ಉಡುಪಿ: 2021ರಲ್ಲಿ 89 ಘಟನೆ; ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಹೆಚ್ಚಳ


Team Udayavani, Nov 22, 2021, 1:12 PM IST

ಉಡುಪಿ: 2021ರಲ್ಲಿ 89 ಘಟನೆ; ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಹೆಚ್ಚಳ

ಉಡುಪಿ: ಲಾಕ್‌ಡೌನ್‌ ಬಳಿಕ ಜಿಲ್ಲಾ ದ್ಯಂತ ಕಳವು ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆ. 2021ರ ನ.17ರವರೆಗೆ  89 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದ್ದು, ಈ ಪೈಕಿ 40 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2,26,76,563 ರೂ. ಕಳವು ನಡೆದಿದ್ದು, 21,21,198 ರೂ.ಗಳನ್ನು ಪತ್ತೆಹಚ್ಚಲಾಗಿದೆ.

ಲಾಕ್‌ಡೌನ್‌ ಬಳಿಕ ಉದ್ಯೋಗ ಕಳೆದುಕೊಂಡ ಅನ್ಯ ಜಿಲ್ಲೆ, ರಾಜ್ಯದವರಿಂದಲೇ ಈ ಕಳ್ಳತನ ಪ್ರಕರಣಗಳು ನಡೆಯುತ್ತಿವೆ. ಹಗಲು ಹೊತ್ತಿನಲ್ಲಿ ಕಾರ್ಯತಂತ್ರ ರೂಪಿಸುವ ತಂಡ ರಾತ್ರಿ ವೇಳೆ ಕಾರ್ಯಾಚರಣೆಗೆ ಇಳಿಯುತ್ತಾರೆ. ಪೊಲೀಸರ ಚಲನವಲನಗಳನ್ನು ಮೊದಲೇ ತಿಳಿದುಕೊಂಡು ಕೃತ್ಯ ಎಸಗುತ್ತಿದ್ದಾರೆ. ಈ ವರೆಗೆ ಪತ್ತೆಯಾದ ಪ್ರಕರಣಗಳಲ್ಲಿ ಅನ್ಯಜಿಲ್ಲೆ, ರಾಜ್ಯದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

2021:

2021ರಲ್ಲಿ ಹಗಲು ಹೊತ್ತಿನಲ್ಲಿ ಮನೆಬಾಗಿಲು ಒಡೆದು 8 ಕಳ್ಳತನಗಳನ್ನು ಮಾಡಲಾಗಿದೆ. ಆ ಪೈಕಿ 1 ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ. 33,26,260 ರೂ.ಕಳವು ನಡೆದಿದ್ದು, 7 ಸಾವಿರ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ ವೇಳೆ 37 ಪ್ರಕರಣಗಳು ದಾಖಲಾಗಿದ್ದು, 12 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 1,07,53,577 ರೂ.ಕಳವು ನಡೆದಿದ್ದು, 1,81,098 ರೂ.ವಶಕ್ಕೆ ಪಡೆಯಲಾಗಿದೆ. 2 ಮನೆಕಳವು ನಡೆದಿದ್ದು, 1 ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ. 2,14,000 ರೂ.ಕಳವು ನಡೆದಿದ್ದು, 1,000 ರೂ.ವಶಕ್ಕೆ ಪಡೆಯಲಾಗಿದೆ. 42 ಇತರ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, 26 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 83,82,726 ರೂ.ಕಳವು ನಡೆದಿದ್ದು, 19,23,100 ರೂ.ವಶಕ್ಕೆ ಪಡೆಯಲಾಗಿದೆ.

