ಎಣಿಕೆ ಕೇಂದ್ರದಲ್ಲಿ ಸಿಬಂದಿ ಮೊಬೈಲ್‌ ಬಳಸಿದರೆ ವಜಾ

ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಧಿಕಾರಿ, ಸಿಬಂದಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ

Team Udayavani, May 18, 2019, 6:00 AM IST

DC

ಉಡುಪಿ: ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನು ಕಡ್ಡಾಯ ವಾಗಿ ನಿಷೇಧಿಸಲಾಗಿದ್ದು, ನಿಷೇಧ ಉಲ್ಲಂ ಸುವ ಸಿಬಂದಿಯನ್ನು ಸೇವೆಯಿಂದ ವಜಾ ಮಾಡ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಸಿದ್ದಾರೆ.

ಉಡುಪಿಯ ಸೈಂಟ್‌ ಸಿಸಿಲಿ ಶಾಲೆಯಲ್ಲಿ ಮೇ 23ರಂದು ನಡೆಯುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬಂದಿಗಳು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಒತ್ತಡ ಅಥವಾ ಗೊಂದಲಕ್ಕೆ ಒಳಗಾಗದಂತೆ ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅವರು ಶುಕ್ರವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮತ ಎಣಿಕೆ ಕಾರ್ಯಗಳಿಗೆ ನಿಯೋಜನೆಗೊಂಡ ಸಿಬಂದಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಪ್ಪಾಗದಂತೆ ಎಚ್ಚರ ವಹಿಸಿ
ಮತ ಎಣಿಕೆ ಕಾರ್ಯಕ್ಕೆ‌ ನಿಯೋಜಿಸಿರುವ ಸಿಬಂದಿ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಮತ ಎಣಿಕೆಯ ಯಾವುದೇ ಹಂತದಲ್ಲೂ ತಪ್ಪುಗಳಾಗದಂತೆ ಎಚ್ಚರ ವಹಿಸಬೇಕು. ಮತ ಎಣಿಕೆ ಕೊಠಡಿಯಲ್ಲಿ ಮತದಾನದ ಗೌಪ್ಯತೆ ಕಾಪಾಡಬೇಕು. ಯಾವುದೇ ಕಾರಣಕ್ಕೂ ಮತ ಎಣಿಕೆಯ ವಿವರಗಳನ್ನು ತಮ್ಮ ಮೇಲಿನ ಅಧಿಕಾರಿಗಳಿಗೆ ಹೊರತುಪಡಿಸಿ ಬೇರೆಯವರಿಗೆ ನೀಡಬಾರದು. ಮತ ಎಣಿಕೆ ಕೊಠಡಿಯಲ್ಲಿ ಅನಗತ್ಯವಾಗಿ ಓಡಾಡದೆ ತಮಗೆ ನಿಯೋಜಿಸಿರುವ ಕೊಠಡಿಯಲ್ಲಿಯೇ ಸಂಪೂರ್ಣ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಇರಬೇಕು. ಮತ ಎಣಿಕೆ ಕೇಂದ್ರದಲ್ಲಿ ಸಿಬಂದಿಗಳಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಬೆಳಗ್ಗೆ 6 ಗಂಟೆಯೊಳಗೆ ಹಾಜರಿ
ಮತ ಎಣಿಕೆ ಸಿಬಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕ ಬಣ್ಣದ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು ಮತ ಎಣಿಕೆ ದಿನ ಬೆಳಗ್ಗೆ 6 ಗಂಟೆ ಒಳಗೆ ಕೇಂದ್ರದಲ್ಲಿ ಹಾಜರಿದ್ದು, ತಮಗೆ ನಿಗದಿಪಡಿಸಿದ ಕೊಠಡಿಗೆ ತೆರಳಬೇಕು. ಅಂಚೆಮತ ಪತ್ರಗಳ ಎಣಿಕೆ ಅನಂತರ ಇವಿಎಂ ಮತ ಎಣಿಕೆ ಪ್ರಾರಂಭವಾಗಲಿದೆ. ಅಂಚೆ ಮತ ಪತ್ರ ಎಣಿಕೆ ಸಿಬಂದಿ ಅತ್ಯಂತ ಎಚ್ಚರಿಕೆಯಿಂದ ಎಣಿಕೆ ಮಾಡಬೇಕು. ಒಟ್ಟು 16ರಿಂದ 19 ಸುತ್ತಿನವರೆಗೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಇವಿಎಂ ಮತ ಎಣಿಕೆ ಅನಂತರ ಪ್ರತಿ ವಿಧಾನಸಭಾವಾರು ಲಾಟರಿ ಮೂಲಕ ಆಯ್ಕೆ ಮಾಡುವ 5 ಮತಗಟ್ಟೆಗಳ ವಿವಿ ಪ್ಯಾಟ್‌ ಸ್ಲಿಪ್‌ಗ್ಳ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿವಿ ಪ್ಯಾಟ್‌ನಲ್ಲಿನ ಸ್ಲಿಪ್‌ಗ್ಳ ಎಣಿಕೆಗೆ ಒಂದು ಗಂಟೆ ತಗುಲಲಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಜಿಲ್ಲೆಯ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಮಾಸ್ಟರ್‌ ಟ್ರೆçನರ್‌ ಅಶೋಕ್‌ ಕಾಮತ್‌, ಮತ ಎಣಿಕೆ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ತರಬೇತಿ ನೀಡಿದರು.

