ಮರಳು ಲಭ್ಯತೆಗೆ ಉಸ್ತುವಾರಿ ಸಚಿವರೇ ಕಾರಣ: ಉಡುಪಿ ಬ್ಲಾಕ್‌ ಕಾಂಗ್ರೆಸ್


Team Udayavani, May 5, 2018, 7:55 AM IST

Congress-Party-Logo-650.jpg

ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಸಿ.ಆರ್‌.ಝಡ್‌. ಮರಳು ತೆರವುಗೊಳಿಸುವ ಕಾರ್ಯ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯದ್ದಾಗಿದ್ದು, ಇದರ ನಿರ್ವಹಣೆಯನ್ನು ಸಚಿವಾಲಯವೇ ರಚಿಸಿರುವ ಸಮಿತಿಯೇ ಮಾಡುತ್ತಿದೆ. ಇದರಲ್ಲಿ ರಾಜ್ಯ ಸರಕಾರದ ಯಾವುದೇ ಪಾತ್ರ ಇಲ್ಲದಿದ್ದರೂ ಬಿಜೆಪಿ ಮುಖಂಡರು ಕಾಂಗ್ರೆಸ್‌ ಪಕ್ಷ ಹಾಗೂ ರಾಜ್ಯ ಸರಕಾರದ ಮೇಲೆ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಟೀಕಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್‌ ಮಧ್ವರಾಜ್‌ ವಿಶೇಷ ಮುತುವರ್ಜಿ ವಹಿಸಿ ರಾಜ್ಯ ಸರಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಕೆ.ಸಿ.ಝಡ್‌.ಎಂ.ಎ. ಸಭೆಯನ್ನು ಆದಷ್ಟು ಬೇಗ ನಡೆಸಿ ಶೀಘ್ರವೇ ಜಿಲ್ಲೆಯ ಜನರಿಗೆ ಮರಳು ದೊರಕಿಸಲು ವಿನಂತಿಸಿದ್ದರು. ಇದರ ಪರಿಣಾಮ 2017ರ ಜು.25 ರಂದು ಡಿಸಿ ಕಚೇರಿಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕೆ.ಸಿ.ಝಡ್‌.ಎಂ.ಎ. ಸಭೆ ನಡೆಸಿ ಉಡುಪಿ ಹಾಗೂ ದ. ಕನ್ನಡ ಜಿಲ್ಲೆಗೆ 2017-18ನೇ ಸಾಲಿನಲ್ಲಿ ಸಿಆರ್‌ಝಡ್‌ ವ್ಯಾಪ್ತಿಯ ಮರಳು ಪರವಾನಿಗೆ ದೊರಕಿಸಿಕೊಡಲು ಪಕ್ಷಾತೀತವಾಗಿ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತಾರೆ. ಅಲ್ಲದೆ ಆ ಬಳಿಕ ಉಡುಪಿ ಡಿಸಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಗಳನ್ನು ನಡೆಸಿ ಮರಳು ಜನರಿಗೆ ಲಭ್ಯವಾಗಲು ಹಾಗೂ ಜಿಲ್ಲೆಯ ಮರಳನ್ನು ಜಿಲ್ಲೆಗೇ ಬಳಕೆ ಮಾಡುವಂತೆ ಮಾಡಿದ್ದಾರೆ.

ಸಂಸದರು ಮುತುವರ್ಜಿ ವಹಿಸಿ ಮಾಡಬೇಕಾದ ಕೆಲಸವನ್ನು ಮಾಡದೇ ಕಾಂಗ್ರೆಸ್‌, ರಾಜ್ಯ ಸರಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಬಿಜೆಪಿ ಅನಗತ್ಯ ಆರೋಪ ಮಾಡುತ್ತಿದೆ. ಇದರ ಬದಲು ಬಿಜೆಪಿ ಈ ಬಗ್ಗೆ ತಮ್ಮ ಪಕ್ಷದ ವತಿಯಿಂದ ಕರಾವಳಿ ಭಾಗದ ಸಚಿವರನ್ನು ಒಳ ಗೊಂಡ 5 ಲೋಕಸಭಾ ಸದಸ್ಯರು ಇನ್ನಾದರೂ ಕೇಂದ್ರ ಸರಕಾರದಿಂದ ಜನರಿಗೆ ಉತ್ತಮವಾಗಿ ಕರಾವಳಿಯ ಮರಳು ದೊರೆಯುವಂತೆ ಮಾಡಲಿ ಎಂದು ಬ್ಲಾಕ್‌ ಕಾಂಗ್ರೆಸ್‌ 
ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ ಸವಾಲೆಸೆದರು.

