ಇನ್ನಂಜೆ – ಶಂಕರಪುರ ರಸ್ತೆ: ಬಾವಿ ದಂಡೆ ಕುಸಿತ

ಅಪಾಯದ ಭೀತಿಯಲ್ಲಿ ಕಾಂಕ್ರೀಟ್‌ ರಸ್ತೆ

Team Udayavani, Oct 19, 2021, 5:18 AM IST

ಇನ್ನಂಜೆ – ಶಂಕರಪುರ ರಸ್ತೆ: ಬಾವಿ ದಂಡೆ ಕುಸಿತ

ಕಾಪು: ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಇನ್ನಂಜೆ-ಶಂಕರಪುರ ರಸ್ತೆಯ ಕಾಂಕ್ರೀಟ್‌ ರಸ್ತೆ ಪಕ್ಕದ ಬಾವಿಯ ದಂಡೆ ಕುಸಿದು ಅಪಾಯಕಾರಿ ಕಂದಕ ಸೃಷ್ಟಿಯಾಗಿದ್ದು ಕಾಂಕ್ರೀಟ್‌ ರಸ್ತೆ, ರಸ್ತೆ ಸಂಚಾರಕ್ಕೆ ಅಪಾಯದ ಭೀತಿ ಎದುರಾಗಿದೆ.

ಇನ್ನಂಜೆ – ಶಂಕರಪುರ ರಸ್ತೆಯಲ್ಲಿ ಇನ್ನಂಜೆ ಸಿಎ ಬ್ಯಾಂಕ್‌ ಪ್ರಧಾನ ಕಚೇರಿ ಬಳಿಯ ಅಶ್ವಥಕಟ್ಟೆ ಪಕ್ಕದಲ್ಲಿರುವ ಖಾಸಗಿಯವರಿಗೆ ಸೇರಿದ ಗದ್ದೆಯ ಬದಿಯಲ್ಲಿರುವ ಬಾವಿಯ ದಂಡೆಯ ಒಂದು ಪಾರ್ಶ್ವ ಸಂಪೂರ್ಣ ಕುಸಿದಿದ್ದು, ದಂಡೆಯೊಂದಿಗೆ ಕಾಂಕ್ರೀಟ್‌ ರಸ್ತೆಯ ಬದಿಯೂ ಬಾವಿಯೊಳಗೆ ಕುಸಿದು ಬಿದ್ದಿರುವುದರಿಂದ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ.

ಅಗಲ ಕಿರಿದಾದ ಕಾಂಕ್ರೀಟ್‌ ರಸ್ತೆ ಬದಿಯ ಒಂದು ಪಾರ್ಶ್ವ ಕುಸಿದು ಎರಡು ತಿಂಗಳಾಗುತ್ತಾ ಬಂದಿದ್ದು ಗ್ರಾ.ಪಂ. ಪೊಲೀಸ್‌ ಇಲಾಖೆಯ ಸಹಯೋಗದೊಂದಿಗೆ ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್‌ ಇರಿಸಿ, ಟೇಪ್‌ ಅಂಟಿಸಿ, ತಾತ್ಕಾಲಿಕ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಕಾಪು – ಇನ್ನಂಜೆ – ಶಂಕರಪುರ ನಡುವಿನ ಪ್ರಮುಖ ರಸ್ತೆ ಇದಾಗಿದೆ. ಗ್ರಾ.ಪಂ. ಎಚ್ಚೆತ್ತುಕೊಂಡು, ಪರ್ಯಾಯ ವ್ಯವಸ್ಥೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಮುಂಬರುವ ದಿನಗಳಲ್ಲಿ ಕರ್ನಾಟಕ ಎಲ್ಲಾ ಕ್ಷೇತ್ರದಲ್ಲೂ ಅಗ್ರಸ್ಥಾನ ಪಡೆಯಲಿದೆ :ಅಶ್ವತ್ಥನಾರಾಯಣ

ಶೀಘ್ರ ಶಾಶ್ವತ ತಡೆಗೋಡೆ ರಚನೆಗೆ ಪ್ರಯತ್ನ
ಇನ್ನಂಜೆ – ಶಂಕರಪುರ ರಸ್ತೆಯ ಅಶ್ವತ್ಥಕಟ್ಟೆಯ ಬಳಿಯಲ್ಲಿ ರಸ್ತೆಯ ಒಂದು ಪಾರ್ಶ್ವ ಕುಸಿದಿರುವ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್‌ ಇರಿಸಿ, ಸೂಚನೆ ನೀಡಲಾಗಿದೆ. ಬಾವಿ ಖಾಸಗಿಯವರಿಗೆ ಸೇರಿದ್ದು, ದಂಡೆ ಕುಸಿತದ ಬಗ್ಗೆ ಜಾಗದ ವಾರಸುದಾರರೊಂದಿಗೂ ಮಾತುಕತೆ ನಡೆಸಲಾಗಿದೆ. ಮರಳು ಗೋಣಿ ಚೀಲಗಳನ್ನು ಇಟ್ಟು ತಾತ್ಕಾಲಿಕ ತಡೆಗೋಡೆ ರಚಿಸಲು ಗ್ರಾ.ಪಂ. ಕ್ರಮ ಕೈಗೊಂಡಿದ್ದು, ಮಳೆಗಾಲ ಮುಗಿದ ಬಳಿಕ ಪಿಲ್ಲರ್‌ ಹಾಕಿ ಶಾಶ್ವತ ತಡೆಗೋಡೆ ರಚಿಸಲಾಗುವುದು.
-ಸುರೇಶ್‌ ಶೆಟ್ಟಿ, ಉಪಾಧ್ಯಕ್ಷರು, ಇನ್ನಂಜೆ ಗ್ರಾ.ಪಂ.,

ಪರಿಶೀಲನೆ
ಜಿ.ಪಂ. ರಸ್ತೆ ಇದಾಗಿದ್ದು ಜಿ.ಪಂ. ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಸ್ಥಳ ಸಮೀಕ್ಷೆ ನಡೆಸಿದ್ದಾರೆ. ಪಂಚಾಯತ್‌ ನೇತೃತ್ವದಲ್ಲೂ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರೊಂದಿಗೆ ಪರಿಶೀಲನೆ ನಡೆಸಲಾಗಿದೆ. ಗ್ರಾ.ಪಂ.ನ ವರ್ಗ 1ರ ಅನುದಾನ ಬಳಸಿಕೊಂಡು ತಾತ್ಕಾಲಿಕ ತಡೆಗೋಡೆ ರಚಿಸಲಾಗುವುದು. ಮಳೆ ಕಡಿಮೆಯಾದ ಬಳಿಕ ಪಿಲ್ಲರ್‌ ಅಳವಡಿಸಿ, ಶಾಶ್ವತ ತಡೆಗೋಡೆ ಸಹಿತ ಕಾಮಗಾರಿ ನಡೆಸಲಾಗುವುದು.
-ಮಂಜುನಾಥ ಆಚಾರ್ಯ, ಪಿಡಿಒ, ಇನ್ನಂಜೆ ಗ್ರಾ.ಪಂ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.