ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಆತ್ಮಹತ್ಯೆ
Team Udayavani, Sep 26, 2021, 9:23 PM IST
ಬ್ರಹ್ಮಾವರ: ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ, ಸುದೀರ್ಘ ಕಾಲ ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿದ್ದ ಬೆಳ್ಮಾರು ಪಟೇಲರ ಮನೆ ಡಾ| ಎಂ.ಪಿ.ರಾಘವೇಂದ್ರ ರಾವ್ (76) ಅವರು ಸೆ.26ರಂದು ಕೊಳಲಗಿರಿಯ ಸ್ವಗೃಹದಲ್ಲಿನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ವೈದ್ಯರಾದ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪತ್ನಿ ಗೀತಾ ರಾವ್ ಒಂದು ತಿಂಗಳ ಹಿಂದೆ ನಿಧನ ಹೊಂದಿದ್ದು, ಅನಂತರ ಅವರು ಮಾನಸಿಕ ಖನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಬಳಿಕ ಮೊಕ್ತೇಸರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕುಕ್ಕೆಹಳ್ಳಿ, ಉಪ್ಪೂರು, ಕೊಳಲ ಗಿರಿಯಲ್ಲಿ (ಆಗಿನ ಸ್ಥಳೀಯಸರಕಾರಿ ಕ್ಲಿನಿಕ್ಗಳಲ್ಲಿ) ಹಾಗೂ ಪೆರ್ಡೂರು, ಮಲ್ಪೆ, ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿ, ಜಿಲ್ಲಾ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ನಿವೃತ್ತಿ ಬಳಿಕ ಕೊಳಲಗಿರಿಯಲ್ಲಿ ವೈದ್ಯಕೀಯ ಸೇವೆ ಮುಂದುವರಿಸಿದ್ದರು. ಹತ್ತಾರು ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯದ ಮಾರ್ಗದರ್ಶಕರಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳ ನೇತಾರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