ಎರಡು ವರ್ಷದಲ್ಲಿ 13 ದೇಗುಲಗಳಲ್ಲಿ ಕಳ್ಳತನ

ಹೆಚ್ಚುತ್ತಿದೆ ದೇವಸ್ಥಾನಗಳ ಕಳವು ಪ್ರಕರಣ

Team Udayavani, Feb 28, 2020, 5:41 AM IST

2702KDPP9

ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಹೆಚ್ಚುತ್ತಿರುವ ಕಳವು ಪ್ರಕರಣಗಳು ದೇಗುಲಗಳ ಆಡಳಿತ ಮಂಡಳಿಗಳನ್ನು ಮಾತ್ರವಲ್ಲದೆ ಆಸ್ತಿಕ ಸಮುದಾಯದ ತೀವ್ರ ಆತಂಕಕ್ಕೂ ಕಾರಣವಾಗಿದೆ. ಕಳ್ಳರ ಸುಳಿವೂ ಪತ್ತೆಯಾಗದೇ ಇರುವುದು ಪೊಲೀಸರ ಮೇಲೆ ಇನ್ನಷ್ಟು ಒತ್ತಡವನ್ನೂ ಸೃಷ್ಟಿಸಿದೆ.

ಕುಂದಾಪುರ: ಕಳೆದ ಒಂದು ವಾರದೊಳಗೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯ 3 ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಇನ್ನು 2018ರಿಂದ 2020ರ ಫೆ. 26ರ ವರೆಗೆ ಬರೋಬ್ಬರಿ 13 ದೇಗುಲಗಳಿಗೆ ಕಳ್ಳರು ಕನ್ನಹಾಕಿದ್ದು, ಇದರಲ್ಲಿ ಈ ವರೆಗೆ ಯಾವುದೇ ಪ್ರಕರಣ ದಲ್ಲಿಯೂ ಕಳ್ಳರ ಸುಳಿವು ಮಾತ್ರ ಪತ್ತೆಯೇ ಆಗಿಲ್ಲ.

2,035 ಚದರ ಕಿ.ಮೀ. ವ್ಯಾಪ್ತಿಯ ಕುಂದಾಪುರ ಉಪ ವಿಭಾಗದ 7 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ 2018 ರಿಂದ ಈವರೆಗೆ ಒಟ್ಟು 13 ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಆದರೆ ಇದರಲ್ಲಿ ಯಾವುದೇ ಪ್ರಕರಣದಲ್ಲಿಯೂ ಕಳ್ಳರ ಬಗ್ಗೆ ಮಾತ್ರ ಯಾವುದೇ ಸುಳಿವು ಸಿಗದಿರುವುದು ವಿಪರ್ಯಾಸವೇ ಸರಿ.

ಯಾವ್ಯಾವ ಠಾಣೆಗಳಲ್ಲಿ?
ಗಂಗೊಳ್ಳಿ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಹೊಸಾಡು, 2019ರಲ್ಲಿ ತ್ರಾಸಿಯ ಚೌಡೇಶ್ವರಿ, 2020ರಲ್ಲಿ ಆಲೂರು ಗ್ರಾಮದ ಮಹಾಲಿಂಗೇಶ್ವರ ಹಾಗೂ ಮಾರಿಕಾಂಬಾ ದೇವಸ್ಥಾನ, ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ಮುದೂರಿನ ಬ್ರಹ್ಮಲಿಂಗೇಶ್ವರ ದೇಗುಲ, ಬೈಂದೂರು ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ಬಿಜೂರು ದುರ್ಗಾಪರಮೇಶ್ವರೀ ಅರೆಕಲ್ಲು, ಉಪ್ಪುಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, 2020ರಲ್ಲಿ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇಗುಲ, ಕುಂದಾಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನ, ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ತಲ್ಲೂರು ಸಮೀಪದ ರಾಜಾಡಿ ದೇಗುಲ, ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ 2018 ರಲ್ಲಿ ಶಾಂತಕೇರಿ ದೇವಸ್ಥಾನ ಕೆರೆಕಟ್ಟೆ, ಹೊಸಂಗಡಿಯ ವಿರುಪಾಕ್ಷ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ ನಡೆದಿದೆ.

2018ರಿಂದ ಈ ವರೆಗೆ ಶಂಕರನಾರಾಯಣ ಪೊಲೀಸ್‌ ಠಾಣಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಯಾವುದೇ ಕಳ್ಳತನ ಪ್ರಕರಣಗಳು ನಡೆದಿಲ್ಲದಿರುವುದು ಸಂತಸಕರ ಸಂಗತಿ.

ವಾರದಲ್ಲಿ 3 ಪ್ರಕರಣ
ಫೆ. 21ರಂದು ಆಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ, ಫೆ. 22ರಂದು ಮಾರಿಕಾಂಬಾ ದೇವಸ್ಥಾನ, ಫೆ. 25 ರಂದು ನಾವುಂದದ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಹೀಗೆ ಕೇವಲ ಒಂದೇ ವಾರದೊಳಗೆ 3 ದೇವಸ್ಥಾಗಳಲ್ಲಿ ಕಳ್ಳತನ ಪ್ರಕರಣ ನಡೆದಿದೆ.

