ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಭತ್ತ ಕಟಾವು ಯಂತ್ರಗಳ ದುಬಾರಿ ಬಾಡಿಗೆ

Team Udayavani, Oct 25, 2021, 6:30 AM IST

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಉಡುಪಿ: ಭತ್ತ ಕಟಾವು ಯಂತ್ರಗಳ ದುಬಾರಿ ಬಾಡಿಗೆಗೆ ಕಡಿವಾಣ ಹಾಕಬೇಕಾದರೆ ರಾಜ್ಯದೆಲ್ಲೆಡೆ ಏಕರೂಪದ ಬಾಡಿಗೆ ಜಾರಿಗೆ ಬರಬೇಕು. ಈ ರೀತಿ ಮಾಡಿದರಷ್ಟೇ ಬಾಡಿಗೆ ದರ ನಿಯಂತ್ರಣ ಸಾಧ್ಯ ಎಂಬುದು ಅಧಿಕಾರಿಗಳ ಅಭಿಪ್ರಾಯ.
ಏಕರೂಪದ ದರ ಇಲ್ಲದಿರುವುದರಿಂದ ಈಗ ಕಟಾವು ಯಂತ್ರ ಮಾಲಕರು ಎಲ್ಲಿ ಹೆಚ್ಚು ಬಾಡಿಗೆ‌ ಸಿಗುತ್ತದೆಯೋ ಅಲ್ಲಿಗೆ ಹೋಗುತ್ತಿದ್ದಾರೆ. ಇದರಿಂದ ಕೆಲವೆಡೆ ಸಕಾಲದಲ್ಲಿ ಯಂತ್ರಗಳು ಸಿಗುತ್ತಿಲ್ಲ. ಇದರಿಂದ ಕೃಷಿಕರಿಗೆ ಸಮಸ್ಯೆಯಾಗಿದೆ.

ಇಂತಹ ಒಂದು ಪ್ರಸ್ತಾವವನ್ನು ಈಗಾಗಲೇ ಸರಕಾರದ ಮುಂದಿಡಲಾಗಿರುವುದರಿಂದ ಕೃಷಿಗೆ ಇನ್ನಷ್ಟು ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಸರಕಾರ ಬೇಗನೆ ಕ್ರಮ ಕೈಗೊಳ್ಳುವುದು ಅಗತ್ಯ. ಹೆಚ್ಚಿನ ಕಟಾವು ಯಂತ್ರಗಳನ್ನು ಸರಕಾರದ ಸಬ್ಸಿಡಿಯಲ್ಲಿಯೇ ಖರೀದಿ ಸಿರುತ್ತಾರೆ. ಆದುದರಿಂದ ಬಾಡಿಗೆ ದರದ ಮೇಲೆ ನಿಯಂತ್ರಣ ಹೇರುವುದು ಕಷ್ಟವೇನಲ್ಲ. ಬಸ್‌ ಪ್ರಯಾಣ ದರದ ಮೇಲೆ ನಿಯಂತ್ರಣ ಇರುವಂತೆ ಇಲ್ಲಿಯೂ ಸರಕಾರಿ ವ್ಯವಸ್ಥೆಯಿಂದ ಕಾರ್ಯನಿರ್ವಹಣೆ ಸಾಧ್ಯವಿದೆ ಎಂಬುದು ಕೃಷಿಕರ ಅಭಿಪ್ರಾಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿಯವರಿಗೆ ಏಕರೂಪದ ದರ ನಿಗದಿಪಡಿಸಿದರೆ ಹೆಚ್ಚು ದರ ನೀಡುವ ಜಿಲ್ಲೆಗಳತ್ತ ಕಟಾವು ಯಂತ್ರ ಮಾಲಕರು ತೆರಳುವ ಸಾಧ್ಯತೆಗಳಿರುತ್ತವೆ. ರಾಜ್ಯ ಮಟ್ಟದಲ್ಲಿ ಭತ್ತ ಕಟಾವು ಬಗ್ಗೆ ಏಕರೂಪದ ದರ ನಿಗದಿಪಡಿಸಿದರೆ ಸಮಸ್ಯೆಗೆ ಪರಿಹಾರ ಸಾಧ್ಯ. ಈ ಬಗ್ಗೆ ಈಗಾಗಲೇ ರಾಜ್ಯಮಟ್ಟದ ಸಭೆಗಳಲ್ಲಿಯೂ ಪ್ರಸ್ತಾವಿಸಲಾಗಿದೆ.
-ಡಾ| ವೈ. ನವೀನ್‌ ಭಟ್‌, ಉಡುಪಿ ಜಿ.ಪಂ. ಸಿಇಒ

