ಹೆಚ್ಚಿದ ಮತದಾನ: ಲಾಭ ಯಾರಿಗೆ?


Team Udayavani, Apr 27, 2019, 11:16 AM IST

udupi-vote..tdy-6

ಉಡುಪಿ, ಎ. 26: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಮತದಾನ ಸಾರ್ವಕಾಲಿಕ ದಾಖಲೆಯಾಗಿ ಶೇ. 75.91 ಮತದಾನವಾಗಿದೆ. 2014ರ ಚುನಾವಣೆಗೆ ಹೋಲಿಸಿದರೆ ಆಗಿನಕ್ಕಿಂತ (ಶೇ.74.46) ಈಗ ಶೇ.1.45 ಮತದಾನ ಹೆಚ್ಚಳವಾಗಿದೆ.

ವಿಧಾನಸಭಾವಾರು ಮತದಾನ:

ಕುಂದಾಪುರದಲ್ಲಿ ಈ ಬಾರಿ ಶೇ.77.66 ಮತದಾನವಾಗಿದ್ದರೆ 2014ರ ಲೋಕಸಭಾ ಚುನಾವಣೆಯಲ್ಲಿ ಶೇ.76.25, 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ.79.47 ಮತದಾನವಾಗಿತ್ತು.

ಉಡುಪಿಯಲ್ಲಿ ಈ ಬಾರಿ ಶೇ.78.77 ಮತದಾನವಾದರೆ, 2014ರ ಚುನಾವಣೆ ಯಲ್ಲಿ ಶೇ.76.82, 2018ರಲ್ಲಿ ಒಟ್ಟು ಶೇ.78.28 ಮತದಾನವಾಗಿತ್ತು.

ಕಾಪುವಿನಲ್ಲಿ ಈ ಬಾರಿ ಶೇ. 77.89 ಮತದಾನವಾದರೆ, 2014ರಲ್ಲಿ ಶೇ.76.57, ವಿಧಾನಸಭೆ ಚುನಾವಣೆಯಲ್ಲಿ ಶೇ.78.93 ಮತದಾನವಾಗಿತ್ತು.

ಕಾರ್ಕಳದಲ್ಲಿ ಈ ಬಾರಿ ಶೇ. 78.39 ಮತದಾನವಾದರೆ, 2014ರಲ್ಲಿ ಶೇ.78.98, ವಿಧಾನಸಭೆ ಚುನಾವಣೆಯಲ್ಲಿ ಶೇ.80.61 ಮತದಾನವಾಗಿತ್ತು.

ಶೃಂಗೇರಿಯಲ್ಲಿ ಈ ಬಾರಿ ಶೇ. 78.86 ಮತದಾನವಾದರೆ, 2014ರಲ್ಲಿ ಶೇ.77.22, ವಿಧಾನಸಭೆ ಚುನಾವಣೆಯಲ್ಲಿ ಶೇ.82.55 ಮತದಾನವಾಗಿತ್ತು.

ಮೂಡಿಗೆರೆಯಲ್ಲಿ ಈ ಬಾರಿ ಶೇ. 74.79 ಮತದಾನವಾದರೆ, 2014ರಲ್ಲಿ ಶೇ.72.27, ವಿಧಾನಸಭೆ ಚುನಾವಣೆಯಲ್ಲಿ ಒಟ್ಟು ಶೇ.77.15 ಮತದಾನ ವಾಗಿತ್ತು.

ಚಿಕ್ಕಮಗಳೂರಿನಲ್ಲಿ ಈ ಬಾರಿ ಶೇ. 69.45 ಮತದಾನವಾದರೆ, 2014ರಲ್ಲಿ ಶೇ.67.43, ವಿಧಾನಸಭೆ ಚುನಾವಣೆ ಯಲ್ಲಿ ಶೇ.74.52 ಮತದಾನವಾಗಿತ್ತು.

ತರಿಕೆರೆಯಲ್ಲಿ ಈ ಬಾರಿ ಶೇ.72.18 ಮತದಾನವಾದರೆ, 2014ರಲ್ಲಿ ಶೇ. 70,88, ವಿಧಾನಸಭೆ ಚುನಾವಣೆಯಲ್ಲಿ ಒಟ್ಟು ಶೇ.81.78 ಮತದಾನವಾಗಿತ್ತು.

ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕುಂದಾಪುರ, ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ, ಮೂಡಿಗೆರೆ, ಕಾಪುವಿನಲ್ಲಿ ವಿಧಾನಸಭೆಗಿಂತ ಕಡಿಮೆ, ಲೋಕಸಭೆಗಿಂತ ಹೆಚ್ಚು ಮತದಾನವಾಗಿದೆ. ಕಾರ್ಕಳದಲ್ಲಿ ಎರಡೂ ಚುನಾವಣೆಗಿಂತ ಕಡಿಮೆ ಮತದಾನವಾಗಿದೆ. ಉಡುಪಿಯಲ್ಲಿ ಮಾತ್ರ ಎರಡೂ ಚುನಾವಣೆಗಿಂತ ಈ ಬಾರಿ ಹೆಚ್ಚಿನ ಮತದಾನವಾಗಿದೆ. ಸಾಮಾನ್ಯವಾಗಿ ಮತದಾರರು ಲೋಕಸಭೆ, ವಿಧಾನಸಭೆ, ಜಿ.ಪಂ., ತಾ.ಪಂ., ಗ್ರಾ.ಪಂ.ಗಳಲ್ಲಿ ಕೆಳಗಿನ ಹಂತದ ಚುನಾವಣೆಗೆ ಬಂದಾಗ ಹೆಚ್ಚು ತೊಡಗಿಸಿಕೊಳ್ಳುತ್ತಾರೋ? ಅಥವಾ ಲೋಕಸಭೆಗಿಂತ ಚಿಕ್ಕ ಭೌಗೋಳಿಕ ಪ್ರದೇಶ ವ್ಯಾಪ್ತಿಯ ವಿಧಾನಸಭೆಗೆ ಜನರು ಹೆಚ್ಚು ಉತ್ಸುಕರಾಗಿರುತ್ತಾರೋ ಎಂದು ಸಂಶಯ ಮೂಡಿಬರುತ್ತದೆ.

ಶೃಂಗೇರಿಯಲ್ಲಿ ಶೇ. 78.86 ಮತದಾನ ವಾಗಿದ್ದು ಪ್ರಥಮ ಸ್ಥಾನದಲ್ಲಿದೆ. ಶೇ. 69.45 ಮತದಾನವಾಗಿರುವ ಚಿಕ್ಕಮಗಳೂರು ಕೊನೆಯ ಸ್ಥಾನದಲ್ಲಿದೆ. 2014ರ ಚುನಾವಣೆಯಲ್ಲಿ ಕಾರ್ಕಳ ಶೇ. 78.98 ಮತಗಳಿಂದ ಮೊದಲ ಸ್ಥಾನದ ಲ್ಲಿತ್ತು ಮತ್ತು ಚಿಕ್ಕಮಗಳೂರು ಶೇ.67.43 ಮತಗಳಿಂದ ಕೊನೆಯ ಸ್ಥಾನದಲ್ಲಿತ್ತು.

ಬಿಜೆಪಿ ವರಸೆ:

ಹೊಸ ಮತದಾರರು ಮೋದಿ ಪರವಾಗಿ ಹೆಚ್ಚು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಎಲ್ಲ ಕಡೆ ಕಾರ್ಯ ಕರ್ತರು ಒಮ್ಮನಸ್ಸಿನಿಂದ ಕೆಲಸ ಮಾಡಿರು ವುದು, ಎಲ್ಲಕ್ಕಿಂತ ಮುಖ್ಯವಾಗಿ ದೇಶ ಉಳಿಸಲು ನರೇಂದ್ರ ಮೋದಿ ಸಮರ್ಥ ನಾಯಕನೆಂದು ಮತದಾರರು ಅರಿತಿರು ವುದು ನಮಗೆ ಪೂರಕ. ಇದುವರೆಗೆ ಮತದಾನದಿಂದ ದೂರು ಉಳಿಯುತ್ತಿದ್ದ ಶಿಕ್ಷಿತ ಮತದಾರರು ಬಹಳ ಬೇಗ ಬಂದು ಮತ ಚಲಾಯಿಸಿದ್ದಾರೆ. ಯಾವಾಗ ಹೆಚ್ಚು ಮತದಾನವಾಗುತ್ತದೋ ಆಗ ಬಿಜೆಪಿಗೇ ಗೆಲುವಾಗಿದೆ ಎನ್ನುವುದು ನಮ್ಮ ಅನುಭವ ಎಂದು ಬಿಜೆಪಿ ನಾಯಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜೆಡಿಎಸ್‌- ಕಾಂಗ್ರೆಸ್‌ ವರಸೆ:

ಮೊಗವೀರ ಸಮುದಾಯದವರು ತಮ್ಮ ಅಭ್ಯರ್ಥಿಗೆ ಹೆಚ್ಚಿನ ಮತದಾನ ಮಾಡುವುದರಿಂದ ಉಡುಪಿ, ಕಾಪು, ಕುಂದಾಪುರ ಕ್ಷೇತ್ರದಲ್ಲಿ ತಾವೇ ಮುಂದಿದ್ದು ಉಡುಪಿ ನಗರ ಭಾಗದಲ್ಲಿ ಮಾತ್ರ ಕಡಿಮೆಯಾದರೂ ಬ್ರಹ್ಮಾವರ ಭಾಗದಲ್ಲಿ ಮುಂದಿದ್ದೇವೆ. ಕಾರ್ಕಳ ಸಮಸಮವಾಗಿದ್ದೇವೆ. ತರಿಕೆರೆ ಕ್ಷೇತ್ರದಲ್ಲಿ ಗಂಗಾಮತಸ್ಥರು ದೊಡ್ಡ ಸಂಖ್ಯೆಯಲ್ಲಿರುವುದು ನಮಗೆ ಹೆಚ್ಚಿನ ಬಲ ಸಿಗಲಿದೆ. ಚಿಕ್ಕಮಗಳೂರು ಕ್ಷೇತ್ರ ಹೊರತುಪಡಿಸಿ ತರಿಕೆರೆ, ಮೂಡಿಗೆರೆ, ಶೃಂಗೇರಿಯಲ್ಲಿ ಅಭ್ಯರ್ಥಿ ಹೊಸಮುಖ ವಾಗಿರುವುದರಿಂದ, ಜೆಡಿಎಸ್‌ ಪ್ರಬಲ ವಾಗಿರುವುದರಿಂದ ಹೆಚ್ಚಿನ ಲಾಭ ತರಲಿದೆ ಎಂದು ಕಾಂಗ್ರೆಸ್‌- ಜೆಡಿಎಸ್‌ ನಾಯಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.