ವಯದ ದೃಷ್ಟಿಯಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಗಮನಹರಿಸುತ್ತೇವೆ.
– ಸಿಂಧು ಬಿ. ರೂಪೇಶ್‌, ಉಡುಪಿ ಜಿ.ಪಂ. ಸಿಇಒ.

ಸಲಹೆ
ಪ್ರತಿ ತಾಲೂಕಿನಲ್ಲಿ ಕೊಳವೆಬಾವಿ ದುರಸ್ತಿಪಡಿಸುವ ಮಾನವ ಸಂಪನ್ಮೂಲ ಕೋಶ ಸಿದ್ಧಪಡಿಸಿ ಗ್ರಾ.ಪಂ.ಗಳಿಗೆ ಕಳುಹಿಸಿದರೆ ಅವರು ಅಗತ್ಯವಿದ್ದಾಗ ಅವರಿಗೆ ತಿಳಿಸಬಹುದು. ಈಗ ಕೊಳವೆಬಾವಿ ದುರಸ್ತಿಪಡಿಸುವ ಮಾನವ ಸಂಪನ್ಮೂಲದ ಕೊರತೆ ಇದೆ. ಹೀಗಾಗಿ ಪ್ರತಿ ಗ್ರಾ.ಪಂ.ನಲ್ಲಿರುವ ಕುಡಿಯುವ ನೀರಿಗೆ ಸಂಬಂಧಿಸಿದ ಸಿಬಂದಿಗೆ ಜಿಲ್ಲಾ ಅಥವಾ ರಾಜ್ಯ ಮಟ್ಟದಲ್ಲಿ ತರಬೇತಿ ಕೊಡಿಸಿದರೆ ಇವರನ್ನೇ ಕೊಳವೆಬಾವಿ ದುರಸ್ತಿಗೆ ಮಾನವ ಸಂಪನ್ಮೂಲವಾಗಿ ಬಳಸಿಕೊಳ್ಳಬಹುದು. ಸದ್ಯ ಈ ಕೆಲಸ ನಡೆಯುತ್ತಿಲ್ಲ. ಜಿಲ್ಲಾ ಮಟ್ಟದಲ್ಲಿ ಜಿ.ಪಂ. ಆಸಕ್ತಿ ವಹಿಸಿ ತರಬೇತಿ ಕಾರ್ಯಾಗಾರ ನಡೆಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ. ಇಲ್ಲವಾದರೆ ನಮ್ಮದೇ ತೆರಿಗೆ ಹಣ ಪೋಲಾಗಿ ಹೋಗುತ್ತದೆ.

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.