ಅಗ್ನಿಶಾಮಕ ದಳಕ್ಕೆ ಸವಾಲಾಗುತ್ತಿರುವ ಬೆಂಕಿ ಅವಘಡಗಳು

ದುರಂತಗಳಿಗೆ ಮಾನವ ಕಾರಣಗಳೇ ಹೆಚ್ಚು

Team Udayavani, May 27, 2019, 10:22 AM IST

blm1

ಬೆಳ್ಮಣ್‌: ಸುಡು ಬಿಸಿಲ ಬೇಗೆಗೆ ಕಾರ್ಕಳ ತಾಲೂಕಿನ ಗ್ರಾಮೀಣ ಭಾಗದ ಗುಡ್ಡ-ಬೆಟ್ಟಗಳಿಗೆ ಬೆಂಕಿ ತಗುಲಿ ಅಪಾರ ಸಂಖ್ಯೆ ಗಿಡ-ಮರಗಳು ಸುಟ್ಟು ಕರಕಲಾಗುತ್ತಿದ್ದು ಈ ಭಾಗದ ಜನರು ಮನೆ ಸಹಿತ ತಮ್ಮ ಸೊತ್ತುಗಳ ರಕ್ಷಣೆಗೆ ಹರಸಾಹಸಪಡಬೇಕಾಗಿದೆ.ತಾಲೂಕಿನಾದ್ಯಂತ ಆಕಸ್ಮಿಕ ಬೆಂಕಿಗೆ ನೂರಾರು ಎಕರೆ ಕೃಷಿ ಭೂಮಿ ಸಹಿತ ಖಾಸಗಿ-ಸರಕಾರಿ ಗುಡ್ಡ ಪ್ರದೇಶಗಳು ಆಹುತಿಯಾಗಿವೆ.

ಕಳೆದ ವರ್ಷಕ್ಕಿಂತ ಹೆಚ್ಚು ಅವಘಡ
ಬೆಳ್ಮಣ್‌, ಮಾಳ, ನಿಟ್ಟೆ, ಸಾಂತೂರು, ಇನ್ನಾ, ನಂದಳಿಕೆ, ಬೋಳ, ಮುಂಡ್ಕೂರು ಸೇರಿದಂತೆ ತಾಲೂಕಿನಾದ್ಯಂತ ಈ ಹಿಂದಿನ ವರ್ಷಕ್ಕಿಂತ ಈ ಬಾರಿ ಅತೀ ಹೆಚ್ಚಿನ ಬೆಂಕಿ ಅವಘಡಗಳು ನಡೆದಿವೆ.

2018ರ ಮಾರ್ಚ್‌ ಅವಧಿಯಲ್ಲಿ ಕಾರ್ಕಳ ಅಗ್ನಿಶಾಮಕ ದಳದ ಕಚೇರಿಗೆ 52 ಕರೆಗಳು ಬಂದಿದ್ದು ಈ ಬಾರಿ ಮೇ ತಿಂಗಳವರೆಗೆ ಕರೆಗಳ ಸಂಖ್ಯೆ ನೂರರ ಗಡಿ ದಾಟಿದೆ. ದಿನೇ ದಿನೆ ಬಿಸಿಲ ತಾಪಕ್ಕೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅವಘಡಗಳು ನಿರಂತರ ನಡೆಯುತ್ತಿದೆ.

