ಮಣಿಪಾಲ: ಮಣ್ಣಪಳ್ಳಕ್ಕೆ ಸ್ನೇಹಿತೆಯೊಟ್ಟಿಗೆ ತಿರುಗಾಡಲು ಬಂದಿದ್ದ ಯುವಕನ ಮೇಲೆ ಹಲ್ಲೆ
Team Udayavani, Dec 11, 2021, 6:44 PM IST
ಉಡುಪಿ: ಮಣಿಪಾಲದ ಮಣ್ಣಪಳ್ಳದ ಗೇಟ್ ಬಳಿ ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಈ ಬಗ್ಗೆ ಸಾಲಿಗ್ರಾಮದ ಅಲ್ತಾಫ್ (27) ಎಂಬವರು ಪ್ರಾಣೇಶ್, ವಿನೂತ್ ಪೂಜಾರಿ, ಸಂಜಯ ಕುಮಾರ್ ಎಂಬ ಮೂವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಅಲ್ತಾಫ್ ಅವರು ಮಧ್ಯಾಹ್ನದ ವೇಳೆಗೆ ನೆರೆಮನೆಯ ಸ್ನೇಹಿತೆಯೊಂದಿಗೆ ತಿರುಗಾಡಲು ಮಣಿಪಾಲದ ಮಣ್ಣಪಳ್ಳದ ಗೇಟ್ ಬಳಿ ಹೋಗಿದ್ದರು.
ಈ ವೇಳೆ ಆರೋಪಿಗಳಾದ ಪ್ರಾಣೇಶ್, ವಿನೂತ್ ಪೂಜಾರಿ ಮತ್ತು ಸಂಜಯ್ ಕುಮಾರ್ ಇವರಿಬ್ಬರನ್ನು ತಡೆದು ಅಲ್ತಾಫ್ ರನ್ನು ತಳ್ಳಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.