ಇದನ್ನೂ ಓದಿ:ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಏಕಕಾಲದಲ್ಲಿ ಭತ್ತ ಕಟಾವು ಪ್ರಕ್ರಿಯೆ ಬರುವ ಕಾರಣದಿಂದಾಗಿ ಕಟಾವು ಯಂತ್ರಗಳ ಅಭಾವ ಕಂಡುಬರುತ್ತಿದೆ. ವಿವಿಧೆಡೆಗಳಿಂದ ಯಂತ್ರಗಳು ಆಗಮಿಸುತ್ತಿದ್ದು, ಹೆಚ್ಚುವರಿ ಬಾಡಿಗೆ ದರ ವಸೂಲಿಯ ದೂರು ಬಂದರೆ ಕ್ರಮ ತೆಗೆದುಕೊಳ್ಳಲಾಗುವುದು. ಸಬ್ಸಿಡಿ ದರದಲ್ಲಿ ರೈತರಿಗೆ ಇಂಧನ ಒದಗಿಸುವ ಬಗ್ಗೆ ಮನವಿಗಳು ಬಂದರೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು.
-ಡಾ| ಕುಮಾರ್‌, ದ.ಕ. ಜಿ.ಪಂ. ಸಿಇಒ

ಖಾಸಗಿ ಯಂತ್ರಗಳ ಬಗ್ಗೆ ಸ್ಥಳೀಯ ರೈತ ಸಂಪರ್ಕ ಕೇಂದ್ರ ಗಳಿಗೆ ಮಾಹಿತಿ ಲಭ್ಯವಾದರೆ ಉತ್ತಮ. ಹೆಚ್ಚಿನ ದರ ವಸೂಲಿ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ರೈತರು ಎಫ್ಪಿಒ ಮಾಡಿ 5ರಿಂದ 6 ಯಂತ್ರಗಳನ್ನು ಖರೀದಿಸಿ ಆಯಾ ವಲಯ ವ್ಯಾಪ್ತಿಯಲ್ಲಿ ಭತ್ತ ಕಟಾವು ಕಾರ್ಯಗಳನ್ನೂ ಮಾಡಬಹುದು. ಹೆಚ್ಚು ದರ ತೆಗೆದುಕೊಳ್ಳುವ ಬಗ್ಗೆ ದೂರು ಬಂದರೆ ಮೇಲಧಿ ಕಾರಿಗಳಿಗೆ ತಿಳಿಸಲಾಗುವುದು.
– ಅಬ್ದುಲ್‌ ಬಷೀರ್‌, ಕೃಷಿ ಅಧಿಕಾರಿ,
ಮೂಲ್ಕಿ ಹೋಬಳಿ

ಹೊರ ರಾಜ್ಯ ಅಥವಾ ಜಿಲ್ಲೆಗಳಿಂದ ಆಗಮಿಸುವ ಭತ್ತ ಕಟಾವು ಯಂತ್ರಗಳನ್ನು ಜಿಲ್ಲೆಯ ಆಯಾ ಹೋಬಳಿಗೆ ವಿಂಗಡನೆ ಮಾಡಿ ಕಟಾವು ಪ್ರಕ್ರಿಯೆ ನಡೆಸಬೇಕು. ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಮೂಲಕ ಯಂತ್ರಗಳ ಹಂಚಿಕೆಯಾದರೆ ಇದು ಸಾಧ್ಯವಾಗಬಹುದು. ಯಂತ್ರಗಳನ್ನು ಮೊದಲೇ ನೋಂದಣಿ ಮಾಡಿಸಿಕೊಂಡರೆ ಹೆಚ್ಚುವರಿ ದರ ಪಡೆಯುವವರನ್ನು ಗುರುತಿಸಿ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿದೆ.
– ರಮೇಶ್‌ ಉಳ್ಳಾಗಡ್ಡಿ, ಸಹಾಯಕ ಕೃಷಿ ಅಧಿಕಾರಿ,
ಕಾರ್ಕಳ ಹೋಬಳಿ ರೈತ ಸಂಪರ್ಕ ಕೇಂದ್ರ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.