ಕನ್ನಡ ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಶಿವ ಪೂಜಾರಿ


Team Udayavani, Feb 3, 2019, 1:00 AM IST

kannada.jpg

ಬ್ರಹ್ಮಾವರ: ಕನ್ನಡ ಶ್ರೀಮಂತ ಪ್ರಾಚೀನ ಭಾಷೆ. ಕನ್ನಡ ಉಳಿದರೆ ಸಭ್ಯತೆ, ಸಂಸ್ಕೃತಿ ಉಳಿಯುತ್ತದೆ ಎಂದು ಸಾಹಿತಿ, ಲೇಖಕ ಬಾರಕೂರಿನ ಬಾಬು ಶಿವ ಪೂಜಾರಿ ಹೇಳಿದರು.

ಅವರು ಶನಿವಾರ ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್‌ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಠಾರದಲ್ಲಿ  ಶ್ರೀಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್‌, ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಶ್ರೀ ರಾಮಕೃಷ್ಣ ಆಶ್ರಮ ಬೆಳಗಾವಿ ಮತ್ತು ಮಂಗಳೂರು, ಬಾರಕೂರು ಆನ್‌ಲೈನ್‌ ಡಾಟ್‌ಕಾಮ್‌, ಕನ್ನಡ ಸಾಹಿತ್ಯ ಪರಿಷತ್‌ ಬ್ರಹ್ಮಾವರ-ಬಾರಕೂರು ವಲಯದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 156ನೇಯ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಇಂದು ಕನ್ನಡದ ಸ್ಥಿತಿಗತಿ ಚಿಂತಾಜನಕವಾಗಿದೆ. ಸುಮಾರು 1,800 ಕನ್ನಡ ಶಾಲೆಗಳು ಅಂತಿಮ ಹಂತದಲ್ಲಿವೆ. ನಾವು ಸಂಕಲ್ಪ ಮಾಡಿದರೆ ಖಂಡಿತ ಕನ್ನಡ ಶಾಲೆ, ಭಾಷೆ ಉಳಿಯುತ್ತದೆ ಎಂದರು.

ಬೈಂದೂರು ಕಿರಿಮಂಜೇಶ್ವರದ ಶುಭದಾ ಅಂಗ್ಲ ಮಾಧ್ಯಮ ಶಾಲೆಯ ಎಂಟನೆ  ತರಗತಿಯ ವಿದ್ಯಾರ್ಥಿನಿ ಸ್ವೀಕೃತಿ ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳ ಸ್ವರಚಿತ ಕವನ ಸಂಕಲನ ವನ್ನು ಕನ್ನಡ ಸಾಹಿತ್ಯ ಪರಿಷತ್‌ ಬ್ರಹ್ಮಾವರ-ಬಾರಕೂರು ವಲಯ ಘಟಕದ ಅಧ್ಯಕ್ಷ ಕೆ. ಅಶೋಕ್‌ ಭಟ್‌ ಚಾಂತಾರು ಬಿಡುಗಡೆಗೊಳಿಸಿದರು.

ಸಾ.ಶಿ.ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿ ಕಾರಿ ಮಧುಕರ ಎಸ್‌. ಶುಭಾಶಂಸನೆಗೈದರು. ಅತಿಥಿಗಳಾಗಿ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ, ಧರ್ಮಸ್ಥಳದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ  ನಿರ್ದೇಶಕ ಐ. ಶಶಿಕಾಂತ್‌ ಜೈನ್‌, ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ| ರಮೇಶ್‌ ಆಚಾರ್ಯ, ಬಾರಕೂರು ಆನ್‌ಲೈನ್‌ ಡಾಟ್‌ಕಾಮ್‌ನ ಪ್ರತಿನಿ ಧಿ ಎರಿಕ್‌ ಸೋನ್ಸ್‌, ಬಾರಕೂರು ರಂಗನಕೇರಿ ಶೆಟ್ಟಿಗಾರ್‌ ಇಂಡಸ್ಟ್ರೀಸ್‌ನ ಮಾಲಕ ಶ್ರೀನಿವಾಸ ಶೆಟ್ಟಿಗಾರ್‌, ಪ್ರಧಾನ ಸಂಘಟಕ ರಾಮ ಭಟ್ಟ ಸಜಂಗದ್ದೆ ಉಪಸ್ಥಿತರಿದ್ದರು.