ನೈಜ ಕಾರಣ ಏನು?
ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ನಾನ್‌ ಸಿ.ಆರ್‌.ಝಡ್‌. ಪ್ರದೇಶದ ನದಿಗಳಲ್ಲಿ ನೀರಿನ ಒಳಗಿನ ಮರಳುಗಾರಿಕೆಯನ್ನು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ನಿಷೇಧಿಸಿರುವುದೇ ಮರಳಿನ ಕೊರತೆಗೆ ಕಾರಣ. ಕೇಂದ್ರ ಸರಕಾರದ ನೀತಿ ಇದಕ್ಕೆ ಕಾರಣವಾಗಿದೆ. ಇದನ್ನು ಕರಾವಳಿ ಜಿಲ್ಲೆಗಳ ಬಿಜೆಪಿ ನಾಯಕರು ಮರೆತಿದ್ದಾರೆ. ಅಲ್ಲದೆ ಇಲ್ಲಸಲ್ಲದ ಅಪ ಪ್ರಚಾರ ನಡೆಸಿ ಮರಳು ಲಭ್ಯವಿಲ್ಲವೆಂದು ಬೊಬ್ಬೆ ಹೊಡೆಯುವ ಬಿಜೆಪಿ ನಾಯಕರು ಯಾವ ಪ್ರಾಮಾಣಿಕ ಪ್ರಯತ್ನವನ್ನೂ ನಡೆಸಿಲ್ಲ ಎಂದು ಆರೋಪಿಸಿದರು.

ಆರೋಪ ನಿಲ್ಲಿಸಲಿ
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು 2016ರ ಡಿ.15 ಹಾಗೂ 2018ರ ಜ.2 ರಂದು ಡಿಸಿ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಾನ್‌ ಸಿ.ಆರ್‌.ಝಡ್‌. ಪ್ರದೇಶದಲ್ಲಿ ಗುರುತಿಸಿದ 16 ಮರಳು ಬ್ಲಾಕ್‌ಗಳನ್ನು ಜಿಲ್ಲಾಡಳಿತದ ಮೂಲಕ ರಾಜ್ಯ ಪರಿಸರ ಮತ್ತು ಅರಣ್ಯ ಇಲಾಖೆಗೆ ಶಿಫಾರಸು ಮಾಡಿಸಿರುತ್ತಾರೆ. ಅಲ್ಲದೆ ರಾಜ್ಯದಿಂದ ಈಗಾಗಲೇ ಕೇಂದ್ರ ಸರಕಾರಕ್ಕೆ ಈ ಬಗ್ಗೆ ಶಿಫಾರಸು ಮಾಡಿದರೂ ಅನುಮತಿ ಪಡೆಯುವಲ್ಲಿ ಬಿಜೆಪಿ ಮುಖಂಡರು ಪ್ರಯತ್ನ ಮಾಡಿಲ್ಲ ಎಂದು ಆಪಾದಿಸಿದರು. ಇನ್ನಾದರೂ ಬಿಜೆಪಿಯವರು ರಾಜ್ಯ ಸರಕಾರ, ಕಾಂಗ್ರೆಸ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಆರೋಪ ನಿಲ್ಲಿಸಲಿ ಎಂದು ಹೇಳಿದ್ದಾರೆ.

ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್‌, ಕಾಂಗ್ರೆಸ್‌ ಮುಖಂಡ ಅಮೃತ್‌ ಶೆಣೈ, ನಗರಸಭಾ ಸದಸ್ಯ ನಾರಾಯಣ ಕುಂದರ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ಪೂಜಾರಿ ಮೊದಲಾದವರು ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.