ಕಟಪಾಡಿ: ಗಮನ ಬೇರಡೆ ಸೆಳೆದು ಸೊತ್ತು ಎಗರಿಸಿದ ಚೋರರು


Team Udayavani, Dec 10, 2021, 7:06 AM IST

ಕಟಪಾಡಿ: ಗಮನ ಬೇರಡೆ ಸೆಳೆದು ಸೊತ್ತು ಎಗರಿಸಿದ ಚೋರರು

ಕಾಪು: ಎರಡು ಪ್ರತ್ಯೇಕ ಘಟನೆಗಳಲ್ಲಿ ಗಮನ ಬೇರೆಡೆ ಸೆಳೆದು ಅಪರಿಚಿತರು ಚಿನ್ನಾಭರಣ ಮತ್ತು ಮೊಬೈಲ್‌ಅನ್ನು ಎಗರಿಸಿ ಪರಾರಿಯಾದ ಘಟನೆ ಬುಧವಾರ ಕಟಪಾಡಿಯಲ್ಲಿ ನಡೆದಿದೆ.

ಕಟಪಾಡಿ ಏಣಗುಡ್ಡೆ ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಆಗಮಿಸಿದ ಮೂವರು ನಕಲಿ ಫಕೀರರು ಮಹಿಳೆ ಮೇಲೆ ಧೂಪ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿ ಅವರಿಂದ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದರೆ, ಮತ್ತೂಂದು ಘಟನೆಯಲ್ಲಿ ಫರ್ಟಿಲೈಸರ್‌ ಅಂಗಡಿಗೆ ಭೇಟಿ ನೀಡಿದ ಅಪರಿಚಿತ ನಂಬಿಕನಂತೆ ನಟಿಸಿ, ಅಂಗಡಿ ಮಾಲಕನ ಮೊಬೈಲ್‌ ಎಗರಿಸಿ ಪರಾರಿಯಾಗಿದ್ದು, ಎರಡೂ ಘಟನೆಗಳು ಕಟಪಾಡಿ ಪರಿಸರದ ಜನರನ್ನು ದಿಗ್ಬ್ರಾಂತರನ್ನಾಗಿಸಿದೆ.

ಮೊದಲಿಗೆ ಕಟಪಾಡಿಯ ಮನೆಯೊಂದಕ್ಕೆ ತೆರಳಿದ ಮೂರು ಮಂದಿ ನಕಲಿ ಪಕೀರ ವೇಷಧಾರಿಗಳು ಮನೆಯ ಸುತ್ತಲೂ ಓಡಾಡಿ ಮನೆಮಂದಿಯನ್ನು ಹಾಡಿನ ಮೂಲಕ ಹೊರಗೆ ಬರುವಂತೆ ಮಾಡಿದ್ದು, ಹೊರಗೆ ಬಂದ ಮಹಿಳೆಯ ಮೇಲೆ ಬೂದಿ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿದ್ದರು. ಈ ಸಂದರ್ಭ ಮಹಿಳೆ ತನ್ನ ಮೈಮೇಲಿನ ಚಿನ್ನಾಭರಣ ಮತ್ತು ಮನೆಯೊಳಗಿನಿಂದ ನಗದನ್ನು ತಂದು ಕೊಟ್ಟು ಪಕೀರರ ಜೋಳಿಗೆಯನ್ನು ತುಂಬಿಸಿದ್ದರು. ಮಹಿಳೆಯಿಂದ ಚಿನ್ನಾಭರಣ ಮತ್ತು ನಗದು ಪಡೆದ ಬಳಿಕ ಪಕೀರರು ಸ್ಥಳದಿಂದ ಕಾಲ್ಕಿತ್ತಿದ್ದು, ಮಹಿಳೆ ಎಚ್ಚರಗೊಂಡಾಗ ತಾನು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ. ವೇಷಧಾರಿ ನಕಲಿ ಪಕೀರರ ಜೋಳಿಗೆಯನ್ನು ತಾನಾಗಿಯೇ ತುಂಬಿದ ಮಹಿಳೆ ತನ್ನ ಮೂಢತನದ ಬಗ್ಗೆ ತಾನೇ ಹಳಿದುಕೊಳ್ಳುವಂತಾಗಿದೆ. ಮನೆಗೆ ಬಂದ ಪಕೀರರು ಮನೆಯಂಗಳದಲ್ಲಿ ಓಡಾಡಿದ ಮತ್ತು ಪೇಟೆಯಲ್ಲಿ ನಡೆದಾಡಿದ ಫ‌ುಟೇಜ್‌ಗಳು ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಕ್ಲಿಪ್‌ಗಳು ಎಲ್ಲೆಡೆ ವೈರಲ್‌ ಆಗಿದೆ.