2020:

2020ರಲ್ಲಿ ಹಗಲು ಹೊತ್ತಿನಲ್ಲಿ ಮನೆಬಾಗಿಲು ಒಡೆದು ಕಳ್ಳತನ ಮಾಡಿರುವ ಬಗ್ಗೆ 3 ಪ್ರಕರಣಗಳು ದಾಖಲಾಗಿದ್ದು, 1 ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ. 3,00,700 ರೂ. ಕಳ್ಳತನ ನಡೆದಿದ್ದು, 85 ಸಾವಿರ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿವೇಳೆ 28 ಪ್ರಕರಣಗಳು ದಾಖಲಾಗಿದ್ದು, 15 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 84,11,121 ರೂ.ಕಳವು ನಡೆದಿದ್ದು, 14,26,000 ವಶಕ್ಕೆ ಪಡೆದುಕೊಳ್ಳಲಾಗಿದೆ. 7 ಮನೆಕಳ್ಳತನ ಪ್ರಕರಣ ದಾಖಲಾಗಿದ್ದು, 7,36,700 ರೂ. ಕಳ್ಳತನ ನಡೆದಿದ್ದು, ಇವೆಲ್ಲವನ್ನೂ ಪತ್ತೆಹಚ್ಚಲಾಗಿದೆ. 35 ಇತರ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, 22 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 13,74,0255 ರೂ.ಕಳವು ನಡೆದಿದ್ದು, 44,53,055 ರೂ.ಪತ್ತೆ ಹಚ್ಚಲಾಗಿದೆ.

2019:

2019ರಲ್ಲಿ ಹಗಲು ಹೊತ್ತಿನಲ್ಲಿ ಮನೆಬಾಗಿಲು ಒಡೆದು ಕಳ್ಳತನ ಮಾಡಿರುವ ಬಗ್ಗೆ 12 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 5 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 41,46,900 ರೂ. ಕಳವಾಗಿತ್ತು. ಇದರಲ್ಲಿ 23,35,500 ರೂ.ಪತ್ತೆ ಹಚ್ಚಲಾಗಿದೆ. ರಾತ್ರಿ ವೇಳೆ 44 ಪ್ರಕರಣಗಳು ದಾಖಲಾಗಿದ್ದು, 19 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 98,71,697 ರೂ.ಕಳ್ಳತನ ನಡೆದಿದ್ದು, 23,98,596 ರೂ.ವಶಕ್ಕೆ ಪಡೆಯಲಾಗಿದೆ. 10 ಮನೆ ಕಳ್ಳತನ ಪ್ರಕರಣ ದಾಖಲಾಗಿದ್ದು, 6 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 19,45,155 ರೂ.ಕಳವು ನಡೆದಿದ್ದು, 12,57,155 ರೂ.ವಶಕ್ಕೆ ಪಡೆಯಲಾಗಿದೆ. 56 ಇತರ ಕಳವು ಪ್ರಕರಣಗಳು ದಾಖಲಾಗಿದ್ದು, 28 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 59,93,563 ರೂ.ಕಳವು ನಡೆದಿದ್ದು, 34,97,116 ರೂ.ವಶಕ್ಕೆ ತೆಗೆದುಕೊಳ್ಳಲಾಗಿದೆ.

ನವೆಂಬರ್‌ನ‌ಲ್ಲಿ ಅಧಿಕ ಕಳವು  :

ನವೆಂಬರ್‌ನಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಹಲವು ಪ್ರಕರಣ ನಡೆದಿದೆ. ಮಣಿಪಾಲ…-ಇನ್‌ ಹೊಟೇಲ್‌ನಲ್ಲಿ ಗ್ರಾಹಕರೊಬ್ಬರಿಗೆ ಸೇರಿದ 1,07,000 ರೂ.ಮೌಲ್ಯದ ಡೈಮಂಡ್‌ ಇರುವ ಚಿನ್ನದ ಉಂಗುರ ಹಾಗೂ ಗುಂಡಿಬೈಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು 3,70,400 ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೆ ಲ್ಯಾಪ್‌ಟಾಪ್‌ ಕಳವು,ವಾಹನ ಕಳ್ಳತನ ಪ್ರಕರಣಗಳೂ ಜಿಲ್ಲಾ ದ್ಯಂತ ವರದಿಯಾಗಿದೆ.

ಜಿಲ್ಲಾದ್ಯಂತ ಕಳ್ಳತನ ಪ್ರಕರಣವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಆಯಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಗಸ್ತು ವಾಹನಗಳೂ ಸಕ್ರಿಯವಾಗಿವೆ. ಈಗಾಗಲೇ ಹಲವಾರು ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಎನ್‌.ವಿಷ್ಣುವರ್ಧನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.