ಪ್ಲಾಸ್ಟಿಕ್‌ ಕೊಟ್ಟರೆ ಸಿಗಲಿದೆ ಒಂದು ಕೆ.ಜಿ.ಅಕ್ಕಿ!

ಪ್ಲಾಸ್ಟಿಕ್‌ ನಿಷೇಧ ಜಾಗೃತಿಗೆ ಯೋಜನೆ

Team Udayavani, Jan 3, 2020, 5:46 AM IST

0201SHIRVA1

ಪ್ಲಾಸ್ಟಿಕ್‌ ತಂದ ನಾಗರಿಕರಿಗೆ ಗ್ರಾ.ಪಂ. ಸದಸ್ಯ ಕೆ.ಆರ್‌.ಪಾಟ್ಕರ್‌ ಅಕ್ಕಿ ವಿತರಿಸುತ್ತಿರುವುದು.

ಶಿರ್ವ: ಈಗೀಗ ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್‌ ಕಸ. ಪ್ಲಾಸ್ಟಿಕ್‌ ನಿಷೇಧವಿದ್ದರೂ ಅದು ಅನುಷ್ಠಾನವಾಗುತ್ತಿಲ್ಲ. ಜನಜಾಗೃತಿಗಾಗಿ ಸಂಘ ಸಂಸ್ಥೆಗಳು ನಿರಂತರವಾಗಿ ಯತ್ನಿಸುತ್ತಿವೆ. ಏತನ್ಮಧ್ಯೆ ಶಿರ್ವದಲ್ಲೊಂದು ವಿನೂತನ ಯತ್ನ ಮಾಡಲಾಗಿದೆ. ಶಿರ್ವ ಗ್ರಾ.ಪಂ. ಸದಸ್ಯ ಕೆ.ಆರ್‌.ಪಾಟ್ಕರ್‌ ತಮ್ಮ ವಾರ್ಡ್‌ನ ಪ್ರತಿಯೊಂದು ಮನೆಗಳಿಗೂ ಭೇಟಿ ನೀಡಿ, ಕರಪತ್ರದ ಜೊತೆಗೆ ಉಚಿತ ಬಟ್ಟೆ ಚೀಲಗಳನ್ನು ವಿತರಿಸುತ್ತಾರೆ ಅಷ್ಟೇ ಅಲ್ಲದೆ ಬಂಟಕಲ್ಲು -ಬಿಸಿರೋಡ್‌ ಲಯನ್ಸ್‌ ಕ್ಲಬ್‌ ಸಹಕಾರದೊಂದಿಗೆ ಪ್ಲಾಸ್ಟಿಕ್‌ ನೀಡಿದವರಿಗೆ ಕೆ.ಜಿ. ಅಕ್ಕಿ ನೀಡುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ.

ಸಾರ್ವಜನಿಕರಿಗೆ ಮಾಹಿತಿ
ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಅಥವಾ ರಸ್ತೆ ಬದಿಯಲ್ಲಿ ಹರಡಿಕೊಂಡಿರುವ ವಿವಿಧ ರೀತಿಯ ಪ್ಲಾಸ್ಟಿಕ್‌ ನೀಡಿದರೆ ಅಕ್ಕಿ ಸಿಗಲಿದೆ. ಸಂಘಟಕರಿಗೆ ತಿಳಿಸಿದಲ್ಲಿ ಮನೆಗೆ ತೆರಳಿ ಪ್ಲಾಸ್ಟಿಕ್‌ ಸಂಗ್ರಹಿಸಿ ಅಷ್ಟೇ ಕೆ.ಜಿ. ಅಕ್ಕಿಯನ್ನು ಸ್ಥಳದಲ್ಲೇ ನೀಡಲಾಗುತ್ತದೆ.

ಸಂಘಟಕರು ಈ ಕಾರ್ಯಕ್ರಮವನ್ನು 15 ದಿನಗಳ ಕಾಲ ಆಯೋಜನೆ ಮಾಡಿದ್ದಾರೆ. ಇದರೊಂದಿಗೆ ಸಂಗ್ರಹಿಸಿದ ಪ್ಲಾಸ್ಟಿಕ್‌ನ್ನು ಬಂಟಕಲ್ಲಿನಲ್ಲಿ ಮುಖ್ಯರಸ್ತೆಯ ಪಾಟ್ಕರ್‌ ಎಂಟರ್‌ಪ್ರೈಸಸ್‌ ಮತ್ತು ಶಿರ್ವದಲ್ಲಿ ರಿಕ್ಷಾ ತಂಗುದಾಣದ ಹಿಂಬದಿಯ ಲಕ್ಷ್ಮೀ ಸ್ಟೋರ್ ನಲ್ಲಿ ನೀಡಿ ಅಕ್ಕಿ ಪಡೆಯಬಹುದು. ಜನರು 5 ಕೆಜಿಗಿಂತ ಹೆಚ್ಚಿನ ಪ್ಲಾಸ್ಟಿಕ್‌ ತಂದರೆ ಉಚಿತ ಬಟ್ಟೆ ಚೀಲದಲ್ಲಿ ಅಷ್ಟೇ ಅಕ್ಕಿ ಸಿಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕಸ ಹೆಕ್ಕುವ ಸ್ಪರ್ಧೆ
ಈ ಮೊದಲು ಬಂಟಕಲ್ಲು ಶ್ರೀ ದುರ್ಗಾ ಮಹಿಳಾ ಮಂಡಳಿ ಮತ್ತು ರಾಜಾಪುರ ಸಾರಸ್ವತ ಯುವ ವೃಂದದ ಸದಸ್ಯರ ತಂಡದೊಂದಿಗೆ ಶಂಕರಪುರದ ಸಾಲ್ಮರ ದಿಂದ ಶಿರ್ವದ ಪಂಜಿಮಾರು ಕೋಡುಗುಡ್ಡೆಯ ವರೆಗೆ ರಸ್ತೆ ಬದಿಯಲ್ಲಿರುವ ಪಾRಸ್ಟಿಕ್‌ ಹೆಕ್ಕುವ ಕಾರ್ಯಕ್ರಮ ನಡೆಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಪ್ಲಾಸ್ಟಿಕ್‌ ಮುಕ್ತ ಸಮಾಜ
ಭವಿಷ್ಯದಲ್ಲಿ ಸ್ವತ್ಛ ಭಾರತ ದೊಂದಿಗೆ ಪ್ಲಾಸ್ಟಿಕ್‌ ಮುಕ್ತ ಭಾರತ ಆಗಬೇಕು. ಈ ನಿಟ್ಟಿನಲ್ಲಿಗ್ರಾಮ ಮಟ್ಟದಿಂದ ಮನೆ ಮನೆಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಾಗ ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ.
– ಕೆ.ಆರ್‌. ಪಾಟ್ಕರ್‌,
ಶಿರ್ವ ಗ್ರಾ.ಪಂ. ಸದಸ್ಯ ,ಬಂಟಕಲ್ಲು ಲಯನ್ಸ್‌ ಕ್ಲಬ್‌ಅಧ್ಯಕ್ಷ

– ಸತೀಶ್ಚಂದ್ರ ಶೆಟ್ಟಿ ಶಿರ್ವ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.