ಎರ್ಮಾಳಿನಲ್ಲಿ ತೆನೆ ತರಲು ಗದ್ದೆಗೆ ತೆರಳಿದ್ದ ವ್ಯಕ್ತಿಗೆ ವಿಷದ ಹಾವು ಕಡಿದು ಸಾವು
Team Udayavani, Oct 7, 2021, 10:20 PM IST
ಪಡುಬಿದ್ರಿ : ಮನೆಯಲ್ಲಿ ನಡೆಯಲಿದ್ದ ತೆನೆ ಹಬ್ಬಕ್ಕಾಗಿ ಗದ್ದೆಗೆ ತೆನೆ ತರಲು ಹೋಗಿದ್ದ ವ್ಯಕ್ತಿಗೆ ವಿಷ ಜಂತು ಕಡಿದು ಸಾವನ್ನಪ್ಪಿದ ಘಟನೆ ಎರ್ಮಾಳು ನಟ್ಟಿ ಮನೆ ಎಂಬಲ್ಲಿ ಗುರುವಾರ ನಡೆದಿದೆ.
ಎರ್ಮಾಳು ಮಲ್ಲಕ್ಕ ನಟ್ಟಿ ಮನೆ ನಿವಾಸಿ 44 ವರ್ಷದ ಚಂದ್ರಶೇಖರ ಪೂಜಾರಿ ಮೃತಪಟ್ಟ ದುರ್ದೈವಿ.
ಗುರುವಾರ ನಡೆಯಲಿದ್ದ ತೆನೆ ಹಬ್ಬಕ್ಕೆ ತಮ್ಮದೇ ಕೃಷಿ ಗದ್ದೆಗೆ ತೆನೆ ತರಲು ಬುಧವಾರ ರಾತ್ರಿ ಹೋಗಿದ್ದು, ಈ ವೇಳೆ ಅವರ ಕಾಲಿಗೆ ಏನೋ ಕಡಿದ ಅನುಭವವಾಗಿದ್ದು, ಮನೆಗೆ ಬಂದ ಅವರು ಪತ್ನಿ ಉಷಾ ಅವರಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ತರಚಿದಂತಿದ್ದ ಗಾಯಕ್ಕೆ ಮನೆ ಮದ್ದು ಲೇಪಿಸಿ ಮಲಗಿದ್ದರು.
ಇದನ್ನೂ ಓದಿ:ದೇವರ ಮೊರೆಹೋದ ಶರಾವತಿ ಸಂತ್ರಸ್ತರು; ಕಲ್ಲುಕೊಪ್ಪದಿಂದ ಧರ್ಮಸ್ಥಳದವರೆಗೆ ಪಾದಯಾತ್ರೆ !
ಗುರುವಾರ ಮುಂಜಾನೆ ತೆನೆ ಹಬ್ಬದ ಬಹುತೇಕ ಕೆಲಸವನ್ನು ಮುಗಿಸಿದ ಚಂದ್ರಶೇಖರ ಅವರಿಗೆ ಇದ್ದಕ್ಕಿದಂತೆ ಉಸಿರು ಕಟ್ಟಿದಂತ್ತಾಗಿದ್ದು, ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಮೃತ ಪಟ್ಟಿದ್ದಾರೆ.
ಮೃತರು ಎಲೆಕ್ಟ್ರಿಕ್ ವೃತ್ತಿ ನಡೆಸುತ್ತಿದ್ದು, ಇವರ ದುಡಿಮೆಯಿಂದಲೇ ಕುಟುಂಬದ ಜೀವನ ರಥ ಸಾಗುತ್ತಿತ್ತು. ಇದೀಗ ಮನೆ ಯಜಮಾನನ ಅನಿರಿಕ್ಷಿತ ಸಾವಿನಿಂದಾಗಿ ಕುಟುಂಬ ಬಡವಾಗಿದೆ.
ಪತ್ನಿ ಉಷಾ ಅವರು ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