ಸಮ್ಮಾನ
ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಾಗೇಶ್‌ ಶ್ಯಾನುಭಾಗ್‌ ಅವರನ್ನು ಅಭಿನಂದಿಸಲಾಯಿತು. ಕೊಕ್ಕರ್ಣೆ ಸರಕಾರಿ ಪ್ರೌಢಶಾಲೆಯ ಹತ್ತನೇ  ತರಗತಿಯ ಕ್ರೀಡಾ ಪ್ರತಿಭೆಗಳಾದ ಪ್ರಸನ್ನ, ವಿN°àಶ,  ಬಾರಕೂರು ಹೊಸಾಳದ ಸರಕಾರಿ ಹಿ.ಪ್ರಾ. ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಅಶ್ವಿ‌ನ್‌ ಅವರನ್ನು ಸಮ್ಮಾನಿಸಲಾಯಿತು.

ಮಕ್ಕಳ ಸ್ವರಚಿತ ಕವನಗೋಷ್ಠಿ, ಚಿಂತನಗೋಷ್ಠಿ ನಡೆಯಿತು. ಅಕ್ಷತಾ ಸ್ವಾಗತಿಸಿ, ರಶ್ಮಿತಾ ವಂದಿಸಿದರು. ವಂಧ್ಯಾ ಆರ್‌. ಭಟ್‌, ಜನಾರ್ದನ ಎಸ್‌. ಉಡುಪ  ನಿರೂಪಿಸಿದರು. ವಡ್ಡರ್ಸೆ ಪ್ರಕಾಶ್‌ ಆಚಾರ್ಯ, ಬಿ. ಅಶೋಕ್‌ ಸಿ. ಪೂಜಾರಿ  ಸಹಕರಿಸಿದರು.

ಮನಸ್ಸಿನ ಆರೋಗ್ಯ
ದೇಹದ ಬೆಳವಣಿಗೆಗೆ ಸಂತುಲಿತ ಆಹಾರ ಹೇಗೆ ಮುಖ್ಯವೋ ಹಾಗೆಯೇ ಮನಸ್ಸಿನ ಆರೋಗ್ಯಕರ ಬೆಳವಣಿಗೆಗೆ ಸಾಹಿತ್ಯದ ಓದು ಮುಖ್ಯ. ಈ ನಿತ್ಯ ಸತ್ಯ ಅರ್ಥ ಮಾಡಿಕೊಂಡು ಓದುವ ಹವ್ಯಾಸವನ್ನು ಚಿಕ್ಕ ವಯಸ್ಸಿನಿಂದಲೇ ಬೆಳೆಸಿಕೊಳ್ಳಬೇಕು ಎಂದು ಸಮ್ಮೇಳನಾಧ್ಯಕ್ಷೆ ಸ್ವೀಕೃತಿ ಶೆಟ್ಟಿ ಹೇಳಿದರು. ಎಲ್ಲ ರಾಜ್ಯಗಳಲ್ಲೂ  ಭಾಷಾಭಿಮಾನ ಸ್ವಾಭಿಮಾನದ ಮುಕುಟವಾಗಿದೆ. ಆದರೆ ಇಂದು ಗ್ರಾಮೀಣ ಪ್ರದೇಶದ ಮಕ್ಕಳೂ ಕೂಡ ನಗರವಾಸದ ಆವೇಗದ ಸಂಕ್ರಮಣ ಕಾಲದಲ್ಲಿರುವಾಗ ಸಾಹಿತ್ಯ ಎಲ್ಲಿ ತನ್ನ ಮಹತ್ವ  ಕಳೆದುಕೊಳ್ಳುತ್ತದೋ ಎನ್ನುವ ಭಯ ಕಾಡುತ್ತಿದೆ. ಭಾಷೆಯೊಂದು ಉಳಿಯಬೇಕಾದರೆ ಶಿಕ್ಷಣದಲ್ಲಿ ಅದು ಸಶಕ್ತವಾಗಿ ಬಳಕೆಯಾಗಬೇಕು. ಒಂದನೇ ತರಗತಿಯಿಂದಲೇ ಕನ್ನಡ ಕಲಿಯುವುದನ್ನು ಕಡ್ಡಾಯಗೊಳಿಸಬೇಕು. ಕನ್ನಡಕ್ಕೆ ಪ್ರಾಧಾನ್ಯ ನೀಡಬೇಕು ಎಂದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.