ಪತ್ನಿಯನ್ನು ಮಾರಣಾಂತಿಕವಾಗಿ ಕೊಚ್ಚಿ ಪರಾರಿ


Team Udayavani, Feb 2, 2018, 12:36 PM IST

20-26.jpg

ಕಾರ್ಕಳ: ಪತ್ನಿ ಜತೆಗೆ ಮುನಿಸಿ ಆಕೆಯನ್ನು ಕತ್ತಿಯಿಂದ ಕಡಿದು  ಕೊಲೆಗೆ ಯತ್ನಿಸಿರುವ ಘಟನೆ  ಅಜೆಕಾರು ಸಮೀಪದ  ಹೆರ್ಮುಂಡೆಯಲ್ಲಿ  ಜ. 27 ರಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 

ಹೆರ್ಮುಂಡೆಯ ಪಟ್ರಬೆಟ್ಟು ನಿವಾಸಿ  ಸಂತೋಷ್‌ ಪೂಜಾರಿ (27) ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. 
ಹೆರ್ಮುಂಡೆ ಕರ್ಜಿಪಲ್ಕೆಯ ಶ್ರೀಧರ್‌ ಪೂಜಾರಿ ಮತ್ತು ಸುಗುಣಾ ದಂಪತಿಯ ಪುತ್ರಿ ಅನುಶ್ರೀ (23) ಪತಿಯ ಪೈಶಾಚಿಕ ಕೃತ್ಯಕ್ಕೆ ಒಳಗಾಗಿ ಮಣಿ ಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ  ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.   ಸಂತೋಷ್‌ ವಿರುದ್ಧ ಶ್ರೀಧರ್‌ ಪೂಜಾರಿ  ಅವರು ಅಜೆಕಾರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ
ಡಿಪ್ಲೊಮಾ ಮುಗಿಸಿದ್ದ  ಅನುಶ್ರೀ ಸಿವಿಲ್‌ ಎಂಜಿನಿಯರ್‌ ಆಗಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ದ್ದರು. ಮದುವೆಯಾದ ಬಳಿಕವೂ ಕೆಲವು ಸಮಯ ಬೆಂಗಳೂರಿನಲ್ಲಿದ್ದ ಆಕೆ ಅನಂತರ ಪತಿ ಜತೆಗೆ ಮುಂಬಯಿಗೆ ತೆರಳಿದ್ದರು.  ಅಲ್ಲಿ ಪತಿ-ಪತ್ನಿಯರ ಮಧ್ಯೆ  ಪ್ರತಿದಿನವೂ ಗಲಾಟೆ ನಡೆಯುತ್ತಿತ್ತು. ಹೀಗಾಗಿ  ನಾಲ್ಕು ತಿಂಗಳ ಹಿಂದೆ ಅನುಶ್ರೀ ತಾಯಿ ಮುಂಬಯಿಗೆ ತೆರಳಿ ಮಗಳನ್ನು ಕರೆದುಕೊಂಡು ಬಂದಿದ್ದಾರೆ. ಸ್ವಲ್ಪ ಸಮಯ ಮನೆಯಲ್ಲೇ ಇದ್ದ ಆಕೆ ಎರಡು ತಿಂಗಳ ಹಿಂದೆಯಷ್ಟೇ ಕಾರ್ಕಳ ಗುಂಡ್ಯ ಡ್ಕದ   ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ್ದರು. 

