ನಾಳೆ ಉಪ್ಪೂರು ಡೈರಿ ಉದ್ಘಾಟನೆ
Team Udayavani, Jan 28, 2019, 12:50 AM IST
ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ್ಪೂರು ಘಟಕದ ಉದ್ಘಾಟನೆ ಜ. 29ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಣಿಪಾಲ ಡೈರಿ 1976ರಿಂದ ಕಾರ್ಯಾಚರಿಸುತ್ತಿದ್ದು 2,000 ಲೀ. ಸಂಸ್ಕರಣಾ ಸಾಮರ್ಥ್ಯ ಹೊಂದಿತ್ತು. ಸದ್ಯ 80 ಸಾವಿರ ಲೀ.ಗೆ ಹೆಚ್ಚಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯ ಬೇಡಿಕೆ ಪೂರೈಸಲು 1.5 ಲಕ್ಷ ಲೀ. ಸಾಮರ್ಥ್ಯದ ಡೈರಿಯ ಆವಶ್ಯಕತೆ ಇದೆ. ಮುಂದಿನ 5 ವರ್ಷಗಳ ಬೆಳವಣಿಗೆಯನ್ನು ಗಮನಿಸಿ ದಿನಕ್ಕೆ 2.5 ಲಕ್ಷ ಲೀ. ಸಾಮರ್ಥ್ಯದ ಡೈರಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.
ಆಧುನಿಕ ತಂತ್ರಜ್ಞಾನ
ಆರು ಎಕರೆ ಪ್ರದೇಶದಲ್ಲಿರುವ ಈ ಘಟಕ ಸ್ವಯಂ ಚಾಲಿತ ಸಂಸ್ಕರಣ ವ್ಯವಸ್ಥೆ ಹೊಂದಿದೆ. ಇಲ್ಲಿ ದಿನಕ್ಕೆ
2 ಲಕ್ಷ ಲೀ. ಹಾಲು ಸಂಸ್ಕರಣೆ, 50 ಸಾವಿರ ಕೆ.ಜಿ. ಮೊಸರು, ಲಸ್ಸಿ, ಮಜ್ಜಿಗೆ ತಯಾರಿಕೆ-ಪ್ಯಾಕಿಂಗ್, 2 ಟನ್ ತುಪ್ಪ ತಯಾರಿಸಲಾಗುತ್ತದೆ ಎಂದು ವಿವರಿಸಿದರು.
ಪರಿಸರ ಸಂರಕ್ಷಣೆ ಉದ್ದೇಶ
ಕಾನ್ಸಂಟ್ರೇಟೆಡ್ ಸೋಲಾರ್ ಥರ್ಮಲ್ ಪವರ್ ವ್ಯವಸ್ಥೆಯನ್ನು ಸ್ಥಾವರದಲ್ಲಿ ಅಳವಡಿಸಿಕೊಳ್ಳಲಾಗಿದೆ. ಬಿಸಿನೀರನ್ನು ಕ್ರೇಟು, ಯಂತ್ರೋಪಕರಣ, ಟ್ಯಾಂಕರ್ ತೊಳೆಯಲು ಮತ್ತು ಹಬೆ ಯಂತ್ರದಲ್ಲಿ ಶಕ್ತಿ ಉಳಿತಾಯಕ್ಕಾಗಿ ಉಪಯೋಗಿಸಲಾಗುವುದು. ಒಕ್ಕೂಟ ಪ್ರಸ್ತುತ ದಿನಕ್ಕೆ 4.50 ಲಕ್ಷ ಲೀ. ಹಾಲು ಶೇಖರಿಸುತ್ತಿದೆ. ಹಾಲು ಮಾರಾಟವು 3.5 ಲಕ್ಷ ಲೀ. ದಾಟಿದೆ ಎಂದು ತಿಳಿಸಿದರು.
ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಟಿ. ಸೂರ್ಯ ಶೆಟ್ಟಿ, ಹದ್ದೂರು ರಾಜೀವ ಶೆಟ್ಟಿ, ಜಾನಕಿ ಹಂದೆ, ಅಶೋಕ್ ಕುಮಾರ್ ಶೆಟ್ಟಿ, ಉದಯ ಎಸ್. ಕೋಟ್ಯಾನ್, ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ, ವ್ಯವಸ್ಥಾಪಕ ಅಭಿಯಂತರ ಜಿ.ಎ. ರಾಯ್ಕರ್, ಶೇಖರಣೆ ಮತ್ತು ತಾಂತ್ರಿಕ ವ್ಯವಸ್ಥಾಪಕ ನಿತ್ಯಾನಂದ ಭಕ್ತ, ಡೈರಿ ವ್ಯವಸ್ಥಾಪಕ ಶಿವಶಂಕರ ಸ್ವಾಮಿ, ಮಾರುಕಟ್ಟೆಯ ಪ್ರಭಾರ ವ್ಯವಸ್ಥಾಪಕ ಜಯದೇವ್, ಉಪವ್ಯವಸ್ಥಾಪಕ ಲಕ್ಕಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.
ಉದ್ಘಾಟನೆಗೆ ಮುಖ್ಯಮಂತ್ರಿ
ಡೈರಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸುವರು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಸಚಿವರಾದ ಎಚ್.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪುರ, ವೆಂಕಟರಾವ್ ನಾಡ ಗೌಡ, ಡಾ| ಜಯಮಾಲಾ, ಯು.ಟಿ. ಖಾದರ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು ವಿವಿಧ ಘಟಕಗಳನ್ನು ಉದ್ಘಾಟಿಸುವರು. ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ರವಿರಾಜ ಹೆಗ್ಡೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು