ಅಕ್ರಮ ಸಾಗಾಟ: ಸ್ಫೋಟಕ ವಸ್ತು ವಶ
Team Udayavani, Oct 7, 2017, 12:14 PM IST
ಕಾರ್ಕಳ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕ ವಸ್ತುಗಳನ್ನು ಶುಕ್ರವಾರ ಬಜಗೋಳಿ ರಸ್ತೆ ಬಳಿ ಪೊಲೀಸ್ ವೃತ್ತ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಗೋಪಿ. ಬಿ ಮತ್ತು ತ್ರಿಮೂರ್ತಿ ಬಂಧಿತರು.
ಸಾಣೂರು ಗ್ರಾಮದ ಶ್ರೀಲಕ್ಷ್ಮೀ ದೇವಿ ಕಲ್ಯಾಣ ಮಂಟಪದ ಎದುರು ಕಾರ್ಕಳ ಬಜಗೋಳಿ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿರುವ ಸಂದರ್ಭದಲ್ಲಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರನ್ನು ತಪಾಸಣೆ ಮಾಡಿದಾಗ ಕಾರಿನ ಢಿಕ್ಕಿ ಒಳಗೆ ಕೆಲವೊಂದು ರಾಸಾಯನಿಕ ಹಾಗೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಕಾರಿನಲ್ಲಿದ್ದ ವ್ಯಕ್ತಿಗಳು ಮುಂಜಾಗ್ರತೆಯನ್ನು ವಹಿಸದೆ, ಪರವಾನಿಗೆಯನ್ನು ಹೊಂದದೇ ಸ್ಫೋಟಕ ಸಾಗಾಟ ಮಾಡುತ್ತಿದ್ದರು ಆರೋಪಿಗಗಳಿಂದ ಒಟ್ಟು 22,000 ರೂ. ಮೌಲ್ಯದ ಸ್ಫೋಟಕ ವಸ್ತುಗಳನ್ನು ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