ಕಾರ್ಮಿಕರ ಕಲ್ಯಾಣಕ್ಕೆ ಇನ್ನೂ ಬಂದಿಲ್ಲ ಪ್ರೋತ್ಸಾಹಧನ!

ದ.ಕ. ಜಿಲ್ಲೆಯ 134 ಜನರಿಗೆ 2 ವರ್ಷಗಳಿಂದ ಬಾಕಿ ಉಡುಪಿ ಜಿಲ್ಲೆಯಲ್ಲಿ ಮಾರ್ಚ್‌ನಿಂದ ಸ್ಥಗಿತ

Team Udayavani, Dec 6, 2021, 6:10 AM IST

ಕಾರ್ಮಿಕರ ಕಲ್ಯಾಣಕ್ಕೆ ಇನ್ನೂ ಬಂದಿಲ್ಲ ಪ್ರೋತ್ಸಾಹಧನ!

ಕುಂದಾಪುರ: ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ವಿವಾಹಕ್ಕೆ ದೊರೆಯುವ ಪ್ರೋತ್ಸಾಹಧನ ಮದುವೆಯಾಗಿ ಮಗುವಾದರೂ ಬಂದಿಲ್ಲ ಎಂದು ಕಾರ್ಮಿಕರು ಕೊರಗುತ್ತಿದ್ದಾರೆ.

2019ರಲ್ಲಿ ಅರ್ಜಿ ಸಲ್ಲಿಸಿದ ದಕ್ಷಿಣ ಕನ್ನಡ ಜಿಲ್ಲೆಯ 134 ಜನರಿಗೆ ಮತ್ತು ಈ ಮಾರ್ಚ್‌ ಬಳಿಕ ಉಡುಪಿ ಜಿಲ್ಲೆಯವರಿಗೆ ಹಣ ಬಂದಿಲ್ಲ.

ನೋಂದಾಯಿತ ಕಟ್ಟಡ ಕಾರ್ಮಿಕ ಅಥವಾ ಕಾರ್ಮಿಕನ ಅವಲಂಬಿತ ಮಕ್ಕಳ ವಿವಾಹಕ್ಕಾಗಿ 50 ಸಾವಿರ ರೂ. ನೀಡಲಾಗುತ್ತದೆ. ಇದೇ ಜುಲೈಯಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ.

ಅರ್ಜಿ ಕ್ರಮ ಬದಲು
ಮೊದಲು ಲಿಖಿತ ಅರ್ಜಿ ಸಲ್ಲಿಸಬೇಕಿತ್ತು. 2019ರ ಬಳಿಕ ಸೇವಾಸಿಂಧು ಪೋರ್ಟಲ್‌ನಲ್ಲಿ ಡಿಜಿಟಲ್‌ ಅರ್ಜಿ. ಆಧಾರ್‌-ಮೊಬೈಲ್‌ ನಂಬರ್‌ ಜೋಡಿಸಿರಬೇಕು. ಮಂಡಳಿಯ ನೋಂದಣಿ ಊರ್ಜಿತ ಸ್ಥಿತಿಯಲ್ಲಿರಬೇಕು. ಕಾರ್ಡ್‌ ಮಾಡಿಸಿ ಒಂದು ವರ್ಷವಾಗಿರಬೇಕು. ವಿವಾಹವಾಗಿ 6 ತಿಂಗಳ ಒಳಗೆ ಅರ್ಜಿ ಹಾಕಬೇಕು. ಅದಾದ 2 ತಿಂಗಳ ಒಳಗೆ ಕಾರ್ಮಿಕ ನಿರೀಕ್ಷಕರು ದೃಢೀಕರಿಸಬೇಕು. ಬಳಿಕ ಮಂಡಳಿಯಿಂದ ನೇರ ನಗದು (ಪ್ರತಿಫ‌ಲ) ವರ್ಗಾವಣೆ (ಡಿಬಿಟಿ) ನಿಯಮದಡಿ ಫ‌ಲಾನುಭವಿಯ ಖಾತೆಗೆ ಹಣ ಜಮೆಯಾಗುತ್ತದೆ.

ನಿಯಮ ಬದಲು
ಒಬ್ಬರಿಗೇ ದೊರೆಯುತ್ತಿದ್ದ ಮೊತ್ತವನ್ನು 2021ರ ಮಾರ್ಚ್‌ನಿಂದ ಪತಿ-ಪತ್ನಿಗೆ ವಿಂಗಡಿಸಿ ನೀಡಲಾಗುತ್ತಿದೆ. 25 ಸಾವಿರ ರೂ.ಗಳ ಬಾಂಡ್‌ ಹಾಗೂ 25 ಸಾವಿರ ರೂ.ಗಳ ನಗದು. ಬಾಂಡ್‌ 3 ವರ್ಷಗಳ ಅನಂತರ ಬಡ್ಡಿ ಸಹಿತ ದೊರೆಯುತ್ತದೆ. ಡಿಬಿಟಿ ಆ್ಯಪ್‌ ಮೂಲಕ ಯಾರೇ ಫ‌ಲಾನುಭವಿ ಹಣ ಜಮೆಯಾದ ವಿವರ ಮೊಬೈಲ್‌ನಲ್ಲೇ ತಿಳಿಯುವಷ್ಟು ಪಾರದರ್ಶಕ ವ್ಯವಸ್ಥೆಯಿದೆ.

ಇದನ್ನೂ ಓದಿ:ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ತಿರಸ್ಕೃತ
ಡಿಜಿಟಲ್‌ ಅರ್ಜಿ ಬಳಿಕ ಅನೇಕರಿಗೆ ಸಹಾಯಧನ ಪಡೆಯುವಲ್ಲಿ ತೊಂದರೆಯಾಗಿದೆ. ಆಧಾರ್‌ಗೆ ಅನೇಕರು ಮೊಬೈಲ್‌ ನಂಬರ್‌ ಜೋಡಿಸಿರಲಿಲ್ಲ. ತರಾತುರಿಯಲ್ಲಿ ಜೋಡಿಸಲು ಹೋದಾಗ ಆಧಾರ್‌ ವ್ಯವಸ್ಥೆ ಸರಿ ಇರಲಿಲ್ಲ. ಮೈಲುದ್ದ ಸರದಿ ಸಾಲು, ಸರ್ವರ್‌ ಸಮಸ್ಯೆ ಎಂದು ವಿಳಂಬವಾಗಿತ್ತು. ಅನಂತರ 3 ತಿಂಗಳ ಕಾಲ ವೆಬ್‌ಸೈಟನ್ನೇ ಸ್ಥಗಿತಗೊಳಿಸಲಾಗಿತ್ತು. ಎಲ್ಲ ಸರಿಯಾಯಿತು ಎನ್ನುವಾಗ 2020ರಲ್ಲಿ ಲಾಕ್‌ಡೌನ್‌ ಆರಂಭವಾಯಿತು. ಮೇ ತಿಂಗಳಲ್ಲಿ ನಿಯಮಗಳು ಸಡಿಲವಾದ ಬಳಿಕ ಅರ್ಜಿ ಸಲ್ಲಿಸಲಾಯಿತು. ವಿವಾಹದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕೆಂದಿದ್ದ ಕಾರಣ ಅದೇನೂ ಸಮಸ್ಯೆ ಆಗಲಿಲ್ಲ. ಆದರೆ ವಿವಾಹದ ಸಂದರ್ಭದಲ್ಲಿ ಅನೇಕರ ನೋಂದಣಿಯ ಅವಧಿ ಮರುನವೀಕರಣ ಆಗಿರಲಿಲ್ಲ ಎಂಬ ಕಾರಣದಿಂದ ಸಹಾಯಧನ ಅರ್ಜಿ ತಿರಸ್ಕೃತವಾಗಿದೆ. ಇದನ್ನು ಕೊರೊನಾ ವಿಶೇಷ ಪ್ರಕರಣ ಎಂದು ಪರಿಭಾವಿಸಿ ಅನುದಾನ ನೀಡಬೇಕೆಂಬ ಮನವಿಯೂ ಇದೆ.

ಸೇವಾಸಿಂಧು ಮೂಲಕ ಬಂದ ಎಲ್ಲ ಅರ್ಜಿಗಳನ್ನು ದೃಢೀಕರಿಸಿ ಕಲ್ಯಾಣ ಮಂಡಳಿಗೆ ಕಳುಹಿಸಲಾಗಿದೆ. ಫೆಬ್ರವರಿ ವರೆಗೆ ಜಮೆಯಾಗಿದೆ.
ಕುಮಾರ್‌ ಬಿ.ಆರ್‌., ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ

ಎಲ್ಲ ದಾಖಲೆಗಳು ಸರಿಯಿದ್ದರೂ ಹಣ ಬಂದಿಲ್ಲ ಎಂಬ ದೂರುಗಳನ್ನು ಮಂಡಳಿಯ ಗಮನಕ್ಕೆ ತರಲಾಗಿದೆ. 2019ರ 134 ಪ್ರಕರಣ ಹೊರತುಪಡಿಸಿದರೆ ಇತರ ಪ್ರಕರಣಗಳಲ್ಲಿ ಪಾವತಿಗೆ ಬಾಕಿ ಇಲ್ಲ.
– ಕಾವೇರಿ, ದ.ಕ. ಜಿಲ್ಲಾ ಕಾರ್ಮಿಕ ಅಧಿಕಾರಿ

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.