ನಿರಂತರ ಮಳೆ, ಹವಾಮಾನ ವೈಪರೀತ್ಯ: ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಾಧೆ


Team Udayavani, Jul 4, 2022, 6:35 AM IST

ನಿರಂತರ ಮಳೆ, ಹವಾಮಾನ ವೈಪರೀತ್ಯ: ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಾಧೆ

ಉಡುಪಿ: ಕೋವಿಡ್‌ ಆತಂಕದ ನಡುವೆ ಕರಾವಳಿ ಜಿಲ್ಲೆಗಳ ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಳವಾಗುತ್ತಿದೆ.

ಮಕ್ಕಳಿಗೆ ಶಾಲಾರಂಭ ಆದಾಗಿ ನಿಂದ ಹಲವಾರು ಮಂದಿ ಮಕ್ಕಳು ಒಂದಲ್ಲ ಒಂದು ರೀತಿಯ ಕಾಯಿಲೆ ಯಿಂದ ಬಳಲುತ್ತಿದ್ದಾರೆ. ನಗರ, ಪಟ್ಟಣ, ಗ್ರಾಮೀಣ ಪ್ರದೇಶವೆಂಬ ಭೇದವಿಲ್ಲದೆ ಎಲ್ಲೆಡೆ ಮಕ್ಕಳಲ್ಲಿ ತೀವ್ರ ಜ್ವರ, ಡೆಂಗ್ಯೂ, ನ್ಯುಮೋ ನಿಯಾ, ಕೆಮ್ಮು, ನೆಗಡಿ, ಕಾಲುಬಾಯಿ ರೋಗದಂತಹ ಲಕ್ಷಣಗಳ ಜತೆಗೆ ದಿಢೀರ್‌ ಅಸ್ವಸ್ಥತೆ ಗೋಚರಿಸುತ್ತಿವೆ.

ಕೈ-ಕಾಲು ನೋವು
ಪ್ರಾರಂಭಿಕ ಹಂತದಲ್ಲಿ ಮಕ್ಕಳಿಗೆ ಕೈಕಾಲು ನೋವು ಕಾಣಿಸಿಕೊಳ್ಳುತ್ತದೆ. ಅನಂತರ ಜ್ವರ, ಶೀತ, ಕೆಮ್ಮು, ಕಫ‌ದಂತಹ ಲಕ್ಷಣಗಳು ಕಂಡುಬರು ತ್ತವೆ. ಒಂದು ಹಂತದಲ್ಲಿ ಬಹುತೇಕ ಎಲ್ಲ ಮಕ್ಕಳಿಗೂ ಈ ಕಾಯಿಲೆ ಬಂದು ಹೋಗಿದೆ. ಈ ನಡುವೆ ಮತ್ತಷ್ಟು ಮಳೆ ಸುರಿಯುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.

ಕೋವಿಡ್‌ ಭೀತಿ
ಮಕ್ಕಳಲ್ಲಿ ಕಂಡುಬರುತ್ತಿರುವ ಈ ಸಂಕ್ರಾಮಿಕ ರೋಗದಿಂದ ಕೋವಿಡ್‌ ಪ್ರಕರಣದ ಭೀತಿಯೂ ಎದುರಾಗಿದೆ. ಈಗಾಗಲೇ ಅನಾರೋಗ್ಯ ಸಮಸ್ಯೆ ಎದುರಿಸಿ ವೈದ್ಯರಲ್ಲಿಗೆ ಹೋಗುವ ಮಕ್ಕಳಿಗೆ ಕೋವಿಡ್‌ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ ಲಕ್ಷಣವಿರುವವರಿಗೆ ಕೋವಿಡ್‌ ಸರ್ವೇ ಸಾಮಾನ್ಯವಾಗಿದ್ದು, ಇದು ಕೋವಿಡ್‌ ಅಂಕಿ-ಸಂಖ್ಯೆ ಹೆಚ್ಚಳಕ್ಕೂ ಕಾರಣವಾಗಲಿದೆ.

ವಾರದೊಳಗೆ ಕಡಿಮೆ
ಇದುವರೆಗೆ ಜ್ವರ ಸಹಿತ ಇತರ ರೋಗಲಕ್ಷಣ ಕಂಡುಬಂದ ವಿದ್ಯಾರ್ಥಿಗಳು ಔಷಧ ತೆಗೆದುಕೊಂಡ 3-4 ದಿನಗಳೊಳಗೆ ಗುಣಮುಖರಾಗಿದ್ದಾರೆ. ಆದರೆ ಮತ್ತೆ ಶಾಲೆಗಳಿಗೆ ಹೋಗುವಾಗ ಇತರರಿಗೆ ಸೋಂಕು ತಗಲಿ ಮತ್ತೆ ರೋಗ ಲಕ್ಷಣಗಳು ಹೆಚ್ಚಾಗುತ್ತಿರುವ ಘಟನೆಗಳೂ ನಡೆಯುತ್ತಿವೆ. ಹಲವು ಪ್ರಕರಣಗಳಲ್ಲಿ ಇತರ ಮಕ್ಕಳ ಮೂಲಕ ಸೋಂಕು ಹರಡಿರುವುದು ತಿಳಿದುಬಂದಿದೆ. ಈ ಕಾರಣಕ್ಕೆ ಮಕ್ಕಳು ಆದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯು ಸಲಹೆ ನೀಡಿದೆ.

ಮಾಸ್ಕ್ ಕಡ್ಡಾಯ
ಕೋವಿಡ್‌ ಮುನ್ನೆಚ್ಚರಿಕೆ ಹಾಗೂ ಸಾಂಕ್ರಾಮಿಕ ರೋಗಗಳ ಹೆಚ್ಚಳ ಭೀತಿ ಇರುವ ಕಾರಣ ಜಿಲ್ಲಾಡಳಿತ ಈಗಾಗಲೇ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಆದರೆ ಇದರ ಪಾಲನೆ ಮಾತ್ರ ಅಷ್ಟಕ್ಕಷ್ಟೇ ಆಗುತ್ತಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಹಾಕಿದರೆ ಸೋಂಕು ಪ್ರಸಾರ ತಡೆಗಟ್ಟಲು ಸಾಧ್ಯವಿದೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ಹವಾಮಾನದಲ್ಲಿ ಬದಲಾವಣೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ರೋಗ ಲಕ್ಷಣ ಕಾಣಿಸಿಕೊಂಡ ತತ್‌ಕ್ಷಣ ವೈದ್ಯರನ್ನುಭೇಟಿಯಾಗಿ ಚಿಕಿತ್ಸೆ ಪಡೆಯುವುದು ಉತ್ತಮ.
– ಡಾ| ವೇಣುಗೋಪಾಲ್‌,
ಮಕ್ಕಳ ತಜ್ಞರು, ಉಡುಪಿ

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.