ಯಡ್ತರೆ, ಪಡುವರಿ ಗ್ರಾಮಗಳಲ್ಲಿ ಈ ವರ್ಷವೂ ತಪ್ಪದ ನೀರಿನ ಗೋಳು

ಸಾಕಾರಗೊಳ್ಳದ ಬಹುಗ್ರಾಮ ಯೋಜನೆ

Team Udayavani, Mar 17, 2020, 5:27 AM IST

ಯಡ್ತರೆ, ಪಡುವರಿ ಗ್ರಾಮಗಳಲ್ಲಿ ಈ ವರ್ಷವೂ ತಪ್ಪದ ನೀರಿನ ಗೋಳು

ಬೈಂದೂರು ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳ ಲು ಟೆಂಡರ್‌ ಬಾಕಿ, ತಾಂತ್ರಿಕ ಕಾರಣ, ವನ್ಯಜೀವಿ, ಅರಣ್ಯ ಇಲಾಖೆಯ ಅನುಮತಿ ಸಿಗದಿದ್ದುದರಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇನ್ನೂ ಸಾಕಾರಗೊಂಡಿಲ್ಲ.

ಬೈಂದೂರು: ಬೇಸಗೆ ಆರಂಭವಾಗಿದ್ದು ಇದರ ಬೆನ್ನಲ್ಲೇ ಬೈಂದೂರು ತಾಲೂಕಿನ ಯಡ್ತರೆ, ಪಡುವರಿ ಗ್ರಾಮಗಳಲ್ಲಿ ಈ ವರ್ಷವೂ ನೀರಿನ ಗೋಳು ಮುಂದುವರಿದಿದೆ.

ಸಾಕಾರಗೊಳ್ಳದ ಯೋಜನೆ
ಕಳೆದ ಎರಡು ದಶಕಗಳಿಂದ ಬೈಂದೂರು ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎನ್ನುವ ಕೂಗು ಅರಣ್ಯ ರೋದನವಾಗಿದೆ. ಶಿರೂರು, ಬೈಂದೂರು, ಯಡ್ತರೆ, ಪಡುವರಿ, ತಗ್ಗರ್ಸೆ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಿಸುವ ಉದ್ದೇಶದಿಂದ ಕೊಸಳ್ಳಿ ಜಲಪಾತದಿಂದ ನೀರನ್ನು ತರುವ ಬಹುಗ್ರಾಮ ಯೋಜನೆ ಗಗನಕುಸುಮವಾಗಿಯೇ ಟೆಂಡರ್‌ ಬಾಕಿ ಇದೆ ಎನ್ನುವ ಉತ್ತರ ಬಂದರೂ ತಾಂತ್ರಿಕ ಕಾರಣ, ವನ್ಯಜೀವಿ, ಅರಣ್ಯ ಇಲಾಖೆಯ ಅನುಮತಿ ಸಿಗದಿದ್ದರಿಂದ ಇನ್ನೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಾಕಾರಗೊಂಡಿಲ್ಲ. ಸುಮನಾವತಿ ನದಿಗೆ ಸುಬ್ಬರಡಿಯಲ್ಲಿ ಸೇತುವೆ ನಿರ್ಮಿಸಿದ ಬಳಿಕ ನೀರು ದೊರೆಯುವ ನಿರೀಕ್ಷೆ ಇದೆ. ಇದರೊಂದಿಗೆ ಹಾಲಿ ಶಾಸಕರು ವಾರಾಹಿ ನೀರನ್ನು ಬೈಂದೂರಿಗೆ ತರುವ ಬಗ್ಗೆ ಚಿಂತನೆ ನಡೆಸಿದ್ದು ಇವೆರಡೂ ಯೋಜನೆಗಳು ನಿರೀಕ್ಷೆಯನ್ನು ಇನ್ನೂ ಹಸಿರಾಗಿರಿಸಿವೆ.

ಪಡುವರಿಯಲ್ಲಿ ಕಳೆದ ವರ್ಷದ ನೀರಿನ ಬಿಲ್‌ ಬಾಕಿ
ಪಡುವರಿ ಗ್ರಾಮ ಪಂಚಾಯತ್‌ನಲ್ಲಿ ಟ್ಯಾಂಕರ್‌ ನೀರು ಪೂರೈಕೆಗೆ ಕಳೆದ ವರ್ಷ 11 ಲ.ರೂ. ವೆಚ್ಚವಾಗಿದೆ. 4 ಲಕ್ಷ ರೂ. ನೀರಿನ ಬಿಲ್‌ ಜಿಲ್ಲಾಡಳಿತ ಕೊಡಲು ಬಾಕಿಯಿದ್ದು ನೀರು ಸರಬರಾಜು ಮಾಡುವವರು ಪಂಚಾಯತ್‌ ಅಧ್ಯಕ್ಷರ ಮನೆ ಎದುರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಹೀಗಾಗಿ ನೀರು ಕೊಟ್ಟು ಅಡಕತ್ತರಿ ಯಲ್ಲಿ ಸಿಕ್ಕಿದ ಪರಿಸ್ಥಿತಿ ಉಂಟಾಗಿದೆ. ಒಟ್ಟು 23 ಗ್ರಾಮ ಪಂಚಾಯತ್‌ಗಳಿಗೆ ಇದೇ ರೀತಿ ನೀರಿನ ಬಿಲ್‌ ಕೊಡಲು ಬಾಕಿ ಇದೆ.

