ಹುಂಡೇಕರ್‌ ವರದಿ: ತಾಲೂಕು ಕೇಂದ್ರ ಎಲ್ಲಿ ಆಗಬೇಕೆಂಬ ಪ್ರಸ್ತಾಪ ಇಲ್ಲ


Team Udayavani, Mar 28, 2017, 4:34 PM IST

29-KUNDAPUR-4.jpg

ಕುಂದಾಪುರ: ಹುಂಡೇಕರ್‌ ಸಮಿತಿ ವರದಿಯಲ್ಲಿ ದೊಡ್ಡ ತಾಲೂಕುಗಳಲ್ಲಿ ಸಂಪರ್ಕದ ವ್ಯವಸ್ಥೆಗಳು ಅಂದು ಕಡಿಮೆ ಇರುವ ಹಿನ್ನೆಲೆಯಲ್ಲಿ ಜನರಿಗೆ ಹತ್ತಿರದಲ್ಲೇ ಸೌಲಭ್ಯಗಳು ದೊರಕಲಿ ಎನ್ನುವ ಅಭಿವೃದ್ಧಿ  ದೃಷ್ಟಿಕೋನದಲ್ಲಿ ಅಂತಹ ತಾಲೂಕನ್ನು  ಒಡೆದು  ಎರಡು ತಾಲೂಕನ್ನಾಗಿ ಮಾಡಬೇಕೆಂದು ಸೂಚಿಸಿದ್ದರು. ಆದರೆ ಈ ವರದಿಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ  ಎಂದು ನ್ಯಾಯವಾದಿ  ಟಿ.ಬಿ. ಶೆಟ್ಟಿ ಹೇಳಿದರು.

ಅವರು ರವಿವಾರ ಸಂಜೆ ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ  ನಡೆದ ವಂಡ್ಸೆ ಹೋಬಳಿ ಹಿತರಕ್ಷಣಾ ವೇದಿಕೆಯ  ನೇತೃತ್ವದಲ್ಲಿ  ನಡೆದ ಸಭೆೆಯಲ್ಲಿ ಮಾತನಾಡಿದರು. ಹುಂಡೇಕರ್‌ ವರದಿಯಲ್ಲಿ ತಾಲೂಕು  ಕೇಂದ್ರ  ಎಲ್ಲಿ ಆಗಬೇಕೆಂಬ ಪ್ರಸ್ತಾಪ  ಇಲ್ಲ.  ಬೈಂದೂರು ತಾಲೂಕು ರಚನೆಯಾದಲ್ಲಿ  ಬೈಂದೂರೇ ಕೇಂದ್ರವಾಗಬೇಕೆಂದು ವರದಿಯಲ್ಲಿ ಹೇಳಿಲ್ಲ.  ಎ.ಬಿ. ಪ್ರಕಾಶ್‌  ಸಮಿತಿಯಲ್ಲಿದ್ದ  ಚಿರಂಜೀವಿ ಸಿಂಗ್‌ ಕೂಡಾ ಮುಂದೆ  ರಾ.ಹೆ.ಕೇಂದ್ರಿತ ತಾಲೂಕು ಕೇಂದ್ರಗಳಾಗಿ  ಮಾಡುವುದು ಸರಿಯಲ್ಲ ಎಂದಿದ್ದರು.   ಇದುವರೆಗೆ ಯಾವ ಸರಕಾರವೂ ಕೂಡ ತಾಲೂಕು ರಚನೆಗೆ ಸಂಬಂಧಿಧಿಸಿದ ಯಾವುದೇ ವರದಿಗೂ ಗೌರವ ಕೊಟ್ಟಿಲ್ಲ. ಆಡಳಿತ ಪಕ್ಷದ ಸ್ಥಳೀಯ ಶಾಸಕರು ಹೇಳಿದಂತೆ ತಾಲೂಕು ರಚನೆ ನಡೆಯುತ್ತಿದೆೆ ಹೊರತು ಜನರ ಅನುಕೂಲಕ್ಕೆ ನಡೆಯುತ್ತಿಲ್ಲ.