ಕ್ಷೇತ್ರವಾರು ಮತಗಟ್ಟೆ- ಮತ ಎಣಿಕೆ ಸುತ್ತು
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 222 ಮತಗಟ್ಟೆಗಳಿದ್ದು 16 ಸುತ್ತಿನ ಮತ ಎಣಿಕೆ, ಉಡುಪಿಯ 226 ಮತಗಟ್ಟೆಗಳಲ್ಲಿ 17 ಸುತ್ತಿನ ಮತ ಎಣಿಕೆ, ಕಾಪು 208 ಮತಗಟ್ಟೆಗಳಲ್ಲಿ 15 ಸುತ್ತಿನ ಮತ ಎಣಿಕೆ, ಕಾರ್ಕಳದ 209 ಮತಗಟ್ಟೆಗಳಲ್ಲಿ 15 ಸುತ್ತಿನ ಮತ ಎಣಿಕೆ, ಶೃಂಗೇರಿಯ 256 ಮತಗಟ್ಟೆಗಳಲ್ಲಿ 19 ಸುತ್ತಿನ ಮತ ಎಣಿಕೆ, ಮೂಡಿಗೆರೆಯ 231 ಮತಗಟ್ಟೆಗಳಲ್ಲಿ 17 ಸುತ್ತಿನ ಮತ ಎಣಿಕೆ, ಚಿಕ್ಕಮಗಳೂರಿನ 257 ಮತಗಟ್ಟೆಗಳಲ್ಲಿ 19 ಸುತ್ತಿನ ಮತ ಎಣಿಕೆ, ತರಿಕೆರೆಯ 228 ಮತಗಟ್ಟೆಗಳಲ್ಲಿ 17 ಸುತ್ತಿನ ಮತ ಎಣಿಕೆ ನಡೆಯಲಿದೆ ಹಾಗೂ ಪ್ರತಿ ವಿಧಾನಸಭಾವಾರು ಪ್ರತ್ಯೇಕವಾಗಿ ವಿವಿ ಪ್ಯಾಟ್‌ ಸ್ಲಿಪ್‌ಗ್ಳ ಎಣಿಕೆ ನಡೆಯಲಿದೆ.
– ಹೆಪ್ಸಿಬಾ ರಾಣಿ ಕೊರ್ಲಪಾಟಿ

ಟಾಪ್ ನ್ಯೂಸ್

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

lr chethan

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

Katapadi ;ಕೃಷಿ ಭೂಮಿಯತ್ತ ಹೊಳೆ ನೀರು ನುಗ್ಗುವ ಭೀತಿ

Katapadi ;ಕೃಷಿ ಭೂಮಿಯತ್ತ ಹೊಳೆ ನೀರು ನುಗ್ಗುವ ಭೀತಿ

Baje Dam ಹತ್ತು ದಿನಕ್ಕಾಗುವಷ್ಟು ನೀರು !ಮಳೆ ಬಾರದಿದ್ದರೆ ಜಲಕ್ಷಾಮ ಭೀತಿ

Baje Dam ಹತ್ತು ದಿನಕ್ಕಾಗುವಷ್ಟು ನೀರು !ಮಳೆ ಬಾರದಿದ್ದರೆ ಜಲಕ್ಷಾಮ ಭೀತಿ

Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ

Gundibailu: ರಸ್ತೆ ವಿಭಜಕ ತೆರವುಗೊಳಿಸಿದ್ದಕ್ಕೆ ಆಕ್ರೋಶ

Manipal: ಮಣ್ಣಪಳ್ಳ ಅವ್ಯವಸ್ಥೆಗೆ ಸಿಗದ ಪರಿಹಾರ

Manipal: ಮಣ್ಣಪಳ್ಳ ಅವ್ಯವಸ್ಥೆಗೆ ಸಿಗದ ಪರಿಹಾರ

MUST WATCH

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ಹೊಸ ಸೇರ್ಪಡೆ

1-sdsad

ಕಾರ ಹುಣ್ಣಿಮೆ ನಿಮಿತ್ತ ಸಂಭ್ರಮದ `ಕರಿ’ ಹರಿಯುವ ಕಾರ್ಯಕ್ರಮ

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1-sadsdasd

Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