ನಂಬಿಕಸ್ಥನಂತೆ ವ್ಯವಹಾರ:

ಮತ್ತೂಂದು ಘಟನೆಯಲ್ಲಿ ಆದಿ ಶಕ್ತಿ ಫರ್ಟಿಲೈಸರ್‌ ಅಂಗಡಿಗೆ ಬಂದ ವ್ಯಕ್ತಿಯೋರ್ವ ಮಾಲಕರ ಜೊತೆಗೆ ನಂಬಿಕಸ್ಥನಂತೆ ನಟಿಸಿ, ಅಂಗಡಿಯಲ್ಲಿ 1,000 ರೂ.ಗೂ ಮಿಕ್ಕಿದ ವ್ಯಾಪಾರ ನಡೆಸಿದ್ದ. ಅನಂತರ ಮಳಿಗೆಯ ಮಾಲಕರ ಜತೆಗೆ ಪರಿಚಿತನಂತೆ ನಟಿಸಿ ನಂಬಿಕೆ ಬರಿಸಿದ್ದು, ತನ್ನ ವಾಟ್ಸ್‌ ಆ್ಯಪ್‌ ನಂಬರ್‌ ಅಪ್‌ಡೇಟ್‌ ಆಗಿದೆ. ಮೆಡಿಕಲ್‌ನಿಂದ ಬೇರೊಂದು ಮದ್ದು ತರಲು ಇದೆ. ನಿಮ್ಮ ವಾಟ್ಸ್‌ ಆ್ಯಪ್‌ ನಂಬರ್‌ಗೆ ಅದರ ಸ್ಲಿಪ್‌ ಕಳುಹಿಸಲು ಕಳುಹಿಸಲು ತಿಳಿಸುತ್ತೇನೆ ಎಂದು ಹೇಳಿದ್ದನು. ಇದನ್ನು ಸತ್ಯವೆಂದೇ ನಂಬಿದ ಅಂಗಡಿಯ ಮಾಲಕ ಉದಯ ಶೆಟ್ಟಿ ತನ್ನ ವಾಟ್ಸ್‌ ಆ್ಯಪ್‌  ನಂಬರ್‌ಅನ್ನು ಆತನಿಗೆ ನೀಡಿದ್ದು, ಆತ ಅದಕ್ಕೆ ಔಷಧದ ಚೀಟಿಯನ್ನೂ ತರಿಸಿಕೊಂಡಿದ್ದ. ಬಳಿಕ ಅಂಗಡಿ ಮಾಲಕರಿಂದ ಮೊಬೈಲ್‌ ಪಡೆದು ಮೆಡಿಕಲ್‌ಗೆ ಹೋದ ವ್ಯಕ್ತಿ ದಿಢೀರ್‌ ಕಣ್ಮರೆಯಾಗಿದ್ದು, ಆಗಷ್ಟೇ ತಾನು ಮೋಸ ಹೋಗಿರುವ ವಿಚಾರ ಅಂಗಡಿಯ ಮಾಲಕರಿಗೆ ತಿಳಿದುಬಂದಿದೆ. ಅವರು ಎಚ್ಚೆತ್ತುಕೊಳ್ಳುವಷ್ಟರಲ್ಲೇ 18 ಸಾವಿರ ರೂ. ಮೌಲ್ಯದ ಮೊಬೈಲ್‌ ಅನ್ನು ಪಡೆದುಕೊಂಡಿದ್ದ ಆತ ಪರಾರಿಯಾಗಿದ್ದ.

ಎರಡೂ ಘಟನೆಗಳು ಒಂದೇ ದಿನ, ಒಂದೇ ಸಮಯದಲ್ಲಿ ಕಟಪಾಡಿಯಲ್ಲಿ ನಡೆದಿದ್ದು ಚಿನ್ನಾಭರಣ, ನಗದು ಮತ್ತು ಮೊಬೈಲ್‌ ದೋಚಿ ಪರಾರಿಯಾದವರಿಗಾಗಿ ಸ್ಥಳೀಯರು ಮತ್ತು ಪೊಲೀಸರು ತೀವ್ರ ಹುಡುಕಾಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.