ಧರ್ಮದಿಂದ ಮಾನವ ನೆಲೆಗಟ್ಟು ಗಟ್ಟಿ – ವಿದ್ಯಾಪ್ರಸನ್ನ ಶ್ರೀಪಾದರು
Team Udayavani, Apr 2, 2017, 5:43 PM IST
ಹೆಬ್ರಿ : ಧರ್ಮ ನಮ್ಮನ್ನು ಕಾಪಾಡುತ್ತದೆ.ವಿಶೇಷ ಸನ್ನಿಧಾನವಿರುವಂತಹ ಅನಂತ ಪದ್ಮನಾಭನ ಪುಣ್ಯ ಕಾರ್ಯದಲ್ಲಿ ಸೇವೆ ಸಲ್ಲಿಸುವ ಭಾಗ್ಯ ದೊಡ್ಡದು.ಸದಾ ಧರ್ಮಮಾರ್ಗದಲ್ಲಿ ನಡೆಯುವುದರ ಮೂಲಕ ಭಗವಂತನ ವಿಶೇಷ ಕೃಪೆಗೆ ಪಾತ್ರರಾಗಲು ಸಾಧ್ಯ.ಧರ್ಮದಿಂದ ಮಾನವ ನೆಲೆಗಟ್ಟು ಗಟ್ಟಿಯಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಶ್ರೀಪಾದರು ಹೇಳಿದರು.
ಅವರು ಕಾರ್ಕಳ ತಾಲೂಕಿನ ಹೆಬ್ರಿಯ ಇತಿಹಾಸ ಪ್ರಸಿದ್ಧ ಶ್ರೀ ಅನಂತಪದ್ಮನಾಭ ದೇವಸ್ಥಾನದ ಅಷ್ಟಬಂಧ ಸಹಿತ ಶ್ರೀ ದೇವರ ಪುನರ್ ಪ್ರತಿಷ್ಠೆ ಸಹಸ್ರ ಕಲಶ ಸಹಿತ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಮಹೋತ್ಸವದ ಅಂಗವಾಗಿ ಎ.2ರಂದು ಮಧ್ಯಾಹ್ನ ನಡೆದ ಧಾರ್ಮಿಕ ಸಭೆಯಲ್ಲಿ ಪ್ರವಚನ ನೀಡಿದರು.ಕೇವಲ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡರೆ ಮಾತ್ರ ಭಗವಂತನ ಕೃಪೆ ಅಲ್ಲ ಬ್ರಹ್ಮಕಲಶದ ಬಳಿಕವೂ ಪ್ರತಿಯೊಬ್ಬರು ತಮ್ಮ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ನಿರಂತರ ಭಗವಂತನ ಸೇವೆಯಲ್ಲಿದ್ದಾಗ ಮಾತ್ರ ದೇವರ ಪೂರ್ಣ ಅನುಗ್ರಹವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀಣೋದ್ಧಾರ ಸಮಿತಿಯ ಅಧ್ಯಕ್ಷ ಎಚ್ ಬಾಲಕೃಷ್ಣ ನಾಯಕ್ ವಹಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಕೈ ಜೋಡಿಸಿದ ದಾನಿಗಳನ್ನು ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆರ್ಥಿಕ ಸಮಿತಿಯ ಅಧ್ಯಕ್ಷ ಎಚ್ ಪ್ರಸಾದ್ ಬಲ್ಲಾಳ್, ಕ್ಷೇತ್ರೇಶರ ತಾರನಾಥ ಬಲ್ಲಾಳ್,ಸಮ್ಮಾನ ಸಮಿತಿಯ ಅಧ್ಯಕ್ಷ ಸುಧೀರ್ ನಾಯಕ್,ಆರ್ಥಿಕ ಸಮಿತಿಯ ಸಂಚಾಲಕ ಎಚ್. ಸತೀಶ್ ಪೈ,ಪ್ರಚಾರ ಹಾಗೂ ಸಂಪರ್ಕ ಸಮಿತಿಯ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿç ಮೊದಲಾದವರಿದ್ದರು.ಅರ್ಚಕ ಗಿಲ್ಲಾಳಿ ಪದ್ಮನಾಭ ಆಚಾರ್ಯ ಸ್ವಾಗತಿಸಿ,ಪ್ರಕಟನಾ ಸಮಿತಿಯ ಅಧ್ಯಕ್ಷ ಟಿ.ಜಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ,ಡಾ| ಭಾರ್ಗವಿ ಐತಾಳ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್