ನಗರದಲ್ಲಿ ಅನಧಿಕೃತ ಪಿಜಿ ಸೆಂಟರ್‌ಗಳ ಹೆಚ್ಚಳ!

ಸ್ಥಳೀಯಾಡಳಿತದಿಂದ ಅನುಮತಿ ಪಡೆಯದೆ ಪಿಜಿ ಸೆಂಟರ್‌

Team Udayavani, Jun 13, 2019, 6:10 AM IST

Udayavani Kannada Newspaper

ಉಡುಪಿ: ಅಂತಾರಾಷ್ಟ್ರೀಯ ಶಿಕ್ಷಣ ಕೇಂದ್ರವಾಗಿ ಬೆಳೆಯುತ್ತಿರುವ ಉಡುಪಿ -ಮಣಿಪಾಲದಲ್ಲಿ ಅನಧಿಕೃತ ಪಿಜಿ ಸೆಂಟರ್‌ಗಳು ತಲೆ ಎತ್ತಿವೆ.

ಉಡುಪಿ -ಮಣಿಪಾಲಕ್ಕೆ ಹೊರ ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಿಂದ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಬಂದು ಶಿಕ್ಷಣ ಪಡೆಯುತ್ತಿದ್ದಾರೆ. ಇದನ್ನು ಬಂಡವಾಳ ವಾಗಿಸಿಕೊಂಡವರು ನೂರಾರು ಪೇಯಿಂಗ್‌ ಗೆಸ್ಟ್‌ ಸೆಂಟರ್‌ ಪ್ರಾರಂಭಿಸಿದ್ದಾರೆ. ಆದರೆ ಅವುಗಳಲ್ಲಿ ಶೇ. 95 ರಷ್ಟು ಪಿಜಿಗಳು ಅನಧಿಕೃತವಾಗಿವೆ.

ಅನುಮತಿ ಪಡೆಯದ ಪಿಜಿ
ಉಡುಪಿ ನಗರಸಭೆಯ ವ್ಯಾಪ್ತಿಯಿಂದ ಸುಮಾರು 35 ಪಿಜಿ ಮಾತ್ರ ಟ್ರೇಡ್‌ ಲೈಸೆನ್ಸ್‌ ಪಡೆದುಕೊಂಡಿದೆ. ಮನೆಗಳಲ್ಲಿ ಪಿಜಿ ಸೆಂಟರ್‌ ನಡೆಸಲು ಅವಕಾಶವಿಲ್ಲ. ಆದರೆ ಹೆಚ್ಚಿನ ಹಣದಾಸೆಯಿಂದ ಮಣಿಪಾಲ- ಉಡುಪಿ ಆಸುಪಾಸಿನ ಮನೆಗಳಲ್ಲಿ ಸ್ಥಳೀಯಾಡಳಿತದಿಂದ ಅನುಮತಿ ಪಡೆಯದೆ ಪೇಯಿಂಗ್‌ ಗೆಸ್ಟ್‌ ಉದ್ಯಮ ಪ್ರಾರಂಭಿಸಿದ್ದಾರೆ.

ದಾಖಲೆ ಬೇಕಿಲ್ಲ!
ನಗರದ ಪಿಜಿಗಳಲ್ಲಿ ಸೇರ್ಪಡೆಯಾಗಬೇಕಾದರೆ ಯಾವುದೇ ದಾಖಲೆಗಳು ಬೇಕಾಗಿಲ್ಲ. ಕೊಠಡಿ ಪಡೆದುಕೊಂಡಿರುವವರು ಎಲ್ಲಿಯವರು ಎನ್ನುವ ದಾಖಲೆಯನ್ನು ಯಾವೊಬ್ಬ ಪಿಜಿ ಮಾಲೀಕನೂ ಪಡೆದಿಲ್ಲ ಎನ್ನಲಾಗಿದೆ.
ಜತೆಗೆ ಪಿಜಿ ಕಟ್ಟಡದ ಹೊರಗಡೆ ಸಿಸಿ ಕೆಮರಾವನ್ನೂ ಅಳವಡಿಸಿಲ್ಲ.

ಪೊಲೀಸ್‌ ನಿರಾಕ್ಷೇಪಣ ಪತ್ರ ಕಡ್ಡಾಯ
ನಗರ ಸಂಸ್ಥೆಗಳು ಪಿಜಿ ಸೆಂಟರ್‌ಗಳಿಗೆ ಪರವಾನಗಿ ಕೊಡುವ ಅಧಿಕಾರ ಹೊಂದಿವೆ. ಆದರೆ ಪೊಲೀಸ್‌ ಇಲಾಖೆಯಿಂದ ನಿರಾಕ್ಷೇಪಣ ಪತ್ರವನ್ನು ತರಬೇಕು. ಈ ನಿರಾಕ್ಷೇಪಣ ಪತ್ರವೂ ಕೂಡ ಅಕ್ಕಪಕ್ಕದ ಮನೆಯವರ ಮೇಲೆ ಅವಲಂಬಿತ.

ಅಕ್ಕಪಕ್ಕದ ಮನೆಯವರು ಆಕ್ಷೇಪಣೆ ಸಲ್ಲಿಸದಿದ್ದರೆ ನಿರಾಕ್ಷೇಪಣ ಪತ್ರಕ್ಕೆ ತೊಂದರೆಯಾಗುವುದಿಲ್ಲ. ಇದುವರೆಗೆ ಉಡುಪಿಯಲ್ಲಿ ಗಂಭೀರ ಪ್ರಕರಣಗಳು ನಡೆಯದ ಕಾರಣ ಪಿಜಿ ಸೆಂಟರ್‌ಗಳ ಮೇಲೆ ನಗರಸಭೆ ಯಾಗಲೀ, ಪೊಲೀಸ್‌ ಇಲಾಖೆಯಾಗಲೀ ಕಠಿನವಾಗಿ ಕಾನೂನು ಪರಿಪಾಲನೆ ಕುರಿತು ಗಮನ ಹರಿಸಿಲ್ಲ.

ವಿಶೇಷ ತಪಾಸಣೆ
ನಗರಸಭೆಯ ವ್ಯಾಪ್ತಿ ಅನಧಿಕೃತ ಪಿಜಿ ಸೆಂಟರ್‌ಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಮುಂದಿನ ವಾರದೊಳಗೆ ಅನಧಿಕೃತ ಪಿಜಿಗಳ ಮೇಲೆ ಸ್ಪೆಶಲ್‌ ರೈಡ್‌ ಮಾಡಲಾಗುತ್ತದೆ.
– ಆನಂದ ಸಿ.ಕಲ್ಲೋಳಿಕರ್‌, ಪೌರಾಯುಕ್ತ ಉಡುಪಿ ನಗರಸಭೆ

ಕಾನೂನು ಕ್ರಮ
ಜಿಲ್ಲೆಯಲ್ಲಿ ಇರುವ ಅನಧಿಕೃತ ಪಿಜಿ ಸೆಂಟರ್‌ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
– ನಿಶಾ ಜೇಮ್ಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.