ಮಾನವನೇ ಕಾರಣ!
ಇಲ್ಲಿನ ಹಲವಾರು ಅಗ್ನಿ ದುರಂತಗಳಿಗೆ ಸಾಮಾನ್ಯ ಕಾರಣ ಎಂದರೆ ಮಾನವನೇ. ವಾಹನಗಳಲ್ಲಿ ಸಂಚರಿಸುವವರು ಧೂಮಪಾನ ಮಾಡಿ ರಸ್ತೆ ಪಕ್ಕದ ಕಾಡು ಪ್ರದೇಶಗಳಲ್ಲಿ ಎಸೆಯುವುದರಿಂದ ಹುಲ್ಲಿಗೆ ಬೆಂಕಿ ತಗುಲಿ ಗಾಳಿಗೆ ಹಬ್ಬಿದೆ. ಇತ್ತೀಚೆಗೆ ಬೆಳ್ಮಣ್‌ ಭಾಗದ ಪೆರೆಲ್ಪಾದೆ ಎಂಬಲ್ಲಿ ಸಿಗರೇಟಿನಿಂದ ಹತ್ತಿದ ಬೆಂಕಿ 2 ಎಕ್ರೆಗೂ ಅ ಧಿಕ ರಬ್ಬರ್‌ ತೋಟಕ್ಕೆ ಬೆಂಕಿ ಬಿದ್ದು ಮರ ಗಿಡಗಳು ಸಂಪೂರ್ಣ ಸುಟ್ಟು ಹೋಗಿದ್ದು ಅಪಾರ ನಷ್ಟ ಸಂಭವಿಸಿದೆ.


ಬೋಳ ಪದವು ಗುಡ್ಡೆ ಎಂಬಲ್ಲಿ ಬೆಂಕಿ ಬಿದ್ದು ಇಡೀ ಗುಡ್ಡವೇ ನಾಶವಾಗಿತ್ತು. ಕೆಲವೆಡೆ ಅಗ್ನಿಶಾಮಕ ಸಿಬಂದಿ ಬಂದರೂ ಹೋಗಲು ಸರಿಯಾದ ದಾರಿಯಿಲ್ಲದೆ ಹರಸಾಹಸ ಪಡಬೇಕಾಗಿತ್ತು. ಹೈಟೆನ್ಶನ್‌ ವಿದ್ಯುತ್‌ ತಂತಿಗಳಿರುವಲ್ಲಿ, ಮರದ ಕೊಂಬೆಗಳು ತಾಗಿಯೂ ಕೆಲವೆಡೆ ಅಗ್ನಿ ಸೃಷ್ಟಿಯಾಗಿತ್ತು.

ಕಾರ್ಕಳ ಬಲು ದೂರ
ತಾಲೂಕಿನ ಯಾವುದೇ ಭಾಗದಲ್ಲಿ ಬೆಂಕಿ ಅವಘಡಗಳು ಸಂಭವಿಸಿದರೆ ಅಗ್ನಿಶಾಮಕ ದಳದವರು ಕಾರ್ಕಳದಿಂದಲೇ ಧಾವಿಸಿಬರಬೇಕು. ಅವರು ಅಲ್ಲಿಂದ ಬರುವುದರ ಒಳಗಾಗಿಯೇ ಕೆಲವೊಮ್ಮೆ ಸ್ಥಳೀಯರೇ ಬೆಂಕಿ ನಂದಿಸಿದ ಉದಾಹರಣೆಗಳೂ ಇವೆ.

ಜಾಗೃತರಾಗಬೇಕು
ಆಕಸ್ಮಿಕ ಬೆಂಕಿ ಅವಘಡ ತಪ್ಪಿಸಲು ಜನರೇ ಜಾಗೃತರಾಗಬೇಕಾಗಿದೆ. ಆಯಾ ಜಮೀನಿನವರು ಆಯಾ ಜಾಗದ ಕಳೆಗಳನ್ನು ಕಿತ್ತರೆ ಉತ್ತಮ.
-ದೀಪಕ್‌ ಕಾಮತ್‌, ಸಾಮಾಜಿಕ ಕಾರ್ಯಕರ್ತ

ಕೂಡಲೇ ಸ್ಪಂದನೆ
ಈ ಬಾರಿ ಕಾರ್ಕಳ ತಾಲೂಕಿನಲ್ಲಿ ಅತ್ಯಂತ ಹೆಚ್ಚಿನ ಬೆಂಕಿ ಅವಘಡದ ಕರೆಗಳು ಬಂದಿವೆ. ಅವುಗಳಿಗೆ ಕೂಡಲೇ ಸ್ಪಂದಿಸಿದ್ದೇವೆ.
ವಸಂತ್‌ , ಡಿ.ಎಫ್‌.ಒ. ಉಡುಪಿ

ಶರತ್‌ ಶೆಟ್ಟಿ ಬೆಳ್ಮಣ್‌

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.