ಹದಗೆಟ್ಟ ರಸ್ತೆಯಿಂದ ಮೀನುಗಾರಿಕಾ ವಹಿವಾಟಿಗೆ ತೊಡಕು
ಗಂಗೊಳ್ಳಿ ಮುಖ್ಯ ರಸ್ತೆ
Team Udayavani, Sep 16, 2019, 5:43 AM IST
ಗಂಗೊಳ್ಳಿ ಪಂಚಾಯತ್ ಎದುರು ಹೊಂಡ - ಗುಂಡಿಗಳ ಮುಖ್ಯ ರಸ್ತೆ.
ಗಂಗೊಳ್ಳಿ: ಬಂದರು ನಗರಿ ಗಂಗೊಳ್ಳಿಯನ್ನು ಕುಂದಾಪುರ ಹಾಗೂ ತ್ರಾಸಿ ಕಡೆಯಿಂದ ಸಂಪರ್ಕಿಸುವ ಮುಖ್ಯ ರಸ್ತೆಯ ಅನೇಕ ಕಡೆಗಳಲ್ಲಿ ಮಳೆಯಿಂದಾಗಿ ತೀರಾ ಹದಗೆಟ್ಟು ಹೋಗಿದೆ. ಈಗಷ್ಟೇ ಮೀನು ಗಾರಿಕಾ ಚಟುವಟಿಕೆ ಆರಂಭಗೊಂಡಿದ್ದು, ಈ ಹೊಂಡ – ಗುಂಡಿಗಳ ರಸ್ತೆಯಿಂದಾಗಿ ಮೀನುಗಾರಿಕಾ ವಹಿ ವಾಟಿಗೆ ತೊಡಕಾಗಿ ಪರಿಣಮಿಸಿದೆ.
ಮೇಲ್ಗಂಗೊಳ್ಳಿ ವಾಟರ್ ಟ್ಯಾಂಕ್ನಿಂದ ಗಂಗೊಳ್ಳಿ ಪಂಚಾಯತ್ ಕಚೇರಿವರೆಗಿನ ಸುಮಾರು 700 ಮೀ. ಉದ್ದದ ಮುಖ್ಯ ರಸ್ತೆಯನ್ನು ನೆರೆ ಪರಿಹಾರದಲ್ಲಿ ಮಂಜೂ ರಾಗಿದ್ದ 1.08 ಕೋ.ರೂ. ವೆಚ್ಚದಲ್ಲಿ ಕಳೆದ ಎಪ್ರಿಲ್ – ಮೇಯಲ್ಲಿ ಕಾಂಕ್ರೀಟೀಕರಣ ಕಾಮಗಾರಿ ಮಾಡಲಾಗಿತ್ತು. ಆದರೆ ಈ ಬಾರಿಯ ಭಾರೀ ಮಳೆಯಿಂದಾಗಿ ಇದನ್ನು ಹೊರತು ಪಡಿಸಿ ಬಾಕಿ ಹಲವೆಡೆಗಳಲ್ಲಿ ರಸ್ತೆಯಿಡೀ ಹೊಂಡ – ಗುಂಡಿಗಳೇ ಕಾಣಿಸಿಕೊಂಡಿವೆ.
ಹದಗೆಟ್ಟ ರಸ್ತೆ ಕಾಮಗಾರಿಯಿಂದಾಗಿ ಕುಂದಾಪುರ, ತ್ರಾಸಿ ಕಡೆಯಿಂದ ಬರುವ ಹಾಗೂ ಹೋಗುವ ಸಾವಿರಾರು ವಾಹನಗಳಿಗೆ ಸಮಸ್ಯೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಸಂದರ್ಭವಂತೂ ಮಳೆ ನೀರೆಲ್ಲ ರಸ್ತೆಯಲ್ಲಿಯೇ ಹರಿದು ಹೋಗುತ್ತಿದೆ. ಕೆಲವೆಡೆ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲಿಯೇ ನೀರು ನಿಂತು, ಪಾದಚಾರಿಗಳಿಗೆ ಕೆಸರಿನ ಎರಚಾಟ ಸಾಮಾನ್ಯವಾಗಿದೆ. ಈಗ ಮೀನುಗಾರಿಕಾ ಋತು ಆರಂಭಗೊಂಡಿದೆ. ಹಿಂದಿಗಿಂತ ಈಗ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ರಸ್ತೆಯ ಅನೇಕ ಕಡೆಗಳಲ್ಲಿರುವ ಹೊಂಡ – ಗುಂಡಿಗಳಿಗೆ ತಾತ್ಕಾಲಿಕವಾಗಿ ತೇಪೆ ಕಾರ್ಯವನ್ನು ಆದರೂ ಮಾಡಲಿ ಎನ್ನುವುದು ಮೀನುಗಾರರ ಆಗ್ರಹವಾಗಿದೆ.
ಮೀನುಗಾರಿಕೆಗೆ ತೊಡಕು
ಇದು ಗಂಗೊಳ್ಳಿಯ ಮೀನುಗಾರಿಕಾ ಬಂದರಿಗೆ ತೆರಳುವ ಮುಖ್ಯ ರಸ್ತೆಯಾಗಿದೆ. ಈ ಬಂದರಿನಿಂದ ಬೇರೆ ಬೇರೆ ಕಡೆಗಳಿಗೆ ಮೀನು ಸಾಗಾಟ ಮಾಡಲಾಗುತ್ತದೆ. ಮೀನು ಸಾಗಾಟದ ಲಾರಿಗಳು, ಐಸ್ ಸಾಗಾಟದ ವಾಹನ, ಸಾರಿಗೆ ಬಸ್ಗಳು, ಶಾಲಾ ವಾಹನಗಳು, ಕಾರು, ಆಟೋ ರಿಕ್ಷಾ ಸೇರಿದಂತೆ ಸಾವಿರಾರು ವಾಹನಗಳು ಪ್ರತಿನಿತ್ಯ ಇದೇ ಮಾರ್ಗವಾಗಿ ಸಂಚರಿಸುತ್ತವೆ. ಮುಖ್ಯವಾಗಿ ಈ ಹೊಂಡ – ಗುಂಡಿಗಳ ರಸ್ತೆಯಿಂದಾಗಿ ಮೀನುಗಾರಿಕಾ ವಹಿವಾಟಿಗೆ ತೊಂದರೆಯಾಗುತ್ತಿದೆ.
500 ಮೀ.ಗೆ ಪ್ರಸ್ತಾವನೆ ಸಲ್ಲಿಕೆ
ಈಗಾಗಲೇ 700 ಮೀ. ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಸಲಾಗಿದೆ. ಇನ್ನು ಗಂಗೊಳ್ಳಿ ಬಂದರು ಕಡೆಯಿಂದ ಬರುವ ರಸ್ತೆಗೆ ಕಾಂಕ್ರೀಟಿಕರಣಕ್ಕೆ 1.05 ಕೋ.ರೂ. ಮಂಜೂರಾಗಿದ್ದು, ಮಳೆ ಕಡಿಮೆಯಾದ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಇನ್ನು ಸುಮಾರು 500 ಮೀ. ರಸ್ತೆ ಕಾಂಕ್ರೀಟೀಕರಣಕ್ಕೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಪ್ರಸ್ತಾವನೆ ಸಲ್ಲಿಸಲಾಗಿದೆ.
– ದುರ್ಗಾದಾಸ್,
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