ಉದ್ಯಾವರ ಕಡೆತೋಟ ಬಳಿ ಹೆಚ್ಚಿದ ಕಡಲಕೊರೆತ
Team Udayavani, Jul 2, 2017, 3:45 AM IST
ಮಲ್ಪೆ: ವಾರದ ಹಿಂದೆ ಕುತ್ಪಾಡಿ ಪಡುಕರೆಯಲ್ಲಿ ಕಡಲು ಕೊರೆತ ಕಾಣಿಸಿಕೊಂಡಿದ್ದರೆ ಇದೀಗ ಇಲ್ಲಿಂದ ದಕ್ಷಿಣಕ್ಕೆ ಸುಮಾರು 3 ಕಿ.ಮೀ. ದೂರದ ಉದ್ಯಾವರ ಪಡುಕರೆ ಕಡೆತೋಟ, ಗೆಸ್ಟ್ಹೌಸ್ ಬಳಿ ಕಡಲಕೊರೆತ ತೀವ್ರಗೊಳ್ಳುತ್ತಿದೆ.
ಕಳೆದ ಮೂರ್ನಾಲ್ಕು ದಿನದಿಂದ ಗಾಳಿ- ಮಳೆ – ಅಲೆಗಳ ಅಬ್ಬರಕ್ಕೆ ಈ ಪ್ರದೇಶದಲ್ಲಿ ಭಾರೀ ಕೊರೆತ ಉಂಟಾಗಿದೆ. ಬೃಹತ್ ಗಾತ್ರದ ಅಲೆಗಳು ರಸ್ತೆಗೆ ಅಪ್ಪಳಿಸುತ್ತಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಕೆಲವೆಡೆ ಅಲೆಗಳು ತಡೆಗೋಡೆಯನ್ನು ಕೊರೆದು ಮುನ್ನುಗ್ಗಿ ಬರುತ್ತಿವೆ. ಬೃಹತ್ ಅಲೆಗಳು ಕಾಂಕ್ರೀಟ್ ರಸ್ತೆಗೆ ಅಪ್ಪಳಿಸುತ್ತಿದ್ದು ರಸ್ತೆ ಅಪಾಯದ ಭೀತಿಯಲ್ಲಿದೆ. ಸಮೀಪದಲ್ಲಿರುವ ವಿದ್ಯುತ್ ಕಂಬ ಸಮುದ್ರಪಾಲಾಗಿದೆ.
ಈ ಹಿಂದೆ ತಡೆಗೋಡೆಗೆ ಹಾಕಿದ ಕಲ್ಲುಗಳು ಸಮುದ್ರ ಸೇರುತ್ತಿವೆ. ಇಷ್ಟಾದರೂ ತಾತ್ಕಾಲಿಕವಾಗಿ ಕಲ್ಲು ಹಾಕುವ ಕೆಲಸ ಮಾತ್ರ ಇನ್ನೂ ನಡೆದಿಲ್ಲ ಎಂದು ಸ್ಥಳೀಯರು ದೂರಿಕೊಂಡಿದ್ದಾರೆ. ಕುತ್ಪಾಡಿ ಪಡುಕರೆಯಲ್ಲಿ ನಿರಂತರ ಕಲ್ಲು ಹಾಕಿದ ಹಿನ್ನೆಲೆಯಲ್ಲಿ ಕೊರೆತದ ಪ್ರಮಾಣ ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?