ಬೈಂದೂರು ಹೋಬಳಿಯನ್ನೇ ತಾಲೂಕು ಮಾಡುವುದಾದರೆ ಸ್ವಾಗತ. ವಂಡ್ಸೆ ಹೋಬಳಿಯನ್ನು ಸೇರಿಸಿದರೆ ಎಲ್ಲ ರೀತಿಯ ಹೋರಾಟ ನಡೆಸಲಾಗುವುದು ಎಂದು ನ್ಯಾಯವಾದಿ ಟಿ.ಬಿ. ಶೆಟ್ಟಿ   ಹೇಳಿದರು.

ಸಭೆಯನ್ನುದ್ದೇಶಿಸಿ ತಲ್ಲೂರು ತಾ.ಪಂ. ಸದಸ್ಯ ಕರಣ್‌ ಕುಮಾರ್‌, ಬೈಂದೂರು ಬಿಜೆಪಿ ಬ್ಲಾಕ್‌ ಅಧ್ಯಕ್ಷ ಸದಾನಂದ, ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ, ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯಕುಮಾರ್‌ ಶೆಟ್ಟಿ , ಕೆರಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸಬ್ಲಾಡಿ ನಾರಾಯಣ ಶೆಟ್ಟಿ, ಮಾಜಿ ತಾ.ಪಂ. ಸದಸ್ಯ ಟಿ.ಕೆ. ಕೋಟ್ಯಾನ್‌ ತಲ್ಲೂರು ಮಾತನಾಡಿದರು.

ಸಭೆಯಲ್ಲಿ ವಂಡ್ಸೆ ಹೋಬಳಿಯನ್ನು  ಬೈಂದೂರು ತಾಲೂಕಿಗೆ ಸೇರಿಸುವುದರ ಕುರಿತು ಕ್ಷೇತ್ರದ ಶಾಸಕರು ಮತ್ತು  ಸರಕಾರ  ಸ್ಪಷ್ಟ ನಿರ್ಧಾರ ಪ್ರಕಟಿಸದೇ ಇದ್ದಲ್ಲಿ  ವಂಡ್ಸೆ ಹೋಬಳಿ ಮಟ್ಟದಲ್ಲಿ ಜನರ ಸಹಿ ಸಂಗ್ರಹ ಅಭಿಯಾನ, ಬಂದ್‌ ಆಚರಣೆ, ಪ್ರತಿಭಟನಾ ಸಭೆ ಹಾಗೂ  ಮುಂದುವರಿದ ಭಾಗವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ

ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದಾಗ ಘೋಷಣೆ ಮಾಡಿದ 43 ತಾಲೂಕುಗಳ ರಚನೆಗೆ 30 ಕೋಟಿ ರೂ. ಹಣ ಮೀಸಲಿಡಲಾಗಿತ್ತು. ಈಗಿನ ಕಾಂಗ್ರೆಸ್‌ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ  ಸರಕಾರ  49 ತಾಲೂಕುಗಳ ಘೋಷಣೆ ಮಾಡಿ ಕೇವಲ 10 ಕೋಟಿ ರೂ. ಹಣವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಅಂದರೆ ಒಂದು ತಾಲೂಕಿಗೆ ಕೇವಲ 20 ಲಕ್ಷ ರೂ. ಮೊತ್ತವನ್ನು ಮೀಸಲಿಟ್ಟ ಹಾಗಾಯಿತು. ಅಭಿವೃದ್ಧಿ ದೃಷ್ಟಿಯಲ್ಲಿ ಬೈಂದೂರು  ಹೋಬಳಿಯನ್ನೇ ತಾಲೂಕು ಮಾಡುವುದು ಸ್ವಾಗತಾರ್ಹ. ಆದರೆ ವಂಡ್ಸೆ ಹೋಬಳಿ ಕುಂದಾಪುರ ತಾಲೂಕಿನ ಅತಿ ದೊಡ್ಡ ಹೋಬಳಿ. ನಿಜಕ್ಕೂ ವಂಡ್ಸೆಯನ್ನೇ ತಾಲೂಕು ಮಾಡಬೇಕಿತ್ತು.
ಬಿ.ಎಂ. ಸುಕುಮಾರ ಶೆಟ್ಟಿ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.