“ಗ್ರಾಮೀಣ ಭಾಗ ಉದ್ಧಾರವಾದರೆ ಸಮೃದ್ಧ ದೇಶ ನಿರ್ಮಾಣ’


Team Udayavani, Mar 31, 2019, 6:30 AM IST

grameena-baga

ಶಿರ್ವ: ಗ್ರಾಮೀಣ ಪ್ರದೇಶದ ಮಕ್ಕಳು ಬಡತನದಲ್ಲಿಯೇ ಇರುವುದರಿಂದ ಶಿಕ್ಷಣಕ್ಕೆ ಪೂರಕವಾಗಿರುವ ಸೌಲಭ್ಯಗಳು ಸುಲಭವಾಗಿ ಸಿಗುವಂತಾಗಬೇಕು. ಉತ್ತಮ ವೈದ್ಯಕೀಯ ಸೌಲಭ್ಯ,ತಾಂತ್ರಿಕ ಶಿಕ್ಷಣದ ವ್ಯವಸ್ಥೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಸಕಾಲದಲ್ಲಿ ಸಿಕ್ಕಿದಾಗ ಗ್ರಾಮೀಣ ಮಕ್ಕಳು ಮುಖ್ಯವಾಹಿನಿಗೆ ಬರುತ್ತಾರೆ. ಗ್ರಾಮೀಣ ಪ್ರದೇಶ ಉದ್ಧಾರವಾದರೆ ಮಾತ್ರ ಸಮೃದ್ಧ ಭಾರತದ ನಿರ್ಮಾಣ ಸಾಧ್ಯ ಎಂದು ಕುಂಜಾರುಗಿರಿ ಪಾಜಕ ಶ್ರೀ ಆನಂದತೀರ್ಥ ವಿದ್ಯಾಲಯದ ಆಡಳಿತಾಧಿಕಾರಿ ಗುರುದತ್ತ್ ಸೋಮಯಾಜಿ ಹೇಳಿದರು.

ಅವರು ಶುಕ್ರವಾರ ಆನಂದ ತೀರ್ಥ ವಿದ್ಯಾಲಯದ ಸಭಾಂಗಣದಲ್ಲಿ ಕಸಾಪ ಉಡುಪಿ ಜಿಲ್ಲೆ ಮತ್ತು ಕಾಪು ತಾ| ಘಟಕದ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ, ಶಿಕ್ಷಕಿಯರಿಗೆ ಏರ್ಪಡಿಸಿದ ಗ್ರಾಮೀಣ ಬದುಕು ಮತ್ತು ಶಿಕ್ಷಣ ನೀತಿ ಕುರಿತ ರತ್ನಾವತಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ ಸಾಹಿತ್ಯ,ಶಿಕ್ಷಣ ಹಾಗೂ ವಿವಿಧ ಚಟುವಟಿಕೆಗಳಿಗೆ ಪೂರಕವಾಗಿ ಕನ್ನಡ ಸಾಹಿತ್ಯ ಪರಿಷತ್ತು 1,700 ದತ್ತಿಗಳನ್ನು ಹೊಂದಿದೆ. ಪರಿಷತ್‌ನ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ರತ್ನಾವತಿ ದತ್ತಿನಿಧಿಯಿಂದ ಶಿಕ್ಷಕರಿಗೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಆಲ್ವಿನ್‌ ದಾಂತಿ ಮಾತನಾಡಿ ಶಿಕ್ಷಣ ಸೇವೆಯಾಗಿದ್ದು, ವ್ಯಾಪಾರೀಕರಣಗೊಳ್ಳುತ್ತಿರುವುದು ದುರಂತ. ಮಕ್ಕಳ ಸುಪ್ತ ಪ್ರತಿಭೆಗಳ ವಿಕಸನದ ಜತೆಗೆ ಮೌಲ್ಯಾಧಾರಿತ ಪಾಠಗಳ ಮೂಲಕ ಸಂವಹನಾತ್ಮಕ ಕೌಶಲ ಬೆಳೆಸಿಕೊಂಡು ಮಕ್ಕಳಿಗೆ ಬದುಕುವ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕುರ್ಕಾಲು ದಿನಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ವಿದ್ಯಾಲಯದ ಪ್ರಾಂಶುಪಾಲೆ ಗೀತಾ ಎಸ್‌. ಕೊಟ್ಯಾನ್‌, ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಶುಭ ಹಾರೈಸಿದರು. ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಲಪೂರಣ ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್‌ ಜಿ.ಎಂ. ರೆಬೆಲ್ಲೊ, ಆನಂದತೀರ್ಥ ವಿದ್ಯಾಲಯದ ಶಿಕ್ಷಕ ವೃಂದ, ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು. ತಾಲೂಕು ಸಮಿತಿ ಸದಸ್ಯ ಹರೀಶ್‌ ಕಟಾ³ಡಿ ಸ್ವಾಗತಿಸಿದರು. ಎಸ್‌.ಎಸ್‌. ಪ್ರಸಾದ್‌ ನಿರೂಪಿಸಿ, ಭಾಗ್ಯಶ್ರೀ ವಂದಿಸಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.