“ಅಮೃತ ಸರೋವರ’ಗಳಲ್ಲಿ ಸ್ವಾತಂತ್ರ್ಯೋತ್ಸವ!


Team Udayavani, Jun 26, 2022, 6:35 AM IST

“ಅಮೃತ ಸರೋವರ’ಗಳಲ್ಲಿ ಸ್ವಾತಂತ್ರ್ಯೋತ್ಸವ!

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಜಿಲ್ಲಾಡಳಿತ, ಜಿ.ಪಂ. ಸಿದ್ಧತೆ ಮಾಡಿಕೊಳ್ಳುತ್ತಿವೆ.

ಆಗಸ್ಟ್‌ 11ರಿಂದ 15ರ ವರೆಗೆ ಮನೆ-ಮನೆಯ ಮೇಲೂ ರಾಷ್ಟ್ರಧ್ವಜ ಹಾರಿ ಸಲು ಈಗಾಗಲೇ ಗ್ರಾಮೀಣಾಭಿ ವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ನಿರ್ದೇಶನ ನೀಡಿವೆ. ಈ ನಿಟ್ಟಿನಲ್ಲಿ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ತಯಾರಿ ಆಗುತ್ತದೆ. ವಿವಿಧ ಸಂಘ-ಸಂಸ್ಥೆಗಳು, ಶಾಲೆ ಕಾಲೇಜುಗಳು, ಸಾರ್ವಜನಿ ಕರ ಸಹಕಾರವನ್ನು ಪಡೆದು ಕೊಳ್ಳಲಾಗುತ್ತಿದೆ.

75 ಕೆರೆ ಅಭಿವೃದ್ಧಿ
ಕೇಂದ್ರ ಸರಕಾರದ ಅಮೃತ ಸರೋವರ ಯೋಜನೆಯಡಿ ಜಿಲ್ಲೆಯ 75 ಕೆರೆಗಳನ್ನು ಅಭಿವೃದ್ಧಿಗೊಳಿಸಲಿದ್ದು, ಒಂದು ಎಕರೆ ವಿಸ್ತೀರ್ಣದ ಕೆರೆ, ಕಲ್ಯಾಣಿಗಳನ್ನು ಗುರುತಿಸಲಾಗುತ್ತಿದೆ. ಆಗಸ್ಟ್‌ 15ರ ಒಳಗೆ ಕನಿಷ್ಠ 15 ಕೆರೆಗಳನ್ನು ಅಭಿವೃದ್ಧಿಪಡಿಸುವುದು ಒಂದು ಭಾಗವಾದರೆ, ಗುರುತಿಸಿರುವ 75 ಕೆರೆಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ. ಇದಕ್ಕೆ ಪೂರಕ ವಾಗಿ ಸಂಬಂಧಪಟ್ಟ ಗ್ರಾ.ಪಂ.ಗಳಿಗೂ ಶೀಘ್ರ ನಿರ್ದೇಶನವೂ ಹೋಗಲಿದೆ.

ಇನ್ನಷ್ಟು ಕಾರ್ಯಕ್ರಮಕ್ಕೆ ರೂಪರೇಖೆ
ಸ್ವಾತಂತ್ರ್ಯದ ಅಮೃತ ಮಹೋತ್ಸ ವದ ಹಿನ್ನೆಲೆಯಲ್ಲಿ ಹೊಸ ಹೊಸ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಯೋಚನೆ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಏಕರೂಪ ಕಾರ್ಯಕ್ರಮ ನಡೆಸುವ ಬಗ್ಗೆಯೂ ಚಿಂತನೆಯಾಗುತ್ತಿದೆ. ಸಾಧಕರನ್ನು ಸಮ್ಮಾ ನಿಸುವುದು, ಸ್ವಾತಂತ್ರ್ಯಕ್ಕೆ ಪ್ರೇರಣೆ ನೀಡಿದ ಸ್ಥಳಗಳ ಸ್ಮರಣೆ ಸಹಿತ ವಿನೂತನವಾಗಿ ಕಾರ್ಯಕ್ರಮ ನಡೆಸುವ ಬಗ್ಗೆ ರೂಪರೇಖೆ ಸಿದ್ಧವಾಗುತ್ತಿದೆ.

ಸಭೆಯಲ್ಲಿ ತೀರ್ಮಾನ
ಜಿಲ್ಲೆಯಲ್ಲಿ ವಿನೂತನವಾಗಿ ಯಾವ ಕಾರ್ಯಕ್ರಮ ನಡೆಸಬೇಕು ಎಂಬ ನಿರ್ಧಾರ ಇನ್ನೂ ಆಗಿಲ್ಲ. ಜುಲೈಯಲ್ಲಿ ಪೂರ್ವಸಿದ್ಧತೆ ಸಭೆ ನಡೆಸಿ ನಿರ್ಧಾರ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.

ಕೇಂದ್ರ ಸರಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಮೃತ ಸರೋವರ ಯೋಜನೆಯಡಿ 75 ಕೆರೆಗಳನ್ನು ಗುರುತಿಸಿ, ಅಭಿವೃದ್ಧಿಪಡಿಸಲಾಗುವುದು. ಆಗಸ್ಟ್‌ 15ರೊಳಗೆ 15 ಕೆರೆಗೆಳನ್ನು ಅಭಿವೃದ್ಧಿಪಡಿಸಿ, ಗುರುತಿಸಿರುವ 75 ಕೆ‌ರೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದೇವೆ.
– ಪ್ರಸನ್ನ ಎಚ್‌.,
ಜಿ.ಪಂ. ಸಿಇಒ, ಉಡುಪಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.