ಪೂರ್ಣಗೊಳಿಸುವತ್ತ ಗುತ್ತಿಗೆದಾರರ ದೃಷ್ಟಿ!
Team Udayavani, May 20, 2018, 6:45 AM IST
ಕಾಪು: ಚುನಾವಣೆಯ ಕಾರಣದಿಂದಾಗಿ ಕಾಪು ಮತ್ತು ಪಡುಬಿದ್ರಿ ವ್ಯಾಪ್ತಿಯಲ್ಲಿ ಕುಂಟುತ್ತಾ ಸಾಗುತ್ತಿದ್ದ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಯೋಜನೆಯ ಕಾಮಗಾರಿ ಮತ್ತೆ ಚುರುಕುಗೊಂಡಿದೆ.
ಮಳೆಗಾಲದ ಮುನ್ಸೂಚನೆ ದೊರ ಕುತ್ತಿದ್ದಂತೆಯೇ ಹೆದ್ದಾರಿ ಪ್ರಾಧಿಕಾರ ಮತ್ತು ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಎಚ್ಚೆತ್ತುಕೊಂಡಿದ್ದಾರೆ. ಹೆದ್ದಾರಿ ಚತುಷ್ಪಥ ಯೋಜನೆಯ ಕಾಮಗಾರಿಯಲ್ಲಿ ಅರೆಬರೆಯಾಗಿ ಉಳಿಸಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವತ್ತ ದೃಷ್ಟಿ ಹಾಯಿಸಿದ್ದಾರೆ.
ಹಿಂದಿನ ಸಮಸ್ಯೆಗೆ ಮುಕ್ತಿ
ನೀಡುವ ಪ್ರಯತ್ನವೇ ?
ಕೆಲವು ಸಮಯಗಳಿಂದ ಬಾಕಿಯುಳಿಸಿ ರುವ ಅರೆಬರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರ ಕಂಪೆನಿ ನವಯುಗ್ ಪ್ರೈ. ಲಿ. ನ ಅಧಿಕಾರಿಗಳು ಕಳೆದ 2-3 ದಿನಗಳಿಂದ ಗಂಭೀರ ಚಿಂತನೆ ನಡೆಸಿದ್ದಾರೆ. ಆ ಮೂಲಕ ಹಿಂದಿನ ವರ್ಷಗಳಲ್ಲಿ ಜನತೆ ಎದುರಿಸಿದ್ದ ಸಮಸ್ಯೆಗಳಿಂದ ಮುಕ್ತಿ ದೊರಕಿಸಿಕೊಡುವ ಪ್ರಯತ್ನ ನಡೆಸುತ್ತಿದ್ದಾರೆ.
ಬೀಚ್ ರಸ್ತೆಯಲ್ಲಿ ಚರಂಡಿ ನಿರ್ಮಾಣ
ಕಾಪು ಹೊಸ ಮಾರಿಗುಡಿ ಬಳಿಯ ಸರ್ವೀಸ್ ರಸ್ತೆಯಿಂದ ಬೀಚ್ ರಸ್ತೆಯ ದ್ವಾರದ ಬಳಿ ಜೆಸಿಬಿ ಮೂಲಕ ಅಗೆದು ಕಾಂಕೀÅಟ್ ಚರಂಡಿ ರಚನೆಯ ಕಾಮಗಾರಿ ಭರದಿಂದ ಸಾಗುತ್ತಿದೆ. ಅದರೊಂದಿಗೆ ಮಾರಿಗುಡಿ ಬಳಿಯಿಂದ ಪೆಟ್ರೋಲ್ ಬಂಕ್ ಬಳಿಯವರೆಗೆ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಗಿದೆ.
ಕಾಪು ಪೆಟ್ರೋಲ್ ಬಂಕ್ನಿಂದ ಮಾರಿಗುಡಿಯವರೆಗಿನ ಸರ್ವೀಸ್ ರಸ್ತೆ ಪಕ್ಕದ ಚರಂಡಿಯಲ್ಲಿರುವ ಮಣ್ಣನ್ನು ಮೇಲೆತ್ತಿ ಸ್ಥಳಾಂತರಿಸುವ ಪ್ರಕ್ರಿಯೆಗೂ ಚಾಲನೆ ನೀಡಿದ್ದು, ಗುತ್ತಿಗೆದಾರರು ಮಳೆಗಾಲಕ್ಕೆ ಮೊದಲೇ ಮುತುವರ್ಜಿ ವಹಿಸಿ ಕಾಮಗಾರಿ ನಡೆಸಲು ಮುಂದಾಗಿರುವುದನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.
ಸರ್ವೀಸ್ ರಸ್ತೆ ಬಳಿಯ
ಸಮಸ್ಯೆ ಪರಿಹಾರಕ್ಕೆ ಪ್ರಥಮ ಆದ್ಯತೆ
ಕಾಪು ಮತ್ತು ಪಡುಬಿದ್ರಿಯಲ್ಲಿ ಬಾಕಿಯುಳಿಸಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಅನುಮೋದನೆ ದೊರಕಿದೆ. ಮಳೆಗಾಲಕ್ಕೆ ಮೊದಲು ಸರ್ವೀಸ್ ರಸ್ತೆ ಬಳಿಯ ಸಮಸ್ಯೆಗಳನ್ನು, ಚರಂಡಿ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಗೊಳಿಸಲಾಗುವುದು. ಅದರ ಜೊತೆ ಪಡುಬಿದ್ರಿಯಲ್ಲೂ ಹೆದ್ದಾರಿ ರಚನೆ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ನವಯುಗ ಕಂಪೆನಿಯ ಚರಂಡಿ ಕಾಮಗಾರಿ ಉಸ್ತುವಾರಿ ಮಹೇಶ್ ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