ಹತ್ಯೆಗೆ ಸಂಚು ರೂಪಿಸಿದ್ದ
ಆರೋಪಿ ಸಂತೋಷ್‌ ಪೂಜಾರಿ ಆಕೆಯ ಕೊಲೆಗೆ ಜ. 27ರಂದು ಸಂಚು ನಡೆಸಿದ್ದ. ಅಂದು ಕೆಲಸ ಮುಗಿಸಿ ಕಾರ್ಕಳದಿಂದ ತೆಳ್ಳಾರ್‌ ಮೂಲಕ ಹೆರ್ಮುಂಡೆಗೆ ತೆರಳುತ್ತಿದ್ದಾಗ ಸ್ವರ್ಣಾ ನದಿ ದಾಟುತ್ತಿದ್ದಂತೆ ಹಿಂದಿನಿಂದ ಬಂದು ಆಕೆಯನ್ನು ಹಿಡಿದುಕೊಂಡಿದ್ದಾನೆ. ಆಕೆ ಬಿಡಿಸಿಕೊಳ್ಳಲು ಯತ್ನಿಸಿದಾಗ ತಾನು ತಂದಿದ್ದ ಕತ್ತಿಯಿಂದ ಕೈ ಮತ್ತು ಕಾಲಿಗೆ ಯದ್ವಾತದ್ವಾ ಕಡಿದು ಪರಾರಿಯಾಗಿದ್ದಾನೆ. ಮುಂಬಯಿಯಲ್ಲಿ ಹೊಟೇಲ್‌ ಉದ್ಯೋಗಿಯಾಗಿದ್ದ ಆತ ಯಾವಾಗ ಊರಿಗೆ ಬಂದಿದ್ದ ಎಂಬುದು ತಿಳಿದಿಲ್ಲ.

ಬಿದ್ದಲ್ಲಿಂದಲೇ ಅಣ್ಣನಿಗೆ ಫೋನ್‌
 ಗಂಭೀರ ಗಾಯಗೊಂಡು ಬಿದ್ದಲ್ಲಿಂದಲೇ ಆಕೆ  ಅಣ್ಣನಿಗೆ ಫೋನ್‌ ಮೂಲಕ ವಿಷಯ ತಿಳಿಸಿದ್ದಾಳೆ. ತನ್ನ ತುಂಡಾದ ಕೈ ಬೆರಳುಗಳಿಂದ ಬ್ಯಾಗ್‌ನಲ್ಲಿದ್ದ ಮೊಬೈಲ್‌ ತೆಗೆಯಲು ಕೂಡ ಸಾಧ್ಯವಾಗಲಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅನುಶ್ರೀ ಅಣ್ಣ ತನ್ನ ಗೆಳೆಯನ ಜತೆಗೆ ಕಾರಿನಲ್ಲಿ ಆಕೆಯನ್ನು ಕಾರ್ಕಳದ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ಸಾಗಿಸಿದ್ದಾರೆ. 

ಒಲ್ಲದ ಮನಸ್ಸಿನಲ್ಲೇ ಮದುವೆ
ದೂರದ ಸಂಬಂಧಿಯಾಗಿರುವ ಸಂತೋಷ್‌ 6 ವರ್ಷಗಳಿಂದ ಅನುಶ್ರೀಯನ್ನು ಪ್ರೀತಿಸುತ್ತಿದ್ದ. ಆದರೆ ಆತನನ್ನು ಮದುವೆಯಾಗಲು ಅನುಶ್ರೀಗೆ ಇಷ್ಟವಿರಲಿಲ್ಲ.  ಆಕೆಯನ್ನು ಮದುವೆ ಮಾಡಿಕೊಡುವಂತೆ ಮನೆಯವರಿಗೆ  ಬೆದರಿಕೆ ಹಾಕಿದ್ದ ಸಂತೋಷ್‌ ತನ್ನ ಪ್ರಯತ್ನದಲ್ಲಿ ಸಫ‌ಲನಾಗಿದ್ದ. ಬೆದರಿಕೆಗೆ ಮಣಿದ ಮನೆಯವರು ಮಗಳಿಗೆ ಸಮಸ್ಯೆಯಾಗಬಾರದು ಎಂದು ತಂಗಿಯನ್ನು ಮದುವೆಗೆ ಒಪ್ಪಿಸಿ  2017 ಮಾ. 23ರಂದು ವಿವಾಹ ನೆರವೇರಿಸಿದ್ದರು ಎಂದು ಅನುಶ್ರೀ ಅಣ್ಣ ಅರುಣ್‌ ಕುಮಾರ್‌ ತಿಳಿಸಿದ್ದಾರೆ.  

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.