ಬೈಂದೂರಿನಲ್ಲಿ ನಡೆದ ಸಂಸದರ ಜನಸಂಪರ್ಕ ಸಭೆಯಲ್ಲಿ ಕೂಡ ಈ ವಿಷಯ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿದ್ದು ಇದುವರೆಗೂ ಹಣ ಪಾವತಿಯಾಗಿಲ್ಲ.ಪಡುವರಿ ಗ್ರಾಮದ ತಾರಾಪತಿ,ಚರ್ಚ್‌ ರೋಡ್‌,ದೊಂಬೆ,ಕರಾವಳಿ ಮುಂತಾದ ಕಡೆ ಪ್ರತಿವರ್ಷ ನೀರಿನ ಸಮಸ್ಯೆ ಇದೆ.

ಕಳೆದ ಬೇಸಗೆಯಲ್ಲಿ ತೀವ್ರವಾಗಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ “ಉದಯವಾಣಿ’ಯು ಭೇಟಿ ಕೊಟ್ಟು, “ಜೀವಜಲ’ ಎನ್ನುವ ಸರಣಿಯಡಿ ಸಾಕ್ಷಾತ್‌ ವರದಿಗಳನ್ನು ಪ್ರಕಟಿಸಿತ್ತು. ಈ ಬಾರಿಯ ಬೇಸಗೆಯಲ್ಲಿ ನೀರಿನ ಸಮಸ್ಯೆಯ ನಿವಾರಣೆಗೆ ಸ್ಥಳೀಯ ಪಂಚಾಯತ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಮುಂದೆ ಆಗಬೇಕಾದ ಪ್ರಮುಖ ಕ್ರಮಗಳೆಲ್ಲದರ ಕುರಿತಾದ ಸರಣಿ ಇದು.

ಯಡ್ತರೆಯಲ್ಲಿ ತಪ್ಪದ ನೀರಿನ ಸಮಸ್ಯೆ
ಯಡ್ತರೆ ಗ್ರಾ.ಪಂ. ವ್ಯಾಪ್ತಿಯ ಗರ್ಜಿನಹಿತ್ಲು, ಹೊಳ್ಳರಹಿತ್ಲು, ಯಡ್ತರೆ, ಯೋಜನಾ ನಗರ, ಆಲಂದೂರು, ಕಲ್ಲಣಿR ಮುಂತಾದ ಕಡೆ ಪ್ರತೀ ವರ್ಷ ನೀರಿನ ಸಮಸ್ಯೆ ಕಾಡುತ್ತಿದೆ. ಕಳೆದ ವರ್ಷ ಜಿ.ಪಂ.ಹತ್ತು ಲಕ್ಷ ಅನುದಾನ ನೀಡಿದೆ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ವರ್ಷ ಮಾರ್ಚ್‌ ತಿಂಗಳಿಂದ ನೀರಿನ ಬೇಡಿಕೆ ಆರಂಭವಾಗಿದ್ದು ಕಂದಾಯ ಇಲಾಖೆ ಇದರ ಜವಾಬ್ದಾರಿ ಹೊತ್ತಿದೆ.ಯಡ್ತರೆ ಗ್ರಾಮದಲ್ಲಿ ಒಟ್ಟು 3 ಬಾವಿಗಳು ಹಾಗೂ 5 ಬೋರ್‌ವೆಲ್‌ಗ‌ಳಿವೆ.

ನೀರಿನ ಮೂಲ ಇಲ್ಲದೆ ಸಮಸ್ಯೆ
ಯಡ್ತರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ವರ್ಷ ಯಶಸ್ವಿಯಾಗಿ ನೀರು ಪೂರೈಸಲಾಗಿದೆ. ನೀರಿನ ಮೂಲ ಇಲ್ಲದಿರುವುದರಿಂದ ಹೆಚ್ಚಿನ ಸಮಸ್ಯೆ ಇಲ್ಲಿ ಉಂಟಾಗುತ್ತದೆ.ಈ ವರ್ಷ ತಹಶೀಲ್ದಾರರ ನೇತ್ವದಲ್ಲಿ ನೀರು ಸರಬರಾಜು ನಡೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ಕೂಡ ನೀರಿನ ಸಮಸ್ಯೆ ಇದೆ.
– ರುಕ್ಕನ್‌ ಗೌಡ,
ಪಂಚಾಯತ್‌ ಅಭಿವೃದ್ದಿ ಅಧಿಕಾರಿ,ಯಡ್ತರೆ.

ಟೆಂಡರ್‌ದಾರರಿಗೆ ಹಣ ಪಾವತಿಸಿಲ್ಲ ಪಡುವರಿ ಗ್ರಾಮದಲ್ಲಿ ಕಳೆದ ವರ್ಷದ 4 ಲಕ್ಷ ರೂ. ಹಣ ಇದುವರೆಗೆ ಜಿಲ್ಲಾಡಳಿತ ನೀಡಿಲ್ಲ. ಟೆಂಡರ್‌ ದಾರರಿಗೆ ಸೂಕ್ತ ಸಮುದಾಯದಲ್ಲಿ ಹಣ ಪಾವತಿಸಬೇಕಾದ ಜವಾಬ್ದಾರಿ ಗ್ರಾ.ಪಂ.ಗಳದ್ದಾಗಿದೆ. ಈ ರೀತಿಯಾದರೆ ಪಂಚಾಯತ್‌ಗಳ ಅಭಿವೃದ್ದಿ ಕಷ್ಟ. ಜನಪ್ರತಿನಿಧಿ ಗಳು ಹಾಗೂ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಮತ್ತು ಈ ವರ್ಷ ಸಮರ್ಪಕವಾಗಿ ನೀರು ಪೂರೈಸಬೇಕಾಗಿದೆ.
– ಸದಾಶಿವ ಡಿ. ಪಡುವರಿ,
ಉಪಾಧ್ಯಕ್ಷರು, ಪಡುವರಿ ಗ್ರಾಮಪಂಚಾಯತ್‌

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.