ಪಠ್ಯಗಳಲ್ಲಿ ಭಗವದ್ಗೀತೆ ಸೇರ್ಪಡೆ ಅಗತ್ಯ: ಗುರುವಂದನೆ ಸ್ವೀಕರಿಸಿ ಅದಮಾರು ಹಿರಿಯ ಶ್ರೀ


Team Udayavani, Jul 12, 2022, 6:35 AM IST

ಪಠ್ಯಗಳಲ್ಲಿ ಭಗವದ್ಗೀತೆ ಸೇರ್ಪಡೆ ಅಗತ್ಯ: ಗುರುವಂದನೆ ಸ್ವೀಕರಿಸಿ ಅದಮಾರು ಹಿರಿಯ ಶ್ರೀ

ಉಡುಪಿ: ಜೀವನದಲ್ಲಿ ಸಾಧನೆಯ ಹಾದಿಗೆ ಸ್ಫೂರ್ತಿಯಾಗಿರುವ ಭಗವದ್ಗೀತೆಯನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಗೊಳಿಸುವ ಅಗತ್ಯವಿದೆ. ಕನಿಷ್ಠ ದಿನಕ್ಕೆ 5 ಶ್ಲೋಕಗಳನ್ನಾದರೂ ಮನೆಯಲ್ಲಿ ಎಲ್ಲರೂ ಪಠನ ಮಾಡಬೇಕು ಎಂದು ಅದಮಾರು ಹಿರಿಯ ಯತಿ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿ ಹೇಳಿದರು.

ಸೋಮವಾರ ಪೂರ್ಣಪ್ರಜ್ಞ ಆಡಿಟೋರಿ ಯಂನಲ್ಲಿ ನಡೆದ ಶ್ರೀಗಳ ಸನ್ಯಾಸದೀಕ್ಷಾ ಸುವರ್ಣ ಮಹೋತ್ಸವದಲ್ಲಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು.

ಭಗವದ್ಗೀತೆ ಪಠ್ಯಕ್ಕೆ ಸೇರಿಸಿದರೆ ಎಲ್ಲಿ ಕೇಸರೀಕರಣವಾಗುತ್ತದೆಯೋ ಎಂಬ ಭಯ ಕೆಲವರಿಗಿದೆ. ನಮ್ಮ ರಾಷ್ಟ್ರಧ್ವಜದ ಮೇಲಿರುವ ಮೊದಲ ಬಣ್ಣವೇ ಕೇಸರಿ. ಇದು ತ್ಯಾಗದ ಸಂಕೇತವಾಗಿದೆ. ಆದರೆ ನಮ್ಮ ಜನರು ತ್ಯಾಗಕ್ಕೆ ಸಿದ್ಧರಿಲ್ಲ. ಭೋಗಕ್ಕೆ ಸಿದ್ಧರಿದ್ದಾರೆ. ದೇವರು, ದೇಶದ ಮೇಲೆ ನಿಷ್ಠೆ ಇಲ್ಲದವರಿಗೆ ಕೆಂಪು (ಡೇಂಜರ್‌) ಬಣ್ಣವೇ ಸೂಕ್ತ ಎಂದರು.

ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ
ಓಂಪ್ರಕಾಶ ಭಟ್‌ ಮತ್ತು ದೇವಿದಾಸ್‌ ಸಂಪಾದಕತ್ವದಲ್ಲಿ ಹೊರತಂದಿರುವ “ಕೃಷ್ಣಪ್ರಿಯ- ವಿಶ್ವಪ್ರಿಯ’ ಕೃತಿ ಮತ್ತು 2020-22ರ ಅದಮಾರು ಪರ್ಯಾಯದ ಸ್ಮರಣ ಸಂಚಿಕೆ “ವಿಶ್ವಪ್ರಿಯ-ಈಶಪ್ರಿಯ’ ಕೃತಿಯನ್ನು ಉಭಯ ಶ್ರೀಗಳು ಬಿಡುಗಡೆ ಮಾಡಿದರು. ಯಕ್ಷಗಾನ ಕಲಾವಿದ ಪೆರುವೋಡಿ ನಾರಾಯಣ ಭಟ್ಟ ಮುತ್ತೂರು ಅವರಿಗೆ 50 ಸಾವಿರ ರೂ. ನಗದು ಪುರಸ್ಕಾರ ಸಹಿತ “ಶ್ರೀ ನರ‌ಹರಿತೀರ್ಥ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ವಿದ್ವಾನ್‌ ಶ್ರೀನಿವಾಸ ಆಚಾರ್ಯ ಕರ್ನೂಲು ಅಭಿವಂದನ ಭಾಷಣ ಮಾಡಿದರು. ಪಾಂಡಿಚೇರಿಯ ಋಷಿ ಧರ್ಮ ಫೌಂಡೇಶನ್‌ ಅಧ್ಯಕ್ಷ ಡಿ.ಎ. ಜೋಸೆಫ್, ಶಾಸಕ ರಘುಪತಿ ಭಟ್‌, ಮಹಾಲಕ್ಷ್ಮೀ ಬ್ಯಾಂಕ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಶಾರದಾ ವಿದ್ಯಾಲಯದ ಸಂಚಾಲಕ ಎಂ.ಬಿ. ಪುರಾಣಿಕ್‌ ಉಪಸ್ಥಿತರಿದ್ದರು. ಶ್ರೀಕೃಷ್ಣ ಸೇವಾ ಬಳಗದ ಸಂಚಾಲಕ ಗೋವಿಂದರಾಜ್‌ ಸ್ವಾಗತಿಸಿದರು. ವಿ| ಶ್ರೀನಿವಾಸ ಪೆಜತ್ತಾಯ ಪ್ರಸ್ತಾವನೆ ಗೈದರು. ಗಣೇಶ್‌ ಹೆಬ್ಟಾರ್‌ ವಂದಿಸಿ, ಡಾ| ಟಿ.ಎಸ್‌. ರಮೇಶ್‌ ನಿರೂಪಿಸಿದರು.

ರಾಷ್ಟ್ರ ಭಕ್ತಿ ಜಾಗೃತವಾಗಲಿ
ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಮಾತನಾಡಿ, ಜ್ಞಾನ ಸಂಪಾದನೆಗೆ ದೇವರು ಮಾನವ ಶರೀರ ನೀಡಿದ್ದಾನೆ. ಈ ವಿಚಾರವನ್ನು ತಿಳಿದವರು ಸಾಧಕರಾಗುತ್ತಾರೆ. ದೇಹವನ್ನು ಜ್ಞಾನಕ್ಕಾಗಿ ಮೀಸಲಿಡಬೇಕು. ಇದಕ್ಕೆ ಗುರುಗಳ ಕೃಪೆ ಅಗತ್ಯ. ಯಾವುದೇ ದೇಶದಲ್ಲಿ ಸಾಧನೆಗೆ ಪೂರಕ ವಾತಾ ವರಣವಿರಬೇಕು. ಸಮಾನ ಚಿಂತನೆಗಳನ್ನು ಹೊಂದಿರುವ ವರ್ಗ ಬೇಕು. ಇದಕ್ಕಾಗಿ ಎಲ್ಲರಲ್ಲೂ ರಾಷ್ಟ್ರ ಭಕ್ತಿ ಜಾಗೃತವಾಗಬೇಕು ಎಂದರು.

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.