ಎಣಿಕೆ ಕೇಂದ್ರದಲ್ಲಿ ಸಿಬಂದಿ ಮೊಬೈಲ್‌ ಬಳಸಿದರೆ ವಜಾ

ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಧಿಕಾರಿ, ಸಿಬಂದಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ

Team Udayavani, May 18, 2019, 6:00 AM IST

DC

ಉಡುಪಿ: ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನು ಕಡ್ಡಾಯ ವಾಗಿ ನಿಷೇಧಿಸಲಾಗಿದ್ದು, ನಿಷೇಧ ಉಲ್ಲಂ ಸುವ ಸಿಬಂದಿಯನ್ನು ಸೇವೆಯಿಂದ ವಜಾ ಮಾಡ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಸಿದ್ದಾರೆ.

ಉಡುಪಿಯ ಸೈಂಟ್‌ ಸಿಸಿಲಿ ಶಾಲೆಯಲ್ಲಿ ಮೇ 23ರಂದು ನಡೆಯುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬಂದಿಗಳು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಒತ್ತಡ ಅಥವಾ ಗೊಂದಲಕ್ಕೆ ಒಳಗಾಗದಂತೆ ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅವರು ಶುಕ್ರವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮತ ಎಣಿಕೆ ಕಾರ್ಯಗಳಿಗೆ ನಿಯೋಜನೆಗೊಂಡ ಸಿಬಂದಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಪ್ಪಾಗದಂತೆ ಎಚ್ಚರ ವಹಿಸಿ
ಮತ ಎಣಿಕೆ ಕಾರ್ಯಕ್ಕೆ‌ ನಿಯೋಜಿಸಿರುವ ಸಿಬಂದಿ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಮತ ಎಣಿಕೆಯ ಯಾವುದೇ ಹಂತದಲ್ಲೂ ತಪ್ಪುಗಳಾಗದಂತೆ ಎಚ್ಚರ ವಹಿಸಬೇಕು. ಮತ ಎಣಿಕೆ ಕೊಠಡಿಯಲ್ಲಿ ಮತದಾನದ ಗೌಪ್ಯತೆ ಕಾಪಾಡಬೇಕು. ಯಾವುದೇ ಕಾರಣಕ್ಕೂ ಮತ ಎಣಿಕೆಯ ವಿವರಗಳನ್ನು ತಮ್ಮ ಮೇಲಿನ ಅಧಿಕಾರಿಗಳಿಗೆ ಹೊರತುಪಡಿಸಿ ಬೇರೆಯವರಿಗೆ ನೀಡಬಾರದು. ಮತ ಎಣಿಕೆ ಕೊಠಡಿಯಲ್ಲಿ ಅನಗತ್ಯವಾಗಿ ಓಡಾಡದೆ ತಮಗೆ ನಿಯೋಜಿಸಿರುವ ಕೊಠಡಿಯಲ್ಲಿಯೇ ಸಂಪೂರ್ಣ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಇರಬೇಕು. ಮತ ಎಣಿಕೆ ಕೇಂದ್ರದಲ್ಲಿ ಸಿಬಂದಿಗಳಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಬೆಳಗ್ಗೆ 6 ಗಂಟೆಯೊಳಗೆ ಹಾಜರಿ
ಮತ ಎಣಿಕೆ ಸಿಬಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕ ಬಣ್ಣದ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು ಮತ ಎಣಿಕೆ ದಿನ ಬೆಳಗ್ಗೆ 6 ಗಂಟೆ ಒಳಗೆ ಕೇಂದ್ರದಲ್ಲಿ ಹಾಜರಿದ್ದು, ತಮಗೆ ನಿಗದಿಪಡಿಸಿದ ಕೊಠಡಿಗೆ ತೆರಳಬೇಕು. ಅಂಚೆಮತ ಪತ್ರಗಳ ಎಣಿಕೆ ಅನಂತರ ಇವಿಎಂ ಮತ ಎಣಿಕೆ ಪ್ರಾರಂಭವಾಗಲಿದೆ. ಅಂಚೆ ಮತ ಪತ್ರ ಎಣಿಕೆ ಸಿಬಂದಿ ಅತ್ಯಂತ ಎಚ್ಚರಿಕೆಯಿಂದ ಎಣಿಕೆ ಮಾಡಬೇಕು. ಒಟ್ಟು 16ರಿಂದ 19 ಸುತ್ತಿನವರೆಗೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಇವಿಎಂ ಮತ ಎಣಿಕೆ ಅನಂತರ ಪ್ರತಿ ವಿಧಾನಸಭಾವಾರು ಲಾಟರಿ ಮೂಲಕ ಆಯ್ಕೆ ಮಾಡುವ 5 ಮತಗಟ್ಟೆಗಳ ವಿವಿ ಪ್ಯಾಟ್‌ ಸ್ಲಿಪ್‌ಗ್ಳ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿವಿ ಪ್ಯಾಟ್‌ನಲ್ಲಿನ ಸ್ಲಿಪ್‌ಗ್ಳ ಎಣಿಕೆಗೆ ಒಂದು ಗಂಟೆ ತಗುಲಲಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಜಿಲ್ಲೆಯ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಮಾಸ್ಟರ್‌ ಟ್ರೆçನರ್‌ ಅಶೋಕ್‌ ಕಾಮತ್‌, ಮತ ಎಣಿಕೆ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ತರಬೇತಿ ನೀಡಿದರು.

ಕ್ಷೇತ್ರವಾರು ಮತಗಟ್ಟೆ- ಮತ ಎಣಿಕೆ ಸುತ್ತು
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 222 ಮತಗಟ್ಟೆಗಳಿದ್ದು 16 ಸುತ್ತಿನ ಮತ ಎಣಿಕೆ, ಉಡುಪಿಯ 226 ಮತಗಟ್ಟೆಗಳಲ್ಲಿ 17 ಸುತ್ತಿನ ಮತ ಎಣಿಕೆ, ಕಾಪು 208 ಮತಗಟ್ಟೆಗಳಲ್ಲಿ 15 ಸುತ್ತಿನ ಮತ ಎಣಿಕೆ, ಕಾರ್ಕಳದ 209 ಮತಗಟ್ಟೆಗಳಲ್ಲಿ 15 ಸುತ್ತಿನ ಮತ ಎಣಿಕೆ, ಶೃಂಗೇರಿಯ 256 ಮತಗಟ್ಟೆಗಳಲ್ಲಿ 19 ಸುತ್ತಿನ ಮತ ಎಣಿಕೆ, ಮೂಡಿಗೆರೆಯ 231 ಮತಗಟ್ಟೆಗಳಲ್ಲಿ 17 ಸುತ್ತಿನ ಮತ ಎಣಿಕೆ, ಚಿಕ್ಕಮಗಳೂರಿನ 257 ಮತಗಟ್ಟೆಗಳಲ್ಲಿ 19 ಸುತ್ತಿನ ಮತ ಎಣಿಕೆ, ತರಿಕೆರೆಯ 228 ಮತಗಟ್ಟೆಗಳಲ್ಲಿ 17 ಸುತ್ತಿನ ಮತ ಎಣಿಕೆ ನಡೆಯಲಿದೆ ಹಾಗೂ ಪ್ರತಿ ವಿಧಾನಸಭಾವಾರು ಪ್ರತ್ಯೇಕವಾಗಿ ವಿವಿ ಪ್ಯಾಟ್‌ ಸ್ಲಿಪ್‌ಗ್ಳ ಎಣಿಕೆ ನಡೆಯಲಿದೆ.
– ಹೆಪ್ಸಿಬಾ ರಾಣಿ ಕೊರ್ಲಪಾಟಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.