2016ರಲ್ಲಿ ಇತಿಹಾಸ ಪ್ರಸಿದ್ಧ ಸೌಕೂರು ದೇವಸ್ಥಾನಗಳಲ್ಲಿ ಒಂದೇ ವರ್ಷದಲ್ಲಿ ಎರಡೆರಡು ಬಾರಿ ಕಳ್ಳತನ ಪ್ರಕರಣ ನಡೆದಿದ್ದರೂ, ಕಳ್ಳರ ಸುಳಿವು ಮಾತ್ರ ಈವರೆಗೆ ಪತ್ತೆಯಾಗಲೇ ಇಲ್ಲ.

ಸಿಸಿಟಿವಿ ಅಳವಡಿಕೆಗೆ ಮನವಿ
ಇತ್ತೀಚಿನ ದಿನಗಳಲ್ಲಿ ದೇಗುಲಗಳ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಆಗದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಕುಂದಾಪುರ ಪೊಲೀಸ್‌ ಉಪವಿಭಾಗದ ಸುಮಾರು 170 ದೇವಸ್ಥಾನಗಳ ಆಡಳಿತ ಮಂಡಳಿಯವರ ಸಭೆಯನ್ನು ಕಳೆದ ರವಿವಾರ ಕುಂದಾಪುರದಲ್ಲಿ ನಡೆಸಲಾಯಿತು. ದೇವಸ್ಥಾನಗಳಿಗೆ ಸಿಸಿ ಕೆಮೆರಾಗಳನ್ನು ಅಳವಡಿಸಿಕೊಳ್ಳುವ ಬಗ್ಗೆ, ಸೆಕ್ಯುರಿಟಿ ಗಾರ್ಡ್‌ಗಳನ್ನು ನೇಮಿಸಿಕೊಳ್ಳುವ ಕುರಿತು, ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನಾಭರಣಗಳನ್ನು ಸೇಫ್ ಲಾಕರ್‌ನಲ್ಲಿ ಇಡುವ ಕುರಿತು ಮಾಹಿತಿ ನೀಡಲಾಯಿತು. ಸೈನ್‌ಇನ್‌ ಸೆಕ್ಯುರಿಟಿ ಸಂಸ್ಥೆಯವರು ಈಗಗಾಲೇ ಸೇಫ್ ಕುಂದಾಪುರ ಎಂಬ ಪರಿಕಲ್ಪನೆಯಲ್ಲಿ ದೇವಸ್ಥಾನಗಳಿಗೂ ಸಿಸಿಟಿವಿ ಅಳವಡಿಸಿ ಎನ್ನುವುದಾಗಿ ಸಭೆಯಲ್ಲಿ ಕುಂದಾಪುರ ಎಎಸ್‌ಪಿ ಹರಿರಾಮ್‌ ಶಂಕರ್‌ ಮನವಿ ಮಾಡಿಕೊಂಡಿದ್ದರು.

ಮುಂಜಾಗ್ರತಾ ಕ್ರಮ ಅವಶ್ಯಕ
ದೇವಸ್ಥಾನಗಳಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಗೆ ಪ್ರಮುಖ ಕಾರಣ ದೇವಸ್ಥಾನದ ಆಡಳಿತ ಮಂಡಳಿಯವರು ಸುರಕ್ಷತೆ ಬಗ್ಗೆ ತೀರಾ ನಿರ್ಲಕ್ಷé ವಹಿಸುತ್ತಿರುವುದು ಹಾಗೂ ಕಳ್ಳತನ ಪ್ರಕರಣ ನಡೆದ ಬಳಿಕ ಕಳ್ಳರ ಪತ್ತೆ ಕಾರ್ಯಾಚರಣೆಯನ್ನು ಗಂಭೀರವಾಗಿ ಪರಿಗಣಿಸದೇ ಇರುವುದು. ಇನ್ನು ಎಲ್ಲ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡುವುದು ಅಷ್ಟು ಸುಲಭವಲ್ಲ. ಕೆಲ ದೇಗುಲಗಳ ವಾರ್ಷಿಕ ಆದಾಯ ಅಲ್ಲಿನ ಪೂಜೆ, ಇನ್ನಿತರ ವೆಚ್ಚಕ್ಕೆ ಸಾಕಾಗುವುದಿಲ್ಲ. ಇನ್ನು ಸಿಸಿಟಿವಿ ಅಳವಡಿಸಿದರೆ ಹೇಗೆ ನಿರ್ವಹಣೆ ಮಾಡುವುದು.
– ಬಿ. ಅಪ್ಪಣ್ಣ ಹೆಗ್ಡೆ, ಧರ್ಮದರ್ಶಿಗಳು, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಪೊಲೀಸ್‌ ಇಲಾಖೆಯಿಂದ ಈಗಾಗಲೇ ಕುಂದಾಪುರದಲ್ಲಿ 170 ದೇವಸ್ಥಾನಗಳ ಪ್ರಮುಖರ ಸಭೆ ಕರೆದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಸೂಚನೆ ನೀಡಲಾಗಿದೆ. ಇನ್ನು ಕಳ್ಳತನ ಪ್ರಕರಣಗಳ ಕುರಿತು ಸುಳಿವು ಪತ್ತೆಗೆ ಇಲಾಖೆಯಿಂದ ಎಲ್ಲ ರೀತಿಯಿಂದಲೂ ಪ್ರಯತ್ನ ಮಾಡಲಾಗುತ್ತಿದೆ. ಇತ್ತೀಚೆಗೆ ನಡೆದ 3 ಕಳವು ಪ್ರಕರಣಗಳನ್ನು ತನಿಖೆ ಮಾಡಲಾಗುತ್ತಿದೆ.
– ಕುಮಾರಚಂದ್ರ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ, ಉಡುಪಿ